ಶಿವಮೊಗ್ಗ ಕಾಂಗ್ರೆಸ್ ನಲ್ಲಿ ಭಿನ್ನಮತ: ಸಚಿವರ ಅಡುಗೆ ಮನೆಯಲ್ಲಿರುವವರ ದೂರಿಗೆ ಡೋಂಟ್ ಕೇರ್; ತಾರಕಕ್ಕೇರಿದ ಬೇಳೂರು- ಮಧು ಗುದ್ದಾಟ!

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ನಡುವಿನ ತಿಕ್ಕಾಟ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ.

Madhu Bangarappa and Belur Gopalakrishna

ಬೆಂಗಳೂರು: ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ನಡುವಿನ ತಿಕ್ಕಾಟ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ.

ಸಚಿವ ಮಧು ಬಂಗಾರಪ್ಪ ವಿರುದ್ಧ ಅಸಮಾಧಾನ ಹೊರಹಾಕಿದ್ದ ಬೇಳೂರು ತಾನೂ ಸಚಿವ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದರು. ಮಾಜಿ ಸಿಎಂ ಮಗ ಎಂದು ಮಧುಗೆ ಸಚಿವ ಸ್ಥಾನ ನೀಡಿದ್ದಾರೆ ಎಂದೂ ಆರೋಪಿಸಿದ್ದರು.

ಜಿಲ್ಲಾ ಉಸ್ತುವಾರಿ ಸಚಿವರು ಯಾರೋ ಗೊತ್ತಿಲ್ಲ ಎಂದಿರುವ ಬೇಳೂರು ಗೋಪಾಲಕೃಷ್ಣ ವಿರುದ್ಧ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ  ಶುಕ್ರವಾರ ಮಧು ಬಂಗಾರಪ್ಪ ಬೆಂಬಲಿಗರು ದೂರು ಸಲ್ಲಿಸಿದರು.

ಈ ದೂರಿನ ಬಗ್ಗೆ ಪ್ರತಿಕ್ರಿಯಿಸಿರುವ ಬೇಳೂರು ಗೋಪಾಲ ಕೃಷ್ಣ, ಕೆಪಿಸಿಸಿ ಅಧ್ಯಕ್ಷರಿಗೆ ನನ್ನ ವಿರುದ್ಧ ದೂರು ನೀಡಿರುವವರು ಆ ಸಚಿವರ ಅಡುಗೆ ಮನೆಯಲ್ಲಿರುವವರು. ಅವರಲ್ಲಿ ಪಕ್ಷಕ್ಕೆ ದುಡಿದವರು ಯಾರು ಎಂಬುದು ಗೊತ್ತಿದೆ. ನಾನು ಸಹ ನಾಳೆ 100 ಜನರನ್ನು ಕರೆದುಕೊಂಡು ಹೋಗಬಲ್ಲೆ, ಆ ತಾಕತ್ತು ನನಗಿದೆ. ಅಲ್ಲದೆ, ನಾನು ಉಸ್ತುವಾರಿ ಸಚಿವರ ಕಾರ್ಯವೈಖರಿ ಬದಲಿಸಿಕೊಳ್ಳುವಂತೆ ನೇರವಾಗಿ ಹೇಳಿದ್ದೇನೆ. ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ನೇರವಾಗಿ ಹರಿಹಾಯ್ದಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಚಿವರು ಶಾಸಕರುಗಳನ್ನು ಕರೆದುಕೊಂಡು ಕ್ಷೇತ್ರದಲ್ಲಿ ಕೆಲಸ ಮಾಡಬೇಕು. ಕೆಡಿಪಿ ಮೀಟಿಂಗ್ ಮತ್ತೊಂದು ಮೀಟಿಂಗ್ ಮಾಡದೇ ಹೋದರೆ ಏನು ಮಾಡುವುದು. ಅದಕ್ಕೆ ನಾನು ಉತ್ತರ ಕೊಟ್ಟಿದ್ದೇನೆ. ಅದನ್ನು ಬಿಟ್ಟರೆ ಬೇರೆ ಏನು ಇಲ್ಲ ಎಂದು ತಿಳಿಸಿದರು.

ತಮ್ಮ ಹೇಳಿಕೆಯಿಂದ ಪಕ್ಷಕ್ಕೆ ಮುಜುಗರ ಆಗುತ್ತಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾರ್ಯಾರು ಪಕ್ಷಕ್ಕೆ ದುಡಿದಿದ್ದಾರೆ ಚೆನ್ನಾಗಿ ಗೊತ್ತಿದೆ. ನಿತ್ಯ ಅವರೆಲ್ಲ ಅವರ ಅಡುಗೆ ಕೊಣೆಯಲ್ಲಿ ಇರುವವರು ಅಷ್ಟೇ. ಪಕ್ಷಕ್ಕೆ ನಾನು ಸಹ ಮುಜುಗರ ಮಾಡೋಕೆ ಆಗಲ್ಲ. ನಾನು ಸರ್ಕಾರದ ವಿರುದ್ಧವಾಗಲಿ, ಪಕ್ಷದ ಬಗ್ಗೆ ಮಾತನಾಡಿಲ್ಲ ನಾನು ನೇರವಾಗಿ ಹೇಳಿದ್ದು ಉಸ್ತುವಾರಿ ಸಚಿವರಿಗೆ ಅಷ್ಟೇ. ಅವರ ಕಾರ್ಯವೈಖರಿ ತಿದ್ದುಪಡಿ ಮಾಡಿಕೊಳ್ಳಲಿ ಎಂದಷ್ಟೇ ಹೇಳಿದ್ದೆ. ನನ್ನನ್ನು ಕಡೆಗಣಿಸುತ್ತಿದ್ದಾರೆ. ಅವರ ದೂರು ಬಗ್ಗೆ ನಾನು ತಲೆಕಡೆಸಿಕೊಳ್ಳಲ್ಲ. ಮಾಜಿ ಸಿಎಂ ಮಗ ಎಂದು ಸಚಿವ ಸ್ಥಾನ ಕೊಟ್ಟಿದ್ದಾರೆ ಎಂದಿದ್ದಾರೆ.

ಬೇಳೂರು ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಮಧು ಬಂಗಾರಪ್ಪ, ಇದೆಲ್ಲ ಪಕ್ಷದ ಆಂತರಿಕ ವಿಚಾರ, ಏನೇ ಇದ್ದರೂ ಪಕ್ಷವೇ ನಿರ್ಣಯ ಕೈಗೊಳ್ಳುತ್ತದೆ. ನನಗೆ ಬೇರೆ ಕೆಲಸ ಕೊಟ್ಟಿದ್ದಾರೆ. ನಾವು ಪಕ್ಷದ ಚಿಹ್ನೆಯಡಿ ಗೆದ್ದಿದ್ದೇವೆ, ಹುಷಾರಾಗಿ ಮಾತಾಡಬೇಕು.  ನಾವು ಪಕ್ಷದ ಆಧಾರದ ಮೇಲೆ ಕೆಲಸ ಮಾಡುತ್ತೇವೆ, ನಾವು ಪಕ್ಷದ ಆಳ್ವಿಕೆಯಲ್ಲಿ ಇದ್ದೇವೆ, ನಾವು ಸ್ವತಂತ್ರವಾಗಿ ಗೆದ್ದಿಲ್ಲ, ಇದು ಪಕ್ಷದ ಗೆಲುವು ಮತ್ತು ನಾವು ಹೇಗೆ ವರ್ತಿಸಬೇಕು ಎಂಬುದನ್ನು ನಾವು ತಿಳಿದಿರಬೇಕು. ಯಾವುದೇ ವ್ಯಕ್ತಿಗಿಂತ ಪಕ್ಷ ಮುಖ್ಯ, ಈ ಬಗ್ಗೆ ಸಿಎಂ, ಉಪಮುಖ್ಯಮಂತ್ರಿ ಹೇಳಿದ್ದಾರೆ. ನಾನಾಗಲಿ ಬೇಳೂರಾಗಲಿ ಹುಷಾರಾಗಿ ಹೇಳಿಕೆ ಕೊಡಬೇಕು. ಅವರ ಹೇಳಿಕೆಗೆ ನಾನು ಕಮೆಂಟ್ ಮಾಡಲ್ಲ. ಎಲ್ಲಿ ಉತ್ತರ ಕೊಡಬೇಕೋ ಅಲ್ಲಿ ಉತ್ತರ ಕೊಡ್ತೇನೆ ಎಂದಿದ್ದಾರೆ.

ಇತ್ತೀಚೆಗಷ್ಟೇ ಪಕ್ಷದಲ್ಲಿನ ಭಿನ್ನಾಭಿಪ್ರಾಯದ ಊಹಾಪೋಹಗಳಿಗೆ ತೆರೆ ಎಳೆದಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು,  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ನಲ್ಲಿ ಯಾವುದೇ ಗೊಂದಲವಿಲ್ಲ, ಏನೇ ಸಮಸ್ಯೆಯಿದ್ದರೂ ನಾಯಕರು ನಮ್ಮೊಂದಿಗೆ ಮಾತನಾಡಬೇಕು, ಮಾಧ್ಯಮಗಳೊಂದಿಗೆ ಅಲ್ಲ ಎಂದಿದ್ದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *