


ಸಿದ್ದಾಪುರ
ತಾಲೂಕಿನ ವಾಜಗದ್ದೆಯ ದುರ್ಗಾವಿನಾಯಕ ದೇವಸ್ಥಾನದ ಸಭಾಂಗಣದಲ್ಲಿ ತೋಟಗಾರಿಕಾ ಇಲಾಖೆ, ಜಿಪಂ ಹಾಗೂ ದುರ್ಗಾವಿನಾಯಕ ಕೃಷಿಕ ಯುವಕ ಸಂಘ ವಾಜಗದ್ದೆ ಇವರ ಆಶ್ರಯದಲ್ಲಿ ಅಡಕೆಯಲ್ಲಿ ಎಲೆ ಚುಕ್ಕೆ ರೋಗದ ಕುರಿತು ವಿಚಾರ ಸಂಕಿರಣ ಅಕ್ಟೋಬರ್ ೬ರಂದು ಬೆಳಗ್ಗೆ ೧೦ರಿಂದ ನಡೆಯಲಿದೆ.

ಶಾಸಕ ಭೀಮಣ್ಣ ನಾಯ್ಕ ಉದ್ಘಾಟಿಸುವರು. ಹಾರ್ಸಿಕಟ್ಟಾ ಗ್ರಾಪಂ ಉಪಾಧ್ಯಕ್ಷ ಸಿದ್ಧಾರ್ಥ ದೇಸಾಯಿ ಗೌಡರ್ ಅಧ್ಯಕ್ಷತೆವಹಿಸುವರು. ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ಬಿ.ಪಿ.ಸತೀಶ ಶಿರಸಿ, ಗ್ರಾಪಂ ಸದಸ್ಯ ಅನಂತ ಹೆಗಡೆ ಹೊಸಗದ್ದೆ, ವಿಶಾಲಾಕ್ಷಿ ಎಂ. ಹಸ್ಲರ್, ಹಾರ್ಸಿಕಟ್ಟಾ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಮಹಾಬಲೇಶ್ವರ ದೇವರು ಭಟ್ಟ ಅಗ್ಗೇರೆ, ಅಘನಾಶಿನಿ ಸಂಬಾರು ಬೆಳೆಗಳ ಉತ್ಪಾದಕರ ಕಂಪನಿಯ ಸಹಾಯಕ ನಿರ್ದೇಶಕ ಎಸ್.ಆರ್.ಹೆಗಡೆ ಕುಂಬಾರಕುಳಿ ಉಪಸ್ಥಿತರಿರುತ್ತಾರೆ.
ನಂತರ ವಿಜ್ಞಾನಿ ಡಾ.ವಿನಾಯಕ ಹೆಗಡೆ ಅವರಿಂದ ಅಡಕೆಯಲ್ಲಿ ಎಲೆ ಚುಕ್ಕೆ ರೋಗದ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ ೨.೪೫ರಿಂದ ರೈತರೊಂದಿಗೆ ಸಂವಾದ ಹಾಗೂ ಸಮಾರೋಪ ನಡೆಯಲಿದ್ದು ಅಧ್ಯಕ್ಷತೆಯನ್ನು ವಾಜಗದ್ದೆ ದುರ್ಗಾವಿನಾಯಕ ದೇವಸ್ಥಾನದ ಮೊಕ್ತೇಸರ ಶ್ರೀಧರ ಎಂ.ಹೆಗಡೆ ಅಧ್ಯಕ್ಷತೆವಹಿಸುವರು. ಟಿಎಂಎಸ್ ಅಧ್ಯಕ್ಷ ಆರ್.ಎಂ.ಹೆಗಡೆ ಬಾಳೇಸರ, ಟಿಎಸ್ಎಸ್ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ, ಸಿದ್ದಾಪುರ ಶಿಕ್ಷಣ ಪ್ರಸಾರಕ ಸಮಿತಿ ಅಧ್ಯಕ್ಷ ಡಾ.ಶಶಿಭೂಷಣ ಹೆಗಡೆ ಉಪಸ್ಥಿತರಿರುತ್ತಾರೆ ಎಂದು ಸಂಘಟಕರು ತಿಳಿಸಿದ್ದಾರೆ.


_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






