ಕೆರೆಪುನಶ್ಚೇತನದ ಮೂಲಕ ಮಾದರಿಯಾದ ಹುಸೂರು ಗ್ರಾಮಸ್ಥರು

ಮಲೆನಾಡಿನಲ್ಲಿ ಇದೇ ಮೊದಲ ಬಾರಿ ಬರದ ಛಾಯೆ ಕಂಡಿದೆ. ಎರಡ್ಮೂರು ತಿಂಗಳು ಸುರಿಯುತಿದ್ದ ಮಳೆ ಈ ವರ್ಷ ಎರಡ್ಮೂರು ವಾರ ಕೂಡಾ ಬೀಳಲಿಲ್ಲ. ಮಳೆಯ ತೌರೂರು ಮಲೆನಾಡಿನಲ್ಲಿ ಮಳೆ ಕೊರತೆ ಅನೇಕ  ಆತಂಕಗಳಿಗೆ ಕಾರಣವಾಗಿದೆ. ಈ ಮುಂದಾಲೋಚನೆ ಮಲೆನಾಡಿನ ಜನರಿಗೆ ಜೀವಜಲದ ಮಹತ್ವ ತಿಳಿಸುತ್ತಿದೆ. ಮಳೆಗಾಲದ ಕೊನೆಯ ಅವಧಿಯ ಅಕ್ಟೋಬರ್‌, ನವೆಂಬರ್‌ ತಿಂಗಳಲ್ಲಿ ತುಂಬಿ- ತುಳುಕುತಿದ್ದ ಮಲೆನಾಡಿನ ಕೆರೆ ಕಟ್ಟೆಗಳು ಈ ವರ್ಷ ಮೊದಲಿನ ವೈಭವ ನೆನಪಿಸುವಂತಿಲ್ಲ. ಈ ಜಲಕ್ಷಾಮದ ಪರಿಣಾಮ ಅರಿತ ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದ ಹುಸೂರಿನ ರೈತರು ಬರುವ ಬೇಸಿಗೆ ಕಾಲದ ನೀರಿನ ಬವಣೆ ಬಗ್ಗೆ ಯೋಚಿಸಿ ಈಗಾಗಲೇ ಕಾರ್ಯಪ್ರವೃತ್ತರಾಗಿ ಬರಲಿರುವ ಬರಕ್ಕೆ ಸೆಡ್ಡು ಹೊಡೆಯುವ ಪೂರ್ವತಯಾರಿ ನಡೆಸಿದ್ದಾರೆ.


ತಮ್ಮೂರಿನ ಪುರಾತನ ಹೆಗ್ಗೆರೆಯನ್ನು ಸ್ಥಳೀಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಸಹಕಾರದಿಂದ ಹೂಳು ತೆಗೆದು ದಂಡೆಕಟ್ಟಿ ಮೂವತ್ತು ಅಡಿ ಆಳದ ನೀರು ನಿಲ್ಲಿಸಿದ್ದಾರೆ. ಈ ಜಲಸಂರಕ್ಷಣೆ ಕೆಲಸಕ್ಕಾಗಿ ನಿರಂತರವಾಗಿ ದುಡಿದ ಗ್ರಾಮಸ್ಥರು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಏಳುವರೆ ಲಕ್ಷ ರೂಪಾಯಿಗೆ ಸ್ಥಳಿಯ ವಂತಿಗೆ ಸೇರಿಸಿ ಒಟ್ಟೂ ೧೫ ಲಕ್ಷಕ್ಕೂ ಹೆಚ್ಚಿನ ಹಣದಲ್ಲಿ ಸುಂದರ ಕೆರೆ ನಿರ್ಮಿಸಿದ್ದಾರೆ.
 ಈ ಕೆರೆ ಪುನಶ್ಚೇತನ ಕೆಲಸಕ್ಕೆ ಸ್ವಯಂಸೇವಕರಾಗಿ ದುಡಿದ ಸ್ಥಳೀಯರು ಇಂದು ಈ ಕೆರೆಯನ್ನು ಸ್ಥಳೀಯ ಆಡಳಿತಕ್ಕೆ ಶಾಸಕ ಭೀಮಣ್ಣ ನಾಯ್ಕರ ಮೂಲಕ ಹಸ್ತಾಂತರಿಸಿದರು.


ಈ ಕೆರೆ ಪುನಶ್ಚೇತನದಿಂದ ಹುಸೂರಿನ ೪೦೦ ಎಕರೆ ಜಮೀನಿಗೆ ನೀರು ಪೂರೈಸುವ ಮಾದರಿ ಕೆಲಸ ಈಗ ಪುರ್ಣಗೊಂಡಿದೆ. ಈ ಸಾಹಸದ ಕೆಲಸವನ್ನು ಮೆಚ್ಚಿರುವ ಜನಪ್ರತಿನಿಧಿಗಳು, ಅಧಿಕಾರಿವರ್ಗ ಇಂದು ವಿಶೇಶ ಕಾರ್ಯಕ್ರಮ ರೂಪಿಸಿ ನಮ್ಮೂರು ನಮ್ಮ ಕೆರೆ ಯೋಜನೆಯ ಸಮಾರಂಭದಲ್ಲಿ ಪಾಲ್ಗೊಂಡು ಗ್ರಾಮಸ್ಥರನ್ನು ಅಭಿನಂದಿಸಿದರು. ಈ ಮಾದರಿ ಕೆಲಸದ ಕಾರಣಕ್ಕೆ ಹುಸೂರಿನ ಜನತೆ ಈಗ ಸಾರ್ವಜನಿಕ ಪ್ರಶಂಸೆಗೆ ಒಳಗಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *