ಬೇಡಕಣಿ ಜನತಾ ವಿದ್ಯಾಲಯದ ಸುವರ್ಣ ಮಹೋತ್ಸವ

ಸಿದ್ದಾಪುರ: ಚುಟುಕು ಬ್ರಹ್ಮ ಡಾ. ದಿನಕರ ದೇಸಾಯಿಯವರ ಕನಸಿನ ಕೂಸಾದ ತಾಲೂಕಿನ ಬೇಡ್ಕಣಿಯ ಜನತಾ ವಿದ್ಯಾಲಯದ ಸುವರ್ಣ ಮಹೋತ್ಸವವನ್ನು 2024ರ ಜನವರಿ 6 ಮತ್ತು 7 ರಂದು ನಡೆಸಲು ತೀರ್ಮಾನಿಸಲಾಗಿದೆ.


ಸೋಮವಾರ ಶಾಲೆಯ ಸಭಾಭವನದಲ್ಲಿ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ವಿ.ಎನ್.ನಾಯ್ಕ ಬೇಡ್ಕಣಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ದಿನಾಂಕ ನಿಗದಿಗೊಳಿಸಲಾಗಿದೆ. ಚುಟುಕು ಬ್ರಹ್ಮ ದಿನಕರ ದೇಸಾಯಿಯವರಿಂದ 1965 ರಲ್ಲಿ ಸ್ಥಾಪನೆಯಾದ ಜನತಾ ವಿದ್ಯಾಲಯವು ಈಗಾಗಲೇ 58ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದು, ಕೊರೊನಾ ಮತ್ತಿತರ ಕಾರಣಗಳಿಂದ ಸುವರ್ಣ ಮಹೋತ್ಸವ ಮುಂದೂಡಲ್ಪಟ್ಟಿತ್ತು. ತಾಲೂಕಿನ ಕಡಕೇರಿ, ತ್ಯಾರ್ಸಿ, ಬೇಡ್ಕಣಿ, ಗುಂಜಗೋಡ, ಮರಲಗಿ, ವಾಟಗಾರ, ಹರಕನಳ್ಳಿ, ಹೊಸಳ್ಳಿ, ಭುವನಗುರಿ, ಮುತ್ತಿಗೆ, ಕುರಿಗೆತೋಟ, ಕಲ್ಕಣಿ ಮತ್ತಿತರ ಭಾಗದ ಸಾವಿರಾರು ವಿದ್ಯಾರ್ಥಿಗಳಿಗೆ ಪ್ರೌಢಶಿಕ್ಷಣದ ಧಾರೆ ಎರೆದ ಜನತಾ ವಿದ್ಯಾಲಯದ ಸುವರ್ಣ ಮಹೋತ್ಸವ ಸದಾ ನೆನಪಿನಲ್ಲಿಡುವಂತೆ ಮಾಡಲು ಉತ್ಸವ ಸಮಿತಿ ಮುಂದಾಗಿದೆ ಎಂದು ವಿ.ಎನ್.ನಾಯ್ಕ ತಿಳಿಸಿದರು.


ಈಗಾಗಲೇ ವೇದಿಕೆ, ಊಟೋಪಚಾರ, ಹಣಕಾಸು, ಪ್ರಚಾರ, ಸುವರ್ಣ ಮಹೋತ್ಸವ ಸಂಚಿಕೆ ಸಮಿತಿ ರಚಿಸಲಾಗಿದೆ. ಆಯಾ ಸಮಿತಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಬೇಕಿದೆ. ಶಾಲೆಯ ನೆಲಹಾಸು ಹಾಗೂ ಸುಣ್ಣ-ಬಣ್ಣ ತುರ್ತಾಗಿ ಆಗಬೇಕಾಗಿದೆ‌. ಶಾಲೆಯ ಹಳೆಯ ವಿದ್ಯಾರ್ಥಿಗಳು, ದಾನಿಗಳು, ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳಿಂದ ಹಣ ಕ್ರೋಢಿಕರಿಸಿ ಅಗತ್ಯ ಕಾಮಗಾರಿ ನಡೆಸಬೇಕಿದ್ದು, ಸರ್ವರು ಸಹಕಾರ ನೀಡಬೇಕು.‌ ಶಾಲೆಯ ನೆಲಹಾಸು ಹಾಗೂ ಸುಣ್ಣ ಬಣ್ಣ ಮಾಡದೇ ಸುವರ್ಣ ಮಹೋತ್ಸವ ಆಚರಿಸಲು ಸಾಧ್ಯವಿಲ್ಲ. ನಾಳೆಯಿಂದಲೇ ದಾನಿಗಳು ಹಾಗೂ ಹಳೆಯ ವಿದ್ಯಾರ್ಥಿಗಳಿಂದ ಹಣ ಸಂಗ್ರಹಿಸುವ ಕೆಲಸವಾಗಬೇಕು.‌ ಸ್ಥಳೀಯವಾಗಿ ಸಾರ್ವಜನಿಕರು ಹಾಗೂ ಹಳೆಯ ವಿದ್ಯಾರ್ಥಿಗಳು ಉತ್ಸಾಹ ತೋರಬೇಕು ಎಂದರು.


ಈ ವೇಳೆ ಸುವರ್ಣ ಮಹೋತ್ಸವ ಸಮಿತಿಯ
ಗೌರವಾಧ್ಯಕ್ಷ ವಿ.ಎಸ್.ಹೆಗಡೆ, ಉಪಾಧ್ಯಕ್ಷರಾದ ಎ.ಬಿ.ನಾಯ್ಕ ಕಡಕೇರಿ, ಸುರೇಂದ್ರ ಗೌಡ, ಸದಸ್ಯರಾದ ನಾಗಪತಿ ನಾಯ್ಕ, ಪ್ರಶಾಂತ ನಾಯ್ಕ, ವೆಂಕಟ್ರಮಣ ನಾಯ್ಕ, ಪಾಂಡುರಂಗ ನಾಯ್ಕ, ಧಾರವಾಡ ಹಾಲು ಒಕ್ಕೂಟದ ನಿರ್ದೇಶಕ ಪಿ.ವಿ.ನಾಯ್ಕ, ಶಾಲೆಯ ಮುಖ್ಯ ಶಿಕ್ಷಕಿ ಪ್ರತಿಮಾ ಪಾಲೇಕರ್, ಬೇಡ್ಕಣಿ ಗ್ರಾಮ ಪಂಚಾಯ್ತಿ ಸದಸ್ಯ ಗೋವಿಂದ ನಾಯ್ಕ, ಪ್ರಕಾಶ ನಾಯ್ಕ ಬೇಡ್ಕಣಿ, ಎಂ.ಬಿ.ನಾಯ್ಕ ನಾಯ್ಕ ಕಡಕೇರಿ, ಪ್ರಕಾಶ ನಾಯ್ಕ ಹರಕನಳ್ಳಿ, ಸಿ.ಎನ್.ಹೆಗಡೆ, ಶಿಕ್ಷಕ ಜಿ.ಟಿ.ಭಟ್ ಉಪಸ್ಥಿತರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *