ಬೇಡಕಣಿ ಜನತಾ ವಿದ್ಯಾಲಯದ ಸುವರ್ಣ ಮಹೋತ್ಸವ

ಸಿದ್ದಾಪುರ: ಚುಟುಕು ಬ್ರಹ್ಮ ಡಾ. ದಿನಕರ ದೇಸಾಯಿಯವರ ಕನಸಿನ ಕೂಸಾದ ತಾಲೂಕಿನ ಬೇಡ್ಕಣಿಯ ಜನತಾ ವಿದ್ಯಾಲಯದ ಸುವರ್ಣ ಮಹೋತ್ಸವವನ್ನು 2024ರ ಜನವರಿ 6 ಮತ್ತು 7 ರಂದು ನಡೆಸಲು ತೀರ್ಮಾನಿಸಲಾಗಿದೆ.


ಸೋಮವಾರ ಶಾಲೆಯ ಸಭಾಭವನದಲ್ಲಿ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ವಿ.ಎನ್.ನಾಯ್ಕ ಬೇಡ್ಕಣಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ದಿನಾಂಕ ನಿಗದಿಗೊಳಿಸಲಾಗಿದೆ. ಚುಟುಕು ಬ್ರಹ್ಮ ದಿನಕರ ದೇಸಾಯಿಯವರಿಂದ 1965 ರಲ್ಲಿ ಸ್ಥಾಪನೆಯಾದ ಜನತಾ ವಿದ್ಯಾಲಯವು ಈಗಾಗಲೇ 58ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದು, ಕೊರೊನಾ ಮತ್ತಿತರ ಕಾರಣಗಳಿಂದ ಸುವರ್ಣ ಮಹೋತ್ಸವ ಮುಂದೂಡಲ್ಪಟ್ಟಿತ್ತು. ತಾಲೂಕಿನ ಕಡಕೇರಿ, ತ್ಯಾರ್ಸಿ, ಬೇಡ್ಕಣಿ, ಗುಂಜಗೋಡ, ಮರಲಗಿ, ವಾಟಗಾರ, ಹರಕನಳ್ಳಿ, ಹೊಸಳ್ಳಿ, ಭುವನಗುರಿ, ಮುತ್ತಿಗೆ, ಕುರಿಗೆತೋಟ, ಕಲ್ಕಣಿ ಮತ್ತಿತರ ಭಾಗದ ಸಾವಿರಾರು ವಿದ್ಯಾರ್ಥಿಗಳಿಗೆ ಪ್ರೌಢಶಿಕ್ಷಣದ ಧಾರೆ ಎರೆದ ಜನತಾ ವಿದ್ಯಾಲಯದ ಸುವರ್ಣ ಮಹೋತ್ಸವ ಸದಾ ನೆನಪಿನಲ್ಲಿಡುವಂತೆ ಮಾಡಲು ಉತ್ಸವ ಸಮಿತಿ ಮುಂದಾಗಿದೆ ಎಂದು ವಿ.ಎನ್.ನಾಯ್ಕ ತಿಳಿಸಿದರು.


ಈಗಾಗಲೇ ವೇದಿಕೆ, ಊಟೋಪಚಾರ, ಹಣಕಾಸು, ಪ್ರಚಾರ, ಸುವರ್ಣ ಮಹೋತ್ಸವ ಸಂಚಿಕೆ ಸಮಿತಿ ರಚಿಸಲಾಗಿದೆ. ಆಯಾ ಸಮಿತಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಬೇಕಿದೆ. ಶಾಲೆಯ ನೆಲಹಾಸು ಹಾಗೂ ಸುಣ್ಣ-ಬಣ್ಣ ತುರ್ತಾಗಿ ಆಗಬೇಕಾಗಿದೆ‌. ಶಾಲೆಯ ಹಳೆಯ ವಿದ್ಯಾರ್ಥಿಗಳು, ದಾನಿಗಳು, ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳಿಂದ ಹಣ ಕ್ರೋಢಿಕರಿಸಿ ಅಗತ್ಯ ಕಾಮಗಾರಿ ನಡೆಸಬೇಕಿದ್ದು, ಸರ್ವರು ಸಹಕಾರ ನೀಡಬೇಕು.‌ ಶಾಲೆಯ ನೆಲಹಾಸು ಹಾಗೂ ಸುಣ್ಣ ಬಣ್ಣ ಮಾಡದೇ ಸುವರ್ಣ ಮಹೋತ್ಸವ ಆಚರಿಸಲು ಸಾಧ್ಯವಿಲ್ಲ. ನಾಳೆಯಿಂದಲೇ ದಾನಿಗಳು ಹಾಗೂ ಹಳೆಯ ವಿದ್ಯಾರ್ಥಿಗಳಿಂದ ಹಣ ಸಂಗ್ರಹಿಸುವ ಕೆಲಸವಾಗಬೇಕು.‌ ಸ್ಥಳೀಯವಾಗಿ ಸಾರ್ವಜನಿಕರು ಹಾಗೂ ಹಳೆಯ ವಿದ್ಯಾರ್ಥಿಗಳು ಉತ್ಸಾಹ ತೋರಬೇಕು ಎಂದರು.


ಈ ವೇಳೆ ಸುವರ್ಣ ಮಹೋತ್ಸವ ಸಮಿತಿಯ
ಗೌರವಾಧ್ಯಕ್ಷ ವಿ.ಎಸ್.ಹೆಗಡೆ, ಉಪಾಧ್ಯಕ್ಷರಾದ ಎ.ಬಿ.ನಾಯ್ಕ ಕಡಕೇರಿ, ಸುರೇಂದ್ರ ಗೌಡ, ಸದಸ್ಯರಾದ ನಾಗಪತಿ ನಾಯ್ಕ, ಪ್ರಶಾಂತ ನಾಯ್ಕ, ವೆಂಕಟ್ರಮಣ ನಾಯ್ಕ, ಪಾಂಡುರಂಗ ನಾಯ್ಕ, ಧಾರವಾಡ ಹಾಲು ಒಕ್ಕೂಟದ ನಿರ್ದೇಶಕ ಪಿ.ವಿ.ನಾಯ್ಕ, ಶಾಲೆಯ ಮುಖ್ಯ ಶಿಕ್ಷಕಿ ಪ್ರತಿಮಾ ಪಾಲೇಕರ್, ಬೇಡ್ಕಣಿ ಗ್ರಾಮ ಪಂಚಾಯ್ತಿ ಸದಸ್ಯ ಗೋವಿಂದ ನಾಯ್ಕ, ಪ್ರಕಾಶ ನಾಯ್ಕ ಬೇಡ್ಕಣಿ, ಎಂ.ಬಿ.ನಾಯ್ಕ ನಾಯ್ಕ ಕಡಕೇರಿ, ಪ್ರಕಾಶ ನಾಯ್ಕ ಹರಕನಳ್ಳಿ, ಸಿ.ಎನ್.ಹೆಗಡೆ, ಶಿಕ್ಷಕ ಜಿ.ಟಿ.ಭಟ್ ಉಪಸ್ಥಿತರಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

Recommended For You

About the Author: Kanneshwar Naik

Leave a Reply

Your email address will not be published. Required fields are marked *