ಕುಡಿಯುವ ನೀರಿಗೆ ಮೊದಲ ಆದ್ಯತೆ

ಈ ವರ್ಷ ಬರಗಾಲ ಪರಿಸ್ಥಿತಿ ಎದುರಿಸಲು ಸಿದ್ಧರಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕ ಭೀಮಣ್ಣ ನಾಯ್ಕ ಕುಡಿಯುವ ನೀರು ಮತ್ತು ಅದಕ್ಕೆ ಸಂಬಂಧಿಸಿದ ಕಾಮಗಾರಿ, ಕೆಲಸಗಳಿಗೆ ಆದ್ಯತೆ ನೀಡುವಂತೆ ಆದೇಶಿಸಿದರು. ಸಿದ್ಧಾಪುರ ತಹಸಿಲ್ಧಾರರ ಕಛೇರಿಯ ಸಭಾಭವನದಲ್ಲಿ ನಡೆದ ಬರ ನಿರ್ವಹಣೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ನಗರ ಪ್ರದೇಶ,ಗ್ರಾಮೀಣ ಪ್ರದೇಶ, ವಸತಿಶಾಲೆಗಳು,ವಸತಿ ನಿಲಯಗಳಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದ ಮುನ್ನೆಚ್ಚರಿಕೆ ವಹಿಸುವ ಭಾಗವಾಗಿ ನೀರಿನ ಮೂಲ, ಲಭ್ಯತೆಯ ಸಾಧ್ಯತೆ, ಉಪಕ್ರಮಗಳ ಬಗ್ಗೆ ಆದ್ಯತೆಯ ಮೇರೆಗೆ ಸಿದ್ಧರಾಗಲು ತಿಳಿಸಿದರು.

ಜಿಲ್ಲಾ ಪಂಚಾಯತ್‌ ಇಂಜಿನಿಯರಿಂಗ್‌ ಮತ್ತು ನೀರಿನ ಪೂರೈಕೆ ಮತ್ತು ಕಾಮಗಾರಿ ನಿರ್ವಹಿಸುವವರೆಲ್ಲರೂ ತಕ್ಷಣ ತಮ್ಮ ವ್ಯಾಪ್ತಿಯ ಕೆಲಸಗಳನ್ನು ನಿರ್ವಹಿಸಿ ಸಂಬಂಧಿಸಿದವರೊಂದಿಗೆ ಸಮನ್ವಯದೊಂದಿಗೆ ಬರಲಿರುವ ಪರಿಸ್ಥಿತಿ ಎದುರಿಸಲು ತಯಾರಾಗಬೇಕು. ತಾಲೂಕಿನಲ್ಲಿ ಜನರ ಕುಡಿಯುವ ನೀರು ಮತ್ತು ಬಳಕೆಗೆ ಸಂಬಂಧಿಸಿದ ಅನುಕೂಲ ಮಾಡಿಕೊಡಲು ಸಮರೋಪಾದಿಯಲ್ಲಿ ಕೆಲಸಮಾಡಬೇಕೆಂದು ತಾಕೀತು ಮಾಡಿದರು.

ರೈತರಿಗೆ ಮೇವಿನ ಬೀಜ ವಿತರಿಸಿ ಮಾತನಾಡಿದ ಅವರು ಬೆಳೆ, ಜಾನುವಾರುಗಳು, ಕೃಷಿ ಸಂಬಂಧಿ ಅಗತ್ಯಗಳ ಜೊತೆಗೆ ನೀರಿಗೆ ಆದ್ಯತೆ ನೀಡಬೇಕು. ನೀರಿನ ಲಭ್ಯತೆ, ಸಾಧ್ಯತೆಗಳನ್ನು ನೋಡಿ ಕೃಷಿ ಚಟುವಟಿಕೆ ನಡೆಸುವಂತೆ ರೈತರನ್ನು ಮನ ಒಲಿಸಲು ಅಧಿಕಾರಿಗಳಿಗೆ ಸೂಚಿಸಿದರು.

ನೀರಿನ ಮೂಲಗಳನ್ನು ಶೋಧಿಸಿ ಅಗತ್ಯ ಕೆಲಸಗಳ ಪಟ್ಟಿ ಮಾಡಲು ೧೫ ದಿನಗಳ ಕಾಲಮಿತಿಯ ಗಡುವು ನೀಡಿದರು.ತಹಸಿಲ್ಧಾರ ಎಂ.ಆರ್.‌ ಕುಲಕರ್ಣಿ, ಎ.ಸಿ.ಎಫ್.‌ ಬಾಸೂರು, ತಾ.ಪಂ. ಕಾ.ನಿ.ಅ. ದೇವರಾಜ್‌ ಹಿತ್ತಲಕೊಪ್ಪ ಸೇರಿ ಎಲ್ಲಾ ಇಲಾಖೆಗಳ ಬಹುತೇಕ ಅಧಿಕಾರಿಗಳು ಉಪಸ್ಥಿತರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ದುರಹಂಕಾರ ಪಟ್ಟವರನ್ನು ಶ್ರೀರಾಮನೇ 240 ಸೀಟುಗಳಿಗೆ ತಡೆದ: RSS ನಾಯಕ ಇಂದ್ರೇಶ್ ಕುಮಾರ್ ವಾಗ್ದಾಳಿ

ಲೋಕಸಭಾ ಚುನಾವಣೆಯ ಫಲಿತಾಂಶಗಳ ನಂತರ ಆರೆಸ್ಸೆಸ್‌ ನಾಯಕ ಇಂದ್ರೇಶ್‌ ಕುಮಾರ್ ಆಡಳಿತ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ ಹಾಗೂ ʼಅಹಂಕಾರʼಕ್ಕಾಗಿ ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ....

ಗುಡ್ಡ ಅಗೆದು ಇಲಿಯನ್ನೂ ಹಿಡಿಯದ ಲೋಕಾಯುಕ್ತ!

ಸಿದ್ಧಾಪುರದ ವಿಚಾರಗಳು ಈಗ ಜಿಲ್ಲೆಯ ಗಮನ ಸೆಳೆಯುತ್ತಿವೆ. ಮೂವತ್ತು ವರ್ಷಗಳಿಂದ ನೇಪಥ್ಯದಲ್ಲಿದ್ದ ಸಿದ್ಧಾಪುರ ಮತ್ತೆ ಸೌಂಡು ಮಾಡುತ್ತಿದೆಯೊ? ಅಥವಾ ತಟ್ಟಿ ಬಡಿದು ಹುಲಿ ಹೆದರಿಸುವ...

BSYಗಾಗಿ CID ಹುಡುಕಾಟ!

ಪೋಕ್ಸೋ ಪ್ರಕರಣ: ಬಿಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್, BSYಗಾಗಿ CID ಹುಡುಕಾಟ! ಪೊಕ್ಸೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿಎಸ್...

ಕೊಲೆ ಪ್ರಕರಣ: ಪವಿತ್ರಾ ಗಂಡ ಏನಂತಾರೆ ಗೊತ್ತೆ?

ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿ ಪವಿತ್ರಾ ಗೌಡ ಬಗ್ಗೆ ಮಾಜಿ ಪತಿ ಸಂಜಯ್ ಸಿಂಗ್ ಹೇಳಿದ್ದಿಷ್ಟು! ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟಿ ಪವಿತ್ರಾ...

ಜೂನ್‌ ೨೩ ಕ್ಕೆ ಮತ್ತೆ neet ಪರೀಕ್ಷೆ ….

1,563 NEET ಅಭ್ಯರ್ಥಿಗಳ ಗ್ರೇಸ್ ಅಂಕ ರದ್ದು, ಜೂನ್ 23ಕ್ಕೆ ಮರು ಪರೀಕ್ಷೆ: ಕೇಂದ್ರ ಸರ್ಕಾರ ಗ್ರೇಸ್ ಅಂಕಗಳನ್ನು ಪಡೆದಿರುವ 1,563 NEET-UG 2024...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *