ವಿಷ್ಣು ಗಜಾನನ ಭಟ್ಟ ಮೂರೂರು ಇನ್ನಿಲ್ಲ

.
ಸಿದ್ದಾಪುರ
ಬಡಗು ತಿಟ್ಟಿನ ಖ್ಯಾತ ಯಕ್ಷಗಾನ ಸ್ತ್ರೀ ವೇಷಧಾರಿ ಮೂರೂರು ವಿಷ್ಣು ಗಜಾನನ ಭಟ್ಟ (೬೫) ಸಿದ್ದಾಪುರ ತಾಲೂಕಿನ ಭಾನ್ಕುಳಿಯ ಶ್ರೀರಾಮದೇವ ಮಠದಲ್ಲಿ ಭಾನುವಾರ ನಿಧನಹೊಂದಿದರು.
ಮೂಲತಃ ಕುಮಟಾ ತಾಲೂಕಿನ ಮೂರೂರಿನವರಾದ ಅವರು ಕಳೆದ ಮೂರು ವರ್ಷದಿಂದ ಭಾನ್ಕುಳಿಮಠದಲ್ಲಿ ತಮ್ಮ ಪುತ್ರನೊಂದಿಗೆ ವಾಸವಾಗಿದ್ದರು. ಅವರಿಗೆ ಪತ್ನಿ ಹಾಗೂ ಪುತ್ರ ಇದ್ದಾರೆ.
ಗುಂಡುಬಾಳ, ಅಮೃತೇಶ್ವರಿ, ಹಿರೇಮಹಾಲಿಂಗೇಶ್ವರ, ಶಿರಸಿ, ಪೆರ್ಡೂರು,ಮಂದಾರ್ತಿ, ಸಾಲಿಗ್ರಾಮ, ಪೂರ್ಣಚಂದ್ರ ಮತ್ತಿತರ ಯಕ್ಷಗಾನಮೇಳದಲ್ಲಿ ನಾಲ್ಕು ದಶಕಗಳ ಕಾಲ ಕಲಾಸೇವೆ ಗೈದಿದ್ದಾರೆ.


ದಾಕ್ಷಾಯಿಣಿ, ಸೀತೆ, ಅಂಬೆ, ಚಂದ್ರಮತಿ, ದಮಯಂತಿ ಮುಂತಾದ ಪೌರಾಣಿಕ ಪಾತ್ರಗಳನ್ನು ಅನನ್ಯವಾಗಿ ಚಿತ್ರಿಸಿ ಯಕ್ಷಗಾನ ಕಲಾಸಕ್ತರ ಮನೆಮಾತಾಗಿದ್ದರು. ತಮ್ಮ ಭಾವ ಪೂರ್ಣ ಅಭಿನಯ, ಮಾತುಗಾರಿಕೆಯಿಂದ ಅಪಾರ ಸಂಖ್ಯೆಯ ಅಭಿಮಾನಿಗಳ ಪ್ರೀತ್ಯಾದರಕ್ಕೆ ಪಾತ್ರರಾಗಿದ್ದರು.
ಯಕ್ಷಗಾನ ಕಲಾರಂಗ ಪ್ರಶಸ್ತಿ, ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳಿಗೆ ಭಾಜನರಾಗಿದ್ದರು.
ಅವರ ಅಂತ್ಯ ಸಂಸ್ಕಾರ ಭಾನ್ಕುಳಿಮಠದ ಶಂಕರಗಿರಿಯಲ್ಲಿ ಭಾನುವಾರ ನಡೆಯಿತು.
ಮಠದ ಪ್ರಮುಖರಾದ ಆರ್.ಎಸ್.ಹೆಗಡೆ ಹರಗಿ, ಎಂ.ಜಿ.ರಾಮಚಂದ್ರನ್, ಮಹೇಶ ಭಟ್ಟ ಚಟ್ನಳ್ಳಿ, ಶಾಂತಾರಾಮ ಹಿರೇಮನೆ, ಎಂ.ಎಂ.ಹೆಗಡೆ ಮಗೇಗಾರ ಸೇರಿದಂತೆ ಮಠದ ಶಿಷ್ಯವೃಂದದವರಿದ್ದರು.


ವಿಷ್ಣು ಭಟ್ಟ ಅವರ ನಿಧನಕ್ಕೆ ದಿವಾನ್ ಯಕ್ಷಸಮೂಹ ಹಾರ್ಸಿಕಟ್ಟಾ, ಯಕ್ಷಚಂದನ ದಂಟಕಲ್, ಕಲಾಭಾಸ್ಕರ ಇಟಗಿ, ಸರಸ್ವತಿ ಕಲಾ ಟ್ರಸ್ಟ್ ಹೊಸಗದ್ದೆ ಸಂಘಟನೆ, ಖ್ಯಾತ ಭಾಗವತ ಕೇಶವ ಹೆಗಡೆ ಕೊಳಗಿ, ಸ್ರ್ತೀ ವೇಷಧಾರಿ ಭಾಸ್ಕರ ಜೋಶಿ ಶಿರಳಗಿ, ಮಹಾಬಲೇಶ್ವರ ಇಟಗಿ ಸೇರಿದಂತೆ ಅನೇಕ ಯಕ್ಷಗಾನ ಕಲಾವಿದರು, ಗಣ್ಯರು ಕಂಬನಿ ಮಿಡಿದಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *