


ಸಾಧನಾ ಪ್ರಶಸ್ತಿ ಪಡೆದ ನಿತ್ಯಾ ಹೆಗಡೆ
ಸಿದ್ದಾಪುರ: ಇಲ್ಲಿನ ಹೆಗ್ಗರಣಿ ಶ್ರೀ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ 10 ನೇ ತರಗತಿಯ ವಿದ್ಯಾರ್ಥಿನಿ ನಿತ್ಯಾ ಉಮಾಕಾಂತ ಹೆಗಡೆ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ನೀಡುವ ರಾಜ್ಯ ಮಟ್ಟದ “ಸಾಧನಾ ಪ್ರಶಸ್ತಿ”ಯನ್ನು ಪಡೆದಿದ್ದಾಳೆ.
ಮಕ್ಕಳ ದಿನಾಚರಣೆಯ ಅಂಗವಾಗಿ ನ.25 ರಂದು ಬಾಗಲಕೋಟೆಯಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗಿದೆ. ಈಕೆ ಪ್ರಾಥಮಿಕ ಶಾಲೆಯ 5ನೇ ತರಗತಿಯಲ್ಲಿದ್ದಾಗ ಝೀ ಕನ್ನಡ ವಾಹಿನಿಯ ಡ್ರಾಮಾ ಜ್ಯೂನಿಯರ್ಸ್ ಶೋನಲ್ಲಿ ಭಾಗವಹಿಸಿ ಜನಮನ ಸೆಳೆದಿದ್ದಳು. ಶಾಲೆಯಲ್ಲಿ ನಡೆಯುವ ಪ್ರತಿಭಾ ಕಾರಂಜಿಯಂತಹ ಅನೇಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹಳ ಪ್ರಶಸ್ತಿಗಳನ್ನೂ ಪಡೆದಿದ್ದಾಳೆ. ಪ್ರೌಢಶಾಲೆಯ ಪ್ರತಿಭಾ ಕಾರಂಜಿಯಲ್ಲಿ ಕೋಲಾಟ ಮತ್ತು ಡೊಳ್ಳು ಕುಣಿತದ ಸ್ಪರ್ಧೆಗಳಲ್ಲಿ ಮುಂದಾಳುವಾಗಿ ಕಾಣಿಸಿಕೊಂಡು ತಂಡವನ್ನು ಮುನ್ನಡೆಸಿ ಶಾಲೆಗೆ ಪ್ರಥಮ ಸ್ಥಾನಗಳನ್ನು ದೊರಕಿಸಿಕೊಟ್ಟಿರುತ್ತಾಳೆ. ಈಕೆಯ ಬಹುಮುಖ ಪ್ರತಿಭೆಯನ್ನು ಗುರುತಿಸಿ ರಾಜ್ಯ ಮಟ್ಟದ ಮಕ್ಕಳ ಪ್ರತಿಭಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈಕೆ ಹೆಗ್ಗರಣಿ ಸಮೀಪದ ಹಳೆಹಳ್ಳದ ನಿವಾಸಿ ಉಮಾಕಾಂತ ಮತ್ತು ಆಶಾ ದಂಪತಿಗಳ ಪುತ್ರಿ.


_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
