ಎಲೆಚುಕ್ಕೆ ರೋಗ – ಸೂಕ್ತ ಕ್ರಮಕ್ಕೆ ಶಾಸಕರ ಸೂಚನೆ


ಸಿದ್ದಾಪುರ: ಎಲೆ ಚುಕ್ಕೆ ರೋಗ ಕಾಣಿಸಿಕೊಂಡಿರುವ ಅಡಿಕೆ ತೋಟಗಳಿಗೆ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ತೆರಳಿ ರೈತರಿಗೆ ಸೂಕ್ತ ಸಲಹೆ-ಸೂಚನೆ ನೀಡುವ ಜೊತೆಗೆ ಅಡಿಕೆ ಬೆಳಗಾರರಿಗೆ ನಿಧಾನವಾಗಿ ಬಹುಬೆಳೆಗಳನ್ನು ಪರಿಚಯಿಸಬೇಕು ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ‌ ಸೂಚಿಸಿದರು.


ತೋಟಗಾರಿಕೆ ಇಲಾಖೆಯ ವತಿಯಿಂದ ತಾಲೂಕಿನ ವಾಜಗದ್ದೆಯ ದುರ್ಗಾ ವಿನಾಯಕ ಸಭಾಭವನದಲ್ಲಿ ಶುಕ್ರವಾರ ನಡೆದ ಅಡಿಕೆಯಲ್ಲಿ ಎಲೆ ಚುಕ್ಕೆ ರೋಗ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿ, ಪಾರಂಪರಿಕವಾಗಿ ಬೆಳೆಯುತ್ತಿರುವ ಅಡಿಕೆ ಬೆಳೆಯನ್ನು ಉಳಿಸಿಕೊಳ್ಳುವುದೇ ಸವಾಲಾಗಿದೆ. ತಜ್ಞರ ಸಲಹೆ ಪಡೆದು ತೋಟವನ್ನು ಸಂರಕ್ಷಿಸಿಕೊಳ್ಳಬೇಕಾಗಿದೆ. ರೈತರು ದೃತಿಗೆಡದೇ ಇರುವಂತೆ ನೋಡಿಕೊಳ್ಳಬೇಕಾದದ್ದು ಸಂಬಂಧಪಟ್ಟ ಇಲಾಖೆಯ ಜವಾಬ್ದಾರಿಯಾಗಿದೆ. ತೋಟಗಳಲ್ಲಿ ಕಾಣಿಸಿಕೊಂಡಿರುವ ಖಾಯಿಲೆಗೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕು. ಅಧಿಕಾರಿಗಳು ಸ್ಥಳಕ್ಕೆ ಖುದ್ದು ತೆರಳಿ ಎನೇನು ನ್ಯೂನ್ಯತೆ ಇದೆ ಎಂಬುದನ್ನು ಕಂಡು ಕೊಂಡು ಸೂಕ್ತ ಸಲಹೆ ನೀಡಬೇಕು. ಕಾಲಕಾಲಕ್ಕೆ ಮಣ್ಣು ಪರೀಕ್ಷೆ ನಡೆಸಬೇಕು. ಬೆಳೆಗಾರರು ನಿರ್ಲಕ್ಷ ತೋರದೇ ಕಾಲ ಕಾಲಕ್ಕೆ ಔಷಧಿ ಸಿಂಪಡಿಸಬೇಕು. ಸರ್ಕಾರ ಜಿಲ್ಲೆಯ ತೋಟಿಗರ ಜತೆ ನಿಲ್ಲಲಿದೆ. ರೈತರು ಅಡಿಕೆಯೊಂದಕ್ಕೆ ಮಾತ್ರ ಅವಲಂಭಿತರಾಗದೇ ಮೆಣಸು, ಕಾಫಿ ಮತ್ತಿತರ ಬೆಳೆಗಳನ್ನು ಬೆಳೆಯಲು ಮುಂದಾಗಬೇಕು ಎಂದರು.


ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಬಿ.ಪಿ.ಸತೀಶ ಪ್ರಾಸ್ತಾವಿಕ ಮಾತನಾಡಿ, ಜಿಲ್ಲೆಯಲ್ಲಿ 65 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕಾ ಪ್ರದೇಶವಿದ್ದು, 33 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆಯಲಾಗುತ್ತದೆ. ಇತ್ತೀಚೆಗೆ ಎಲೆ ಹಳದಿ ರೋಗ ಹಾಗೂ ಎಲೆ ಚುಕ್ಕೆ ರೋಗ ಕಾಣಿಸಿಕೊಳ್ಳುತ್ತಿದೆ. ಶೀಲಿಂದ್ರ ಒಂದರಿಂದ ಹರಡುವ ರೋಗ ಇದಾಗಿದ್ದು, ಈ ಬಾರಿ 8600 ಹೆಕ್ಟೇರ್ ಪ್ರದೇಶದಲ್ಲಿ ರೋಗ ಕಾಣಿಸಿಕೊಂಡಿದೆ. ಜಿಲ್ಲೆಯ ರೈತರು ಬಹು ಬೆಳೆಯನ್ನು ಬೆಳೆಯಲು ಮುಂದಾಗಬೇಕು ಎಂದರು.


ಹಾರ್ಸಿಕಟ್ಟಾ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಸಿದ್ದಾರ್ಥ ದೇಸಾಯಿ ಗೌಡರ್ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಬಿ.ಪಿ.ಸತೀಶ, ತಾಲೂಕಾ ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ದೇವರಾಜ ಹಿತ್ತಲಕೊಪ್ಪ, ತೋಟಗಾರಿಕಾ ವಿಜ್ಞಾನಿ ವಿನಾಯಕ ಹೆಗಡೆ, ಗ್ರಾಪಂ ಸದಸ್ಯರಾದ ವಿಶಾಲಾಕ್ಷಿ ಹಸ್ಲರ್, ಅನಂತ ಹೆಗಡೆ, ಅಘನಾಷಿಸಿ ಸಾಂಬಾರ ಮಂಡಳಿ ಅಧ್ಯಕ್ಷ ಎಸ್.ಆರ್.ಹೆಗಡೆ, ಹಾರ್ಸಿಕಟ್ಟಾ ಸೊಸೈಟಿ ಅಧ್ಯಕ್ಷ ಮಹಾಬಲೇಶ್ವರ ಭಟ್ ಉಪಸ್ಥಿತರಿದ್ದರು.‌ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಅರುಣ ಎಚ್.ಜಿ ಸ್ವಾಗತಿಸಿದರು. ಗಣಪತಿ ಹೆಗಡೆ ವಂದಿಸಿದರು. ಸಂಜಯ ಹೆಗಡೆ ಹಾಗೂ ವಿನಾಯಕ ಪೇಟೆಸರ ನಿರೂಪಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *