


ಸಿದ್ದಾಪುರ : ಸಮಾಜದವರೆಲ್ಲ ಒಟ್ಟಾಗಿ ನಿಂತುಕೊಂಡರೆ ಒಳ್ಳೆ ಸಹಕಾರ ಸಿಕ್ಕಿದರೆ ಸಮಾಜ ಸಂಘಟನೆಗೆ ದೊಡ್ಡ ಶಕ್ತಿ ದೊರಕುತ್ತದೆ ಸಮಾಜ ಸಂಘಟನೆ ವಿಚಾರ ದಲ್ಲಿ ಎಲ್ಲರೂ ಒಗ್ಗಟ್ಟಾಗಿ ಇರಬೇಕು ಎಂದು ಯೋಗೇದ್ರ ಸ್ವಾಮೀಜಿ ಆಶೀರ್ವಚನ ನೀಡಿದರು. ಅವರು ಶ್ರೀ ಸಂಸ್ಥಾನ ತರಳಿ ಮಠದ ಸಭಾಂಗಣದಲ್ಲಿ ತರಳಿ ಮಠದ
ಸೇವಾ ದಳ ಘಟಕದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಯುವಕರು ಮುಖಂಡರು ನಿರಾಶರಾಗಬೇಡಿ ಎಲ್ಲರಿಗೂ ಬೆಳೆಯಲು ಅವಕಾಶವನ್ನು ಮಾಡಿಕೊಡಿ ಒಬ್ಬ ವ್ಯಕ್ತಿಯನ್ನು ನಾವು ಬೆಳೆಸಿದೆವೆಂದರೆ ಅವರು ಮುಂದೊಂದು ದಿನ ಸಮಾಜಕ್ಕೆ ಶಕ್ತಿಯಾಗುತ್ತಾರೆ ಎನ್ನುವಂತಹ ನಂಬಿಕೆ ನನಗಿದೆ ಎಂದರು. ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ಎನ್ ಡಿ ನಾಯ್ಕ್ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ವಕೀಲ ಜಿ ಟಿ ನಾಯ್ಕ್, ತರಳಿ ಸೇವಾ ದಳ ಮಹಿಳಾ ಘಟಕದ ಅಧ್ಯಕ್ಷೆ ಇಂದಿರಾ ನಾಯ್ಕ್, ಮುಖಂಡ ಈಶ್ವರ್ ನಾಯ್ಕ್ ಭಟ್ಕಳ ಉಪಸ್ಥಿತರಿದ್ದರು.
ಚಂದ್ರಹಾಸ್ ಪ್ರಾರ್ಥಿಸಿದರು, ಎನ್ ಟಿ ನಾಯ್ಕ್ ನಿರೂಪಿಸಿದರು, ಆಡಳಿತ ಮಂಡಳಿ ಕಾರ್ಯದರ್ಶಿ ಎಸ್. ಎಚ್. ನಾಯ್ಕ್ ವಂದಿಸಿದರು.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
