ಅಧರ್ಮವೇ ಸಮಸ್ಯೆಗಳಿಗೆ ಮೂಲ‌ ಕಾರಣ: ಸ್ವರ್ಣವಲ್ಲೀ ಶ್ರೀ

ಸಿದ್ದಾಪುರ: ಮನುಷ್ಯನಿಗೆ ಮರಕ್ಕೆ, ಮೃಗಗಳಿಗೆ ರೋಗ ಹೆಚ್ಚಾಗುತ್ತಿದೆ. ಮನುಷ್ಯನಲ್ಲಿ ಹೆಚ್ಚಿದ ಅಧರ್ಮವೇ ಸಮಸ್ಯೆಗಳಿಗೆ ಮೂಲ ಕಾರಣ ಎಂದು ಸೋಂದಾ‌ ಸ್ವರ್ಣವಲ್ಲೀ ಮಹಾ ಸಂಸ್ಥಾನದ‌ ಮಠಾಧೀಶ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ‌ ಮಹಾಸ್ವಾಮೀಜಿಗಳು ‌ನುಡಿದರು.
ಮಂಗಳವಾರ ಅವರು ತಾಲೂಕಿನ ಕಲಗದ್ದೆಯ ಶ್ರೀ ನಾಟ್ಯ ವಿನಾಯಕ ಹಾಗೂ ಲಲಿತಾ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಹಮ್ಮಿಕೊಂಡ‌ ಗಾಯತ್ರೀ ಜಪ ಯಜ್ಞದಲ್ಲಿ ಸಾನ್ನಿಧ್ಯ ನೀಡಿ ಆಶೀರ್ವಚನ‌ ನುಡಿದರು.


ಕೊರೋನಾದಂತಹ ಸಮಸ್ಯೆ ಮನುಷ್ಯನಿಗೆ ಕಾಡುತ್ತಿದೆ. ಮರಕ್ಕೆ ಎಲೆ ಚುಕ್ಕೆ ರೋಗ ಬಂದಿದೆ. ಪರಿಹಾರ ಸಿಕ್ಕಿಲ್ಲ. ದೇವರೇ ಕಾಪಾಡಬೇಕು ಎಂಬ ಸ್ಥಿತಿಯಲ್ಲಿದೆ. ಪೂಜಿಸುವ ಗೋವುಗಳಿಗೆ ಚರ್ಮಗಂಟು ರೋಗ ಬಂದಿದೆ. ಅಧರ್ಮ ಹೆಚ್ಚಿದ್ದು ರೋಗಗಳಿಗೆ ಮೂಲ‌ ಕಾರಣ. ಉತ್ತರ ಕಾಣದ ಸಮಸ್ಯೆ, ರೋಗಗಳಿಗೆ ಅಧರ್ಮ ಕಾರಣ. ಇದರ ನಿವಾರಣೆಗೆ ಗಾಯತ್ರೀ ಮಾತೆ ಉಪಾಸನೆ ‌ಮಾಡಬೇಕು ಎಂದರು.
ಅಶುದ್ಧವಾದ ಮನಸ್ಸು ಅನೇಕ‌ ಸಮಸ್ಯೆಗಳಿಗೆ ಕಾರಣ ಆಗುತ್ತಿದೆ. ಕುಟುಂಬ ಕಲಹಗಳು, ಪತಿ ‌ಪತ್ನಿಯರ ವಿರಸಗಳು ಹೆಚ್ಚಾಗುತ್ತಿದೆ. ಪತಿ ಪತ್ನಿಯರೇ ದೂರವಾದರೆ ಕುಟುಂಬ ವ್ಯವಸ್ಥೆಗೇ‌ ಧಕ್ಕೆ ಆಗಲಿದೆ ಹೆಚ್ಚಾಗಿದೆ. ನಮ್ಮ ಮನಸ್ಸು ಶುದ್ದವಾಗಿದ್ದರೆ ಇಂಥ‌ ಕಲಹಗಳು ಇರುವದಿಲ್ಲ. ಮನಸ್ಸು ಶುದ್ದಿಗೆ, ರೋಗ ರುಜಿನೆಗಳ ನಿವಾರಣೆಗೆ, ಆರೋಗ್ಯಕ್ಕೆ, ಭಗವಂತನ ಸಾಕ್ಷಾತ್ಕಾರಕ್ಕೆ ಇಂಥ ಗಾಯತ್ರೀ ಮಾತೆ ಉಪಾಸನೆ ಸದಾ ಆಗಬೇಕು ಎಂದರು.


ಗಾಯತ್ರೀ ಎಂದರೆ ಬ್ರಹ್ಮ ವಿದ್ಯೆ. ಬ್ರಹ್ಮ ಸಾಕ್ಷಾತ್ಕಾರಕ್ಕೆ ಗಾಯತ್ರಿ ಉಪಾಸನೆ ಮಾಡಬೇಕು. ಬ್ರಹ್ಮ ವಿದ್ಯೆಯ ಮೂಲಕ ಬ್ರಹ್ಮ ಸಾಕ್ಷಾತ್ಕಾರ ಮಾಡಿಕೊಳ್ಳಬೇಕು. ಪರಮಾತ್ಮನ ಅನುಭವಕ್ಕೆ ಗಾಯತ್ರೀ ಉಪಾಸನೆ ಮಾಡಬೇಕು ಎಂದರು.
ಗಾಯತ್ರೀ ಉಪಾಸನೆ ನಿತ್ಯವೂ ಆಗಬೇಕಾದ ಅನುಷ್ಠಾನ. ಉಪನೀತರು ಮಾಡಬೇಕಾದ ಮೂಲಭೂತ ಕರ್ತವ್ಯ ಗಾಯತ್ರೀ ಉಪಾಸನೆ ಎಂದು ಹೇಳಿದರು.
ದೇವಸ್ಥಾನದ ಪ್ರಧಾನ ವಿಶ್ವಸ್ಥ ವಿನಾಯಕ ಹೆಗಡೆ ಕಲಗದ್ದೆ, ರಷ್ಮಿ ಹೆಗಡೆ ದಂಪತಿಗಳು ಶ್ರೀಗಳ ಪಾದ ಪೂಜೆ ನಡೆಸಿದರು.
ಈ ವೇಳ ಗಾಯತ್ರೀ‌ ಮಹಾಸತ್ರದ ಎರಡನೇ ದಿನದ ಪೂರ್ಣಾಹುತಿಯಲ್ಲಿ ಶ್ರೀಗಳು ಪಾಲ್ಗೊಂಡರು. ಮಾತೆಯರು ಲಲಿತಾ ಸಹಸ್ರನಾಮ ಅರ್ಚನೆ‌ ನಡೆಯಿತು.

ಗಾಯತ್ರೀ ಅನುಷ್ಠಾನ ಮಾಡುವ ಕ್ರಮ ಮನೆ ಮನೆಗಳಲ್ಲಿ ಹೆಚ್ಚಬೇಕು. ಆ ದಿನಗಳು ಮರಳಿ ಬರಬೇಕು. ಸಂಧ್ಯಾ ವಂದನೆ ಮನೆ ಮನೆಗಳಲ್ಲಿ ನಡೆಯಲಿ. ಕ್ಷೇತ್ರದಲ್ಲಿ ಕೂಡ ಶಕ್ತಿ ಹೆಚ್ಚಲಿ, ಗಾಯತ್ರೀ ಮಹಾ ಸತ್ರದಲ್ಲಿ ಪಾಲ್ಗೊಂಡವರಿಗೂ ದೇವರ ಅನುಗ್ರಹ ಸಿಗಲಿ-ಸ್ವರ್ಣವಲ್ಲಿ ಶ್ರೀ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *