ಅಧರ್ಮವೇ ಸಮಸ್ಯೆಗಳಿಗೆ ಮೂಲ‌ ಕಾರಣ: ಸ್ವರ್ಣವಲ್ಲೀ ಶ್ರೀ

ಸಿದ್ದಾಪುರ: ಮನುಷ್ಯನಿಗೆ ಮರಕ್ಕೆ, ಮೃಗಗಳಿಗೆ ರೋಗ ಹೆಚ್ಚಾಗುತ್ತಿದೆ. ಮನುಷ್ಯನಲ್ಲಿ ಹೆಚ್ಚಿದ ಅಧರ್ಮವೇ ಸಮಸ್ಯೆಗಳಿಗೆ ಮೂಲ ಕಾರಣ ಎಂದು ಸೋಂದಾ‌ ಸ್ವರ್ಣವಲ್ಲೀ ಮಹಾ ಸಂಸ್ಥಾನದ‌ ಮಠಾಧೀಶ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ‌ ಮಹಾಸ್ವಾಮೀಜಿಗಳು ‌ನುಡಿದರು.
ಮಂಗಳವಾರ ಅವರು ತಾಲೂಕಿನ ಕಲಗದ್ದೆಯ ಶ್ರೀ ನಾಟ್ಯ ವಿನಾಯಕ ಹಾಗೂ ಲಲಿತಾ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಹಮ್ಮಿಕೊಂಡ‌ ಗಾಯತ್ರೀ ಜಪ ಯಜ್ಞದಲ್ಲಿ ಸಾನ್ನಿಧ್ಯ ನೀಡಿ ಆಶೀರ್ವಚನ‌ ನುಡಿದರು.


ಕೊರೋನಾದಂತಹ ಸಮಸ್ಯೆ ಮನುಷ್ಯನಿಗೆ ಕಾಡುತ್ತಿದೆ. ಮರಕ್ಕೆ ಎಲೆ ಚುಕ್ಕೆ ರೋಗ ಬಂದಿದೆ. ಪರಿಹಾರ ಸಿಕ್ಕಿಲ್ಲ. ದೇವರೇ ಕಾಪಾಡಬೇಕು ಎಂಬ ಸ್ಥಿತಿಯಲ್ಲಿದೆ. ಪೂಜಿಸುವ ಗೋವುಗಳಿಗೆ ಚರ್ಮಗಂಟು ರೋಗ ಬಂದಿದೆ. ಅಧರ್ಮ ಹೆಚ್ಚಿದ್ದು ರೋಗಗಳಿಗೆ ಮೂಲ‌ ಕಾರಣ. ಉತ್ತರ ಕಾಣದ ಸಮಸ್ಯೆ, ರೋಗಗಳಿಗೆ ಅಧರ್ಮ ಕಾರಣ. ಇದರ ನಿವಾರಣೆಗೆ ಗಾಯತ್ರೀ ಮಾತೆ ಉಪಾಸನೆ ‌ಮಾಡಬೇಕು ಎಂದರು.
ಅಶುದ್ಧವಾದ ಮನಸ್ಸು ಅನೇಕ‌ ಸಮಸ್ಯೆಗಳಿಗೆ ಕಾರಣ ಆಗುತ್ತಿದೆ. ಕುಟುಂಬ ಕಲಹಗಳು, ಪತಿ ‌ಪತ್ನಿಯರ ವಿರಸಗಳು ಹೆಚ್ಚಾಗುತ್ತಿದೆ. ಪತಿ ಪತ್ನಿಯರೇ ದೂರವಾದರೆ ಕುಟುಂಬ ವ್ಯವಸ್ಥೆಗೇ‌ ಧಕ್ಕೆ ಆಗಲಿದೆ ಹೆಚ್ಚಾಗಿದೆ. ನಮ್ಮ ಮನಸ್ಸು ಶುದ್ದವಾಗಿದ್ದರೆ ಇಂಥ‌ ಕಲಹಗಳು ಇರುವದಿಲ್ಲ. ಮನಸ್ಸು ಶುದ್ದಿಗೆ, ರೋಗ ರುಜಿನೆಗಳ ನಿವಾರಣೆಗೆ, ಆರೋಗ್ಯಕ್ಕೆ, ಭಗವಂತನ ಸಾಕ್ಷಾತ್ಕಾರಕ್ಕೆ ಇಂಥ ಗಾಯತ್ರೀ ಮಾತೆ ಉಪಾಸನೆ ಸದಾ ಆಗಬೇಕು ಎಂದರು.


ಗಾಯತ್ರೀ ಎಂದರೆ ಬ್ರಹ್ಮ ವಿದ್ಯೆ. ಬ್ರಹ್ಮ ಸಾಕ್ಷಾತ್ಕಾರಕ್ಕೆ ಗಾಯತ್ರಿ ಉಪಾಸನೆ ಮಾಡಬೇಕು. ಬ್ರಹ್ಮ ವಿದ್ಯೆಯ ಮೂಲಕ ಬ್ರಹ್ಮ ಸಾಕ್ಷಾತ್ಕಾರ ಮಾಡಿಕೊಳ್ಳಬೇಕು. ಪರಮಾತ್ಮನ ಅನುಭವಕ್ಕೆ ಗಾಯತ್ರೀ ಉಪಾಸನೆ ಮಾಡಬೇಕು ಎಂದರು.
ಗಾಯತ್ರೀ ಉಪಾಸನೆ ನಿತ್ಯವೂ ಆಗಬೇಕಾದ ಅನುಷ್ಠಾನ. ಉಪನೀತರು ಮಾಡಬೇಕಾದ ಮೂಲಭೂತ ಕರ್ತವ್ಯ ಗಾಯತ್ರೀ ಉಪಾಸನೆ ಎಂದು ಹೇಳಿದರು.
ದೇವಸ್ಥಾನದ ಪ್ರಧಾನ ವಿಶ್ವಸ್ಥ ವಿನಾಯಕ ಹೆಗಡೆ ಕಲಗದ್ದೆ, ರಷ್ಮಿ ಹೆಗಡೆ ದಂಪತಿಗಳು ಶ್ರೀಗಳ ಪಾದ ಪೂಜೆ ನಡೆಸಿದರು.
ಈ ವೇಳ ಗಾಯತ್ರೀ‌ ಮಹಾಸತ್ರದ ಎರಡನೇ ದಿನದ ಪೂರ್ಣಾಹುತಿಯಲ್ಲಿ ಶ್ರೀಗಳು ಪಾಲ್ಗೊಂಡರು. ಮಾತೆಯರು ಲಲಿತಾ ಸಹಸ್ರನಾಮ ಅರ್ಚನೆ‌ ನಡೆಯಿತು.

ಗಾಯತ್ರೀ ಅನುಷ್ಠಾನ ಮಾಡುವ ಕ್ರಮ ಮನೆ ಮನೆಗಳಲ್ಲಿ ಹೆಚ್ಚಬೇಕು. ಆ ದಿನಗಳು ಮರಳಿ ಬರಬೇಕು. ಸಂಧ್ಯಾ ವಂದನೆ ಮನೆ ಮನೆಗಳಲ್ಲಿ ನಡೆಯಲಿ. ಕ್ಷೇತ್ರದಲ್ಲಿ ಕೂಡ ಶಕ್ತಿ ಹೆಚ್ಚಲಿ, ಗಾಯತ್ರೀ ಮಹಾ ಸತ್ರದಲ್ಲಿ ಪಾಲ್ಗೊಂಡವರಿಗೂ ದೇವರ ಅನುಗ್ರಹ ಸಿಗಲಿ-ಸ್ವರ್ಣವಲ್ಲಿ ಶ್ರೀ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *