ವಿಷ್ಣು ಗಜಾನನ ಭಟ್ಟ ಮೂರೂರು ಇನ್ನಿಲ್ಲ

.
ಸಿದ್ದಾಪುರ
ಬಡಗು ತಿಟ್ಟಿನ ಖ್ಯಾತ ಯಕ್ಷಗಾನ ಸ್ತ್ರೀ ವೇಷಧಾರಿ ಮೂರೂರು ವಿಷ್ಣು ಗಜಾನನ ಭಟ್ಟ (೬೫) ಸಿದ್ದಾಪುರ ತಾಲೂಕಿನ ಭಾನ್ಕುಳಿಯ ಶ್ರೀರಾಮದೇವ ಮಠದಲ್ಲಿ ಭಾನುವಾರ ನಿಧನಹೊಂದಿದರು.
ಮೂಲತಃ ಕುಮಟಾ ತಾಲೂಕಿನ ಮೂರೂರಿನವರಾದ ಅವರು ಕಳೆದ ಮೂರು ವರ್ಷದಿಂದ ಭಾನ್ಕುಳಿಮಠದಲ್ಲಿ ತಮ್ಮ ಪುತ್ರನೊಂದಿಗೆ ವಾಸವಾಗಿದ್ದರು. ಅವರಿಗೆ ಪತ್ನಿ ಹಾಗೂ ಪುತ್ರ ಇದ್ದಾರೆ.
ಗುಂಡುಬಾಳ, ಅಮೃತೇಶ್ವರಿ, ಹಿರೇಮಹಾಲಿಂಗೇಶ್ವರ, ಶಿರಸಿ, ಪೆರ್ಡೂರು,ಮಂದಾರ್ತಿ, ಸಾಲಿಗ್ರಾಮ, ಪೂರ್ಣಚಂದ್ರ ಮತ್ತಿತರ ಯಕ್ಷಗಾನಮೇಳದಲ್ಲಿ ನಾಲ್ಕು ದಶಕಗಳ ಕಾಲ ಕಲಾಸೇವೆ ಗೈದಿದ್ದಾರೆ.


ದಾಕ್ಷಾಯಿಣಿ, ಸೀತೆ, ಅಂಬೆ, ಚಂದ್ರಮತಿ, ದಮಯಂತಿ ಮುಂತಾದ ಪೌರಾಣಿಕ ಪಾತ್ರಗಳನ್ನು ಅನನ್ಯವಾಗಿ ಚಿತ್ರಿಸಿ ಯಕ್ಷಗಾನ ಕಲಾಸಕ್ತರ ಮನೆಮಾತಾಗಿದ್ದರು. ತಮ್ಮ ಭಾವ ಪೂರ್ಣ ಅಭಿನಯ, ಮಾತುಗಾರಿಕೆಯಿಂದ ಅಪಾರ ಸಂಖ್ಯೆಯ ಅಭಿಮಾನಿಗಳ ಪ್ರೀತ್ಯಾದರಕ್ಕೆ ಪಾತ್ರರಾಗಿದ್ದರು.
ಯಕ್ಷಗಾನ ಕಲಾರಂಗ ಪ್ರಶಸ್ತಿ, ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳಿಗೆ ಭಾಜನರಾಗಿದ್ದರು.
ಅವರ ಅಂತ್ಯ ಸಂಸ್ಕಾರ ಭಾನ್ಕುಳಿಮಠದ ಶಂಕರಗಿರಿಯಲ್ಲಿ ಭಾನುವಾರ ನಡೆಯಿತು.
ಮಠದ ಪ್ರಮುಖರಾದ ಆರ್.ಎಸ್.ಹೆಗಡೆ ಹರಗಿ, ಎಂ.ಜಿ.ರಾಮಚಂದ್ರನ್, ಮಹೇಶ ಭಟ್ಟ ಚಟ್ನಳ್ಳಿ, ಶಾಂತಾರಾಮ ಹಿರೇಮನೆ, ಎಂ.ಎಂ.ಹೆಗಡೆ ಮಗೇಗಾರ ಸೇರಿದಂತೆ ಮಠದ ಶಿಷ್ಯವೃಂದದವರಿದ್ದರು.


ವಿಷ್ಣು ಭಟ್ಟ ಅವರ ನಿಧನಕ್ಕೆ ದಿವಾನ್ ಯಕ್ಷಸಮೂಹ ಹಾರ್ಸಿಕಟ್ಟಾ, ಯಕ್ಷಚಂದನ ದಂಟಕಲ್, ಕಲಾಭಾಸ್ಕರ ಇಟಗಿ, ಸರಸ್ವತಿ ಕಲಾ ಟ್ರಸ್ಟ್ ಹೊಸಗದ್ದೆ ಸಂಘಟನೆ, ಖ್ಯಾತ ಭಾಗವತ ಕೇಶವ ಹೆಗಡೆ ಕೊಳಗಿ, ಸ್ರ್ತೀ ವೇಷಧಾರಿ ಭಾಸ್ಕರ ಜೋಶಿ ಶಿರಳಗಿ, ಮಹಾಬಲೇಶ್ವರ ಇಟಗಿ ಸೇರಿದಂತೆ ಅನೇಕ ಯಕ್ಷಗಾನ ಕಲಾವಿದರು, ಗಣ್ಯರು ಕಂಬನಿ ಮಿಡಿದಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *