ದೇಶಪಾಂಡೆ ಸ್ವಂತ ಖರ್ಚಿನಿಂದ ಮೆಡಿಕಲ್ ಕಾಲೇಜು, ಅಸ್ಪತ್ರೆ ನಿರ್ಮಿಸಲಿ ಅನಂತಮೂರ್ತಿ ಹೆಗಡೆ ಪ್ರತಿಕ್ರೀಯೆ

ಶಿರಸಿ: ಮೆಡಿಕಲ್‌ ಕಾಲೇಜು, ಹೈಟೆಕ್ ಆಸ್ಪತ್ರೆ, ಜಿಲ್ಲೆಯ ಜನರ ನಿರುದ್ಯೋಗ ನಿವಾರಣೆ ಕೆಲಸ ಬಹುಕಾಲ ರಾಜ್ಯ ಭಾರ‌ ಮಾಡಿದ ರಾಜಕಾರಣಿಗಳ ಕರ್ತವ್ಯ. ಅದರಲ್ಲೂ ಹೆಚ್ಚು ಬಾರಿ ಜಿಲ್ಲೆಯಲ್ಲಿ ಅಧಿಕಾರ ಮಾಡಿದ ದೇಶಪಾಂಡೆ ಸಾಹೇಬರು ಮಾಡಬೇಕಿತ್ತು ಎಂದು ಹೇಳಿದರೆ, ಜಿಲ್ಲಾ‌ ಕಾಂಗ್ರೆಸ್ ನಾಯಕರೆಲ್ಲ ನನ್ನ‌ ಮೇಲೆ ವಾಗ್ದಾಳಿ ಮಾಡುತ್ತಾರೆ ಎಂದರೆ ಅದರರ್ಥ ಏನು? ಸತ್ಯ ಹೇಳಿದರೆ ಸಹಿಸಲು ಆಗುವುದಿಲ್ಲ ಎಂದೇ ಅಲ್ಲವೇ?
ನಮ್ಮ ಪಕ್ಕದ ಜಿಲ್ಲೆಯಾದ ದಕ್ಷಿಣ ಕನ್ನಡವನ್ನು ನೋಡಿ ಕಲಿಯಬೇಕು, ಅಭಿವೃದ್ಧಿ ವಿಷಯದಲ್ಲಿ ಎಲ್ಲರೂ ಒಂದಾಗುತ್ತಾರೆ, ಹೈಟೆಕ್ ಆಸ್ಪತ್ರೆ ಆದರೆ ನಿಮ್ಮ ಕುಟುಂಬಕ್ಕೂ ಅನುಕೂಲ ಆಗತ್ತೆ ಅಲ್ಲವೇ ಎಂದು ಅನಂತಮೂರ್ತಿ ಹೆಗಡೆ ಪ್ರಶ್ನಿಸಿದ್ದಾರೆ.

ನಾನು ವೈಯಕ್ತಿಕವಾಗಿ ಎಲ್ಲೂ, ಯಾರ ಬಗ್ಗೆ, ಯಾವ ಪಕ್ಷದ ಬಗ್ಗೆ ಹೇಳಿಲ್ಲ, ಸಾಹೇಬರು ಐದು ಬಾರಿ ಮಂತ್ರಿ , ಬೃಹತ್ ಕೈಗಾರಿಕೆ ಮಂತ್ರಿ, ಸುಮಾರು 25 ವರ್ಷ ನಮ್ಮ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದರು. ಇವತ್ತಿಗೂ ನಮ್ಮಂತಹ ಯುವಕರು ಆಸ್ಪತ್ರೆ ಕೊಡಿಸಿ, ಜೀವ ಉಳಿಸಿ ಎಂದು ಬೀದಿಯಲ್ಲಿ ನಿಂತು ಹೋರಾಟ ಮಾಡಬೇಕೆಂದರೆ ಅದಕ್ಕೆ ಯಾರು ಹೊಣೆ? ಎಂದು ಕೇಳಿದ ಅನಂತಮೂರ್ತಿ ಹೆಗಡೆ, ಉದ್ಯೋಗವಿಲ್ಲದೆ ನಮ್ಮ -ನಿಮ್ಮ ಮನೆ ಮಕ್ಕಳು ದೂರದ ಗೋವಾಕ್ಕೆ , ಬೆಂಗಳೂರಿಗೆ, ಮುಂಬೈಗೆ ಕೆಲಸಕ್ಕೆ ಹೋಗುವ ಪರಿಸ್ಥಿತಿ ಇದೆ , ಪಾಪ ತಿಂಗಳಿಗೆ ಕೇವಲ 10 -12 ಸಾವಿರಕ್ಕೆ ಬೇಕರಿ, ಹೋಟೆಲ್ ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ನೆನೆಸಿಕೊಂಡರೆ ಕಣ್ಣಲ್ಲಿ ನೀರು ಬರುತ್ತದೆ, ನಮ್ಮ ಜಿಲ್ಲೆಯಲ್ಲಿ ಒಂದೇ ಒಂದು ಫ್ಯಾಕ್ಟರಿ ಇಲ್ಲ. ನಿಜವಾಗಿಯೂ ನಾಚಿಕೆ ಆಗಬೇಕು. ಕೊನೆ ಕಾಲದಲ್ಲಿ ಮಕ್ಕಳು ತಂದೆ ತಾಯಿಯನ್ನ ಬಿಟ್ಟು ಯಾವುದೋ ಊರಿನಲ್ಲಿ ಪರದೇಸಿಗಳಾಗಿ ಬದುಕುವ ಪರಿಸ್ಥಿತಿ ಎದುರಾಗಿದೆ,
ಇಲ್ಲಿ ಅಪ್ಪ ಅಮ್ಮನಿಗೆ ಹುಷಾರಿಲ್ಲ ಎಂದರೂ ಚಿಕಿತ್ಸೆ ಕೊಡಿಸಲು ಅಸ್ಪತ್ರೆ ಇಲ್ಲ , ಆರೈಕೆ ಮಾಡಲು ಮಕ್ಕಳಿಲ್ಲ,
ಅಪ್ಪ ಅಮ್ಮ ಹಾಕುವ ಕಣ್ಣೀರು ಹೃದಯ ತಟ್ಟುವದಿಲ್ಲವೇ ಎಂದೂ ಕೇಳಿದ್ದಾರೆ.‌

ಕುಮಟಾ ಭಾಗದ ಹಿರೆಗುತ್ತಿಯಲ್ಲಿ 1800 ಏಕರೆ KIADB ಜಾಗ ಇದೆ , ಮೂರೂರು ಗುಡ್ಡ ಸುಮಾರು 3 -5 ಸಾವಿರ ಎಕರೆ ಇದೆ , ಒಂದೇ ಒಂದು ಮರವನ್ನ ಕಡಿಯದೆ ನಮ್ಮ ಜಿಲ್ಲೆಯಲ್ಲಿ ಹಲವಾರು ಕೈಗಾರಿಕೆ ಮಾಡುವ ಜಾಗ ಪ್ರತಿ ತಾಲೂಕಿನಲ್ಲಿದೆ. ಏಷ್ಟೋ ಲಕ್ಷ ನಮ್ಮ ಜಿಲ್ಲೆ ಜನರಿಗೆ ಉದ್ಯೋಗ ನೀಡಬಹುದಿತ್ತು. ಆದರೆ ಕೈಗಾರಿಕೆ ಮಾಡುವ ಇಚ್ಛಾಶಕ್ತಿ ಇಲ್ಲ ಅಷ್ಟೇ ಎಂದ ಅವರು ಪಕ್ಷದ ವಿಚಾರ ಬಿಡಿ , ಆಸ್ಪತ್ರೆ ವಿಚಾರ ಬಂದಾಗ ಎಲ್ಲ ವಿಷಯ ಬದಿಗಿಟ್ಟು ಹೋರಾಟ ಮಾಡೋಣ, ಒಂದು ವೇಳೆ ಆಸ್ಪತ್ರೆ ಆದರೆ ನಮಗೆ ಒಳ್ಳೇದು ಅಲ್ಲವೇ?

ದೇಶಪಾಂಡೆ ಸಾಹೇಬರ ಹತ್ತಿರ ಟೊಯೊಟಾ, ಹೊಂಡ ಅಂತಹ ಕಂಪನಿಯಲ್ಲಿ ಪಾಲುದಾರಿಕೆ, ನೂರಾರು ಎಕರೆ ಜಾಗ, ಸಾವಿರಾರು ಕೋಟಿ ರೂಪಾಯಿ ಆಸ್ತಿ ಇದೆ ಎಂಬುದು ಎಲ್ಲರಿಗೂ ಗೊತ್ತಿದೆ.

ಅವರು ಮನಸ್ಸು ಮಾಡಿದರೆ 100 ಅಸ್ಪತ್ರೆ ಕಟ್ಟಿಸುವ ಶಕ್ತಿ ಅವರಿಗಿದೆ ಎಂಬುದು ಕೂಡ ನಮ್ಮ ಜಿಲ್ಲೆ ಜನರಿಗೆ ಗೊತ್ತಿದೆ.

ಸಾಹೇಬರಿಗೆ ನಮ್ಮ ಜಿಲ್ಲೆ ಅಸ್ತಿತ್ವ, ಅಧಿಕಾರ, ಗೌರವ ಎಲ್ಲವನ್ನೂ ಕೂಡ ಕೊಟ್ಟಿದೆ. ಸಾಹೇಬರು ಜಿಲ್ಲೆಯ ಜನರಿಗೆ ಸಹಾಯ ಮಾಡಲಿ ಎಂಬುದಾಗಿ ಅವರಲ್ಲಿ ವಿನಂತಿಸಿಕೊಳ್ಳುತ್ತೇನೆ ,
ಎಂದು ಹೇಳಿದ ಅವರು, ಶಿರಸಿ ಅಥವಾ ಕುಮಟಾ ಭಾಗದಲ್ಲಿ ಕೆ.ಎಸ್. ಹೆಗ್ಡೆ ತರಹದ ಒಂದು ಒಳ್ಳೆಯ ಅಸ್ಪತ್ರೆ , ಮೆಡಿಕಲ್ ಕಾಲೇಜು ಅವರ ತಂದೆಯವರಾದ ವಿ.ಆರ್.ದೇಶಪಾಂಡೆ ಅವರ ಹೆಸರಿನಲ್ಲಿ ನಿರ್ಮಿಸಲಿ, ಅವರೇ ಸ್ವಂತ ಖರ್ಚಿನಿಂದ ನಿರ್ಮಿಸಲಿ, ನಾವೆಲ್ಲರೂ ಅವರನ್ನ ನಮ್ಮ ಜೀವನ ಪರ್ಯಂತ ನಮಿಸೋಣ.

ನಾನು ವೈಯಕ್ತಿಕವಾಗಿ ದೇಶಪಾಂಡೆ ಸಾಹೇಬರ ಅಭಿಮಾನಿ, ಅವರ ಬಗ್ಗೆ ಅಪಾರ ಗೌರವವಿದೆ ಎಂದೂ ಹೇಳಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *