ಕೆರೆಪುನಶ್ಚೇತನದ ಮೂಲಕ ಮಾದರಿಯಾದ ಹುಸೂರು ಗ್ರಾಮಸ್ಥರು

ಮಲೆನಾಡಿನಲ್ಲಿ ಇದೇ ಮೊದಲ ಬಾರಿ ಬರದ ಛಾಯೆ ಕಂಡಿದೆ. ಎರಡ್ಮೂರು ತಿಂಗಳು ಸುರಿಯುತಿದ್ದ ಮಳೆ ಈ ವರ್ಷ ಎರಡ್ಮೂರು ವಾರ ಕೂಡಾ ಬೀಳಲಿಲ್ಲ. ಮಳೆಯ ತೌರೂರು ಮಲೆನಾಡಿನಲ್ಲಿ ಮಳೆ ಕೊರತೆ ಅನೇಕ  ಆತಂಕಗಳಿಗೆ ಕಾರಣವಾಗಿದೆ. ಈ ಮುಂದಾಲೋಚನೆ ಮಲೆನಾಡಿನ ಜನರಿಗೆ ಜೀವಜಲದ ಮಹತ್ವ ತಿಳಿಸುತ್ತಿದೆ. ಮಳೆಗಾಲದ ಕೊನೆಯ ಅವಧಿಯ ಅಕ್ಟೋಬರ್‌, ನವೆಂಬರ್‌ ತಿಂಗಳಲ್ಲಿ ತುಂಬಿ- ತುಳುಕುತಿದ್ದ ಮಲೆನಾಡಿನ ಕೆರೆ ಕಟ್ಟೆಗಳು ಈ ವರ್ಷ ಮೊದಲಿನ ವೈಭವ ನೆನಪಿಸುವಂತಿಲ್ಲ. ಈ ಜಲಕ್ಷಾಮದ ಪರಿಣಾಮ ಅರಿತ ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದ ಹುಸೂರಿನ ರೈತರು ಬರುವ ಬೇಸಿಗೆ ಕಾಲದ ನೀರಿನ ಬವಣೆ ಬಗ್ಗೆ ಯೋಚಿಸಿ ಈಗಾಗಲೇ ಕಾರ್ಯಪ್ರವೃತ್ತರಾಗಿ ಬರಲಿರುವ ಬರಕ್ಕೆ ಸೆಡ್ಡು ಹೊಡೆಯುವ ಪೂರ್ವತಯಾರಿ ನಡೆಸಿದ್ದಾರೆ.


ತಮ್ಮೂರಿನ ಪುರಾತನ ಹೆಗ್ಗೆರೆಯನ್ನು ಸ್ಥಳೀಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಸಹಕಾರದಿಂದ ಹೂಳು ತೆಗೆದು ದಂಡೆಕಟ್ಟಿ ಮೂವತ್ತು ಅಡಿ ಆಳದ ನೀರು ನಿಲ್ಲಿಸಿದ್ದಾರೆ. ಈ ಜಲಸಂರಕ್ಷಣೆ ಕೆಲಸಕ್ಕಾಗಿ ನಿರಂತರವಾಗಿ ದುಡಿದ ಗ್ರಾಮಸ್ಥರು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಏಳುವರೆ ಲಕ್ಷ ರೂಪಾಯಿಗೆ ಸ್ಥಳಿಯ ವಂತಿಗೆ ಸೇರಿಸಿ ಒಟ್ಟೂ ೧೫ ಲಕ್ಷಕ್ಕೂ ಹೆಚ್ಚಿನ ಹಣದಲ್ಲಿ ಸುಂದರ ಕೆರೆ ನಿರ್ಮಿಸಿದ್ದಾರೆ.
 ಈ ಕೆರೆ ಪುನಶ್ಚೇತನ ಕೆಲಸಕ್ಕೆ ಸ್ವಯಂಸೇವಕರಾಗಿ ದುಡಿದ ಸ್ಥಳೀಯರು ಇಂದು ಈ ಕೆರೆಯನ್ನು ಸ್ಥಳೀಯ ಆಡಳಿತಕ್ಕೆ ಶಾಸಕ ಭೀಮಣ್ಣ ನಾಯ್ಕರ ಮೂಲಕ ಹಸ್ತಾಂತರಿಸಿದರು.


ಈ ಕೆರೆ ಪುನಶ್ಚೇತನದಿಂದ ಹುಸೂರಿನ ೪೦೦ ಎಕರೆ ಜಮೀನಿಗೆ ನೀರು ಪೂರೈಸುವ ಮಾದರಿ ಕೆಲಸ ಈಗ ಪುರ್ಣಗೊಂಡಿದೆ. ಈ ಸಾಹಸದ ಕೆಲಸವನ್ನು ಮೆಚ್ಚಿರುವ ಜನಪ್ರತಿನಿಧಿಗಳು, ಅಧಿಕಾರಿವರ್ಗ ಇಂದು ವಿಶೇಶ ಕಾರ್ಯಕ್ರಮ ರೂಪಿಸಿ ನಮ್ಮೂರು ನಮ್ಮ ಕೆರೆ ಯೋಜನೆಯ ಸಮಾರಂಭದಲ್ಲಿ ಪಾಲ್ಗೊಂಡು ಗ್ರಾಮಸ್ಥರನ್ನು ಅಭಿನಂದಿಸಿದರು. ಈ ಮಾದರಿ ಕೆಲಸದ ಕಾರಣಕ್ಕೆ ಹುಸೂರಿನ ಜನತೆ ಈಗ ಸಾರ್ವಜನಿಕ ಪ್ರಶಂಸೆಗೆ ಒಳಗಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *