



ಕಾವೇರಿ ನೀರಿನ ವಿಚಾರದ ಕರ್ನಾಟಕ ಬಂದ್ ಗೆ ಇಂದು ನೀರಸ ಪ್ರತಿಕ್ರೀಯೆ ವ್ಯಕ್ತವಾಗಿದೆ. ಕನ್ನಡ ಸಂಘಟನೆಗಳು ಕರೆ ಕೊಟ್ಟಿದ್ದ ಕರ್ನಾಟಕ ಬಂದ್ ಭಾಗಶ: ಯಶಸ್ವಿಯಾಗಿದ್ದು ಹಳೆ ಮೈಸೂರು ಕರ್ನಾಟಕ ಬಿಟ್ಟರೆ ಇತರ ಪ್ರದೇಶಗಳಲ್ಲಿ ಬಂದ್ ವಿಫಲವಾಗಿದೆ.

ಸಿದ್ಧಾಪುರ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಂದ್ ವಿಫಲವಾಗಿದೆ. ಆದರೆ ಬಹುತೇಕ ತಾಲೂಕುಗಳಲ್ಲಿ ಕನ್ನಡ ಪರ ಸಂಘಟನೆಗಳು ಮೆರವಣಿಗೆ ಮಾಡಿ, ಮನವಿ ಸಲ್ಲಿಸುವ ಮೂಲಕ ತಮ್ಮ ಅಸ್ಥಿತ್ವ ಸಾಬೀತು ಮಾಡಿವೆ.
ಸಿದ್ಧಾಪುರದಲ್ಲಿ ನಾಡದೇವಿ ಹೋರಾಟ ಸಮೀತಿ ನೇತೃತ್ವದಲ್ಲಿ ಪ್ರತಿಭಟನೆ ನಡೆದು ಈ ಪ್ರತಿಭಟನೆ, ಮನವಿ ಅರ್ಪಣೆ ವೇಳೆ ಅನೇಕ ಸಂಘಟನೆಗಳು ಭಾಗವಹಿಸಿದ್ದವು.
ಕರವೇ ಜನಧ್ವನಿ ಘಟಕ ಬಂದ್ ಬೆಂಬಲಿಸಿ ನಗರದಲ್ಲಿ ಮೆರವಣಿಗೆ ನಡೆಸಿ,ತಮಿಳುನಾಡಿನ ಪ್ರತಿಕೃತಿ ದಹಿಸಿತು. ತಹಸಿಲ್ಧಾರರ ಮೂಲಕ ರಾಜ್ಯಪಾಲರು ಮತ್ತು ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿ ಕರ್ನಾಟಕಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸುವ ಮೂಲಕ ತನ್ನ ಶಕ್ತಿ ಪ್ರದರ್ಶನ ಮಾಡಿತು.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
