ಕುಡಿಯುವ ನೀರಿಗೆ ಮೊದಲ ಆದ್ಯತೆ

ಈ ವರ್ಷ ಬರಗಾಲ ಪರಿಸ್ಥಿತಿ ಎದುರಿಸಲು ಸಿದ್ಧರಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕ ಭೀಮಣ್ಣ ನಾಯ್ಕ ಕುಡಿಯುವ ನೀರು ಮತ್ತು ಅದಕ್ಕೆ ಸಂಬಂಧಿಸಿದ ಕಾಮಗಾರಿ, ಕೆಲಸಗಳಿಗೆ ಆದ್ಯತೆ ನೀಡುವಂತೆ ಆದೇಶಿಸಿದರು. ಸಿದ್ಧಾಪುರ ತಹಸಿಲ್ಧಾರರ ಕಛೇರಿಯ ಸಭಾಭವನದಲ್ಲಿ ನಡೆದ ಬರ ನಿರ್ವಹಣೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ನಗರ ಪ್ರದೇಶ,ಗ್ರಾಮೀಣ ಪ್ರದೇಶ, ವಸತಿಶಾಲೆಗಳು,ವಸತಿ ನಿಲಯಗಳಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದ ಮುನ್ನೆಚ್ಚರಿಕೆ ವಹಿಸುವ ಭಾಗವಾಗಿ ನೀರಿನ ಮೂಲ, ಲಭ್ಯತೆಯ ಸಾಧ್ಯತೆ, ಉಪಕ್ರಮಗಳ ಬಗ್ಗೆ ಆದ್ಯತೆಯ ಮೇರೆಗೆ ಸಿದ್ಧರಾಗಲು ತಿಳಿಸಿದರು.

ಜಿಲ್ಲಾ ಪಂಚಾಯತ್‌ ಇಂಜಿನಿಯರಿಂಗ್‌ ಮತ್ತು ನೀರಿನ ಪೂರೈಕೆ ಮತ್ತು ಕಾಮಗಾರಿ ನಿರ್ವಹಿಸುವವರೆಲ್ಲರೂ ತಕ್ಷಣ ತಮ್ಮ ವ್ಯಾಪ್ತಿಯ ಕೆಲಸಗಳನ್ನು ನಿರ್ವಹಿಸಿ ಸಂಬಂಧಿಸಿದವರೊಂದಿಗೆ ಸಮನ್ವಯದೊಂದಿಗೆ ಬರಲಿರುವ ಪರಿಸ್ಥಿತಿ ಎದುರಿಸಲು ತಯಾರಾಗಬೇಕು. ತಾಲೂಕಿನಲ್ಲಿ ಜನರ ಕುಡಿಯುವ ನೀರು ಮತ್ತು ಬಳಕೆಗೆ ಸಂಬಂಧಿಸಿದ ಅನುಕೂಲ ಮಾಡಿಕೊಡಲು ಸಮರೋಪಾದಿಯಲ್ಲಿ ಕೆಲಸಮಾಡಬೇಕೆಂದು ತಾಕೀತು ಮಾಡಿದರು.

ರೈತರಿಗೆ ಮೇವಿನ ಬೀಜ ವಿತರಿಸಿ ಮಾತನಾಡಿದ ಅವರು ಬೆಳೆ, ಜಾನುವಾರುಗಳು, ಕೃಷಿ ಸಂಬಂಧಿ ಅಗತ್ಯಗಳ ಜೊತೆಗೆ ನೀರಿಗೆ ಆದ್ಯತೆ ನೀಡಬೇಕು. ನೀರಿನ ಲಭ್ಯತೆ, ಸಾಧ್ಯತೆಗಳನ್ನು ನೋಡಿ ಕೃಷಿ ಚಟುವಟಿಕೆ ನಡೆಸುವಂತೆ ರೈತರನ್ನು ಮನ ಒಲಿಸಲು ಅಧಿಕಾರಿಗಳಿಗೆ ಸೂಚಿಸಿದರು.

ನೀರಿನ ಮೂಲಗಳನ್ನು ಶೋಧಿಸಿ ಅಗತ್ಯ ಕೆಲಸಗಳ ಪಟ್ಟಿ ಮಾಡಲು ೧೫ ದಿನಗಳ ಕಾಲಮಿತಿಯ ಗಡುವು ನೀಡಿದರು.ತಹಸಿಲ್ಧಾರ ಎಂ.ಆರ್.‌ ಕುಲಕರ್ಣಿ, ಎ.ಸಿ.ಎಫ್.‌ ಬಾಸೂರು, ತಾ.ಪಂ. ಕಾ.ನಿ.ಅ. ದೇವರಾಜ್‌ ಹಿತ್ತಲಕೊಪ್ಪ ಸೇರಿ ಎಲ್ಲಾ ಇಲಾಖೆಗಳ ಬಹುತೇಕ ಅಧಿಕಾರಿಗಳು ಉಪಸ್ಥಿತರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *