ವಿಷ್ಣು ಗಜಾನನ ಭಟ್ಟ ಮೂರೂರು ಇನ್ನಿಲ್ಲ

.
ಸಿದ್ದಾಪುರ
ಬಡಗು ತಿಟ್ಟಿನ ಖ್ಯಾತ ಯಕ್ಷಗಾನ ಸ್ತ್ರೀ ವೇಷಧಾರಿ ಮೂರೂರು ವಿಷ್ಣು ಗಜಾನನ ಭಟ್ಟ (೬೫) ಸಿದ್ದಾಪುರ ತಾಲೂಕಿನ ಭಾನ್ಕುಳಿಯ ಶ್ರೀರಾಮದೇವ ಮಠದಲ್ಲಿ ಭಾನುವಾರ ನಿಧನಹೊಂದಿದರು.
ಮೂಲತಃ ಕುಮಟಾ ತಾಲೂಕಿನ ಮೂರೂರಿನವರಾದ ಅವರು ಕಳೆದ ಮೂರು ವರ್ಷದಿಂದ ಭಾನ್ಕುಳಿಮಠದಲ್ಲಿ ತಮ್ಮ ಪುತ್ರನೊಂದಿಗೆ ವಾಸವಾಗಿದ್ದರು. ಅವರಿಗೆ ಪತ್ನಿ ಹಾಗೂ ಪುತ್ರ ಇದ್ದಾರೆ.
ಗುಂಡುಬಾಳ, ಅಮೃತೇಶ್ವರಿ, ಹಿರೇಮಹಾಲಿಂಗೇಶ್ವರ, ಶಿರಸಿ, ಪೆರ್ಡೂರು,ಮಂದಾರ್ತಿ, ಸಾಲಿಗ್ರಾಮ, ಪೂರ್ಣಚಂದ್ರ ಮತ್ತಿತರ ಯಕ್ಷಗಾನಮೇಳದಲ್ಲಿ ನಾಲ್ಕು ದಶಕಗಳ ಕಾಲ ಕಲಾಸೇವೆ ಗೈದಿದ್ದಾರೆ.


ದಾಕ್ಷಾಯಿಣಿ, ಸೀತೆ, ಅಂಬೆ, ಚಂದ್ರಮತಿ, ದಮಯಂತಿ ಮುಂತಾದ ಪೌರಾಣಿಕ ಪಾತ್ರಗಳನ್ನು ಅನನ್ಯವಾಗಿ ಚಿತ್ರಿಸಿ ಯಕ್ಷಗಾನ ಕಲಾಸಕ್ತರ ಮನೆಮಾತಾಗಿದ್ದರು. ತಮ್ಮ ಭಾವ ಪೂರ್ಣ ಅಭಿನಯ, ಮಾತುಗಾರಿಕೆಯಿಂದ ಅಪಾರ ಸಂಖ್ಯೆಯ ಅಭಿಮಾನಿಗಳ ಪ್ರೀತ್ಯಾದರಕ್ಕೆ ಪಾತ್ರರಾಗಿದ್ದರು.
ಯಕ್ಷಗಾನ ಕಲಾರಂಗ ಪ್ರಶಸ್ತಿ, ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳಿಗೆ ಭಾಜನರಾಗಿದ್ದರು.
ಅವರ ಅಂತ್ಯ ಸಂಸ್ಕಾರ ಭಾನ್ಕುಳಿಮಠದ ಶಂಕರಗಿರಿಯಲ್ಲಿ ಭಾನುವಾರ ನಡೆಯಿತು.
ಮಠದ ಪ್ರಮುಖರಾದ ಆರ್.ಎಸ್.ಹೆಗಡೆ ಹರಗಿ, ಎಂ.ಜಿ.ರಾಮಚಂದ್ರನ್, ಮಹೇಶ ಭಟ್ಟ ಚಟ್ನಳ್ಳಿ, ಶಾಂತಾರಾಮ ಹಿರೇಮನೆ, ಎಂ.ಎಂ.ಹೆಗಡೆ ಮಗೇಗಾರ ಸೇರಿದಂತೆ ಮಠದ ಶಿಷ್ಯವೃಂದದವರಿದ್ದರು.


ವಿಷ್ಣು ಭಟ್ಟ ಅವರ ನಿಧನಕ್ಕೆ ದಿವಾನ್ ಯಕ್ಷಸಮೂಹ ಹಾರ್ಸಿಕಟ್ಟಾ, ಯಕ್ಷಚಂದನ ದಂಟಕಲ್, ಕಲಾಭಾಸ್ಕರ ಇಟಗಿ, ಸರಸ್ವತಿ ಕಲಾ ಟ್ರಸ್ಟ್ ಹೊಸಗದ್ದೆ ಸಂಘಟನೆ, ಖ್ಯಾತ ಭಾಗವತ ಕೇಶವ ಹೆಗಡೆ ಕೊಳಗಿ, ಸ್ರ್ತೀ ವೇಷಧಾರಿ ಭಾಸ್ಕರ ಜೋಶಿ ಶಿರಳಗಿ, ಮಹಾಬಲೇಶ್ವರ ಇಟಗಿ ಸೇರಿದಂತೆ ಅನೇಕ ಯಕ್ಷಗಾನ ಕಲಾವಿದರು, ಗಣ್ಯರು ಕಂಬನಿ ಮಿಡಿದಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ...

ಕಾಗೇರಿ ವ್ಯಂಗ್ಯಕ್ಕೆ ಕಾಂಗ್ರೆಸ್‌ ಉತ್ತರ……! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-04-

ಬಿ.ಜೆ.ಪಿ. ಮಟ್ಟಿಗೆ ಉತ್ತರ ಕನ್ನಡದ ವರಿಷ್ಠರಾದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಧ್ಯಮಗೋಷ್ಠಿ ನಡೆಸುವುದರಲ್ಲಿ ಮಾಧ್ಯಮಗಳಿಗೆ ಬೇಕಾದಷ್ಟೇ ಚುಟುಕಾಗಿ ಉತ್ತರಿಸುವುದರಲ್ಲಿ ನಿ಼ಷ್ಣಾತರು. ಆಗಾಗ ಮಾಧ್ಯಮಗೋಷ್ಠಿ...

ನಾಯಕರಿಗೆ ಇಂಬು, ಕಾರ್ಯಕರ್ತರಿಗೆ ಚೊಂಬು!!! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-03-

ಬಿ.ಜೆ.ಪಿ. ಸೋಲಿಸಲು ಸಾಧ್ಯವಿಲ್ಲ, ಕಾಂಗ್ರೆಸ್‌ ಗೆ ಅಧಿಕಾರವಿಲ್ಲದೆ ಅಲ್ಲಿಯ ಕಾರ್ಯಕರ್ತರು ಅನಿವಾರ್ಯವಾಗಿ ಬಿ.ಜೆ.ಪಿ. ಸೇರುತ್ತಾರೆ. ಹೀಗಾದರೆ ನೀವೆಲ್ಲಾ ಕಾಂಗ್ರೆಸ್‌ ನಲ್ಲಿದ್ದು ಏನು ಪ್ರಯೋಜನ? ಎಂದು...

ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! part-02- ವೀಶ್ವೇಶ್ವರ ಹೆಗಡೆಗೆ ಮೃಧುವಾಗೇ ತಿವಿಯುತ್ತಿರುವ ಗ್ಯಾರಂಟಿಯಣ್ಣ!

ಮೇಲ್ವರ್ಗದ ಓಲೈಕೆ, ವೈದಿಕ ತುಷ್ಟೀಕರಣಗಳ ಬಿ.ಜೆ.ಪಿ. ಅನಿವಾರ್ಯವಾದಾಗ, ಮೇಲ್ನೋಟಕ್ಕೆ ಪ್ರದರ್ಶನಕ್ಕೆ ಅಹಿಂದ್‌ ಗಳನ್ನು ಬಳಸುವುದನ್ನು ಬಿಟ್ಟರೆ ಅದು ತನ್ನ ಅಜೆಂಡಾ ಉಳ್ಳವರ ಪರ ನೀತಿಯನ್ನು...

don,t do it- ಮಗುವಿನೊಂದಿಗೆ ಪೋಷಕರ ಅಪಾಯಕಾರಿ ಸೆಲ್ಫಿ; ಸ್ಮಾರ್ಟ್ ಸಿಸಿಟಿವಿಯಿಂದ ತಪ್ಪಿದ ಸಂಭಾವ್ಯ ದುರಂತ!

ಗೋಕರ್ಣ: ಪೊಲೀಸರ ಈ ಮುನ್ನೆಚ್ಚರಿಕಾ ಕ್ರಮ ಗೋಕರ್ಣದಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ಪೊಲೀಸರು ತಮ್ಮನ್ನು ಕ್ಯಾಮರಾ ಮೂಲಕ ನೋಡುತ್ತಿದ್ದಾರೆ ಎಂದು ದಂಪತಿಗೆ ತಿಳಿದಿರಲಿಲ್ಲ. ಮಗುವಿನೊಂದಿಗೆ ಪೋಷಕರ...

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ ಮಾತು….. ಬೆoಗಳೂರಿನ ಚಿನ್ನಸ್ವಾಮಿ ಕ್ರೀಡಾoಗಣ ದಲ್ಲಿ ಕಲ್ತುಳಿತಕ್ಕೆ ಒಳಗಾಗಿ ಜೀವತೆತ್ತ ಅಕ್ಷತಾ ಪೈ ಶವ ಸಿದ್ಧಾಪುರಕ್ಕೆ ಆಗಮಿಸಿದೆ. ಮೃತ ಅಕ್ಷತಾ ಪತಿ ಆಶಯ ನಿನ್ನೆ ಅಲ್ಲಿದ್ದರು. ನಿನ್ನೆಯ ಘಟನೆಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *