ತ್ಯಾರಸಿಯಲ್ಲಿ ಮೊಳಗಿದ ಕನ್ನಡ ಕಲರವ

ಸಿದ್ದಾಪುರ: ಅಮರ ಪುನೀತ್ ಕನ್ನಡ ಕಲಾವೇದಿಕೆ ಸಿದ್ದಾಪುರ, ಸಮೃದ್ಧಿ ಯುವ ಬಳಗ ಹಾಗೂ ತ್ಯಾರ್ಸಿಯ ಗ್ರಾಮಸ್ಥರ ಆಶ್ರಯದಲ್ಲಿ ತಾಲೂಕಿನ ತ್ಯಾರ್ಸಿಯಲ್ಲಿ ರವಿವಾರ ರಾತ್ರಿ ಕನ್ನಡ ಕಲರವ, ಶಾಸಕರಿಗೆ ಅಭಿನಂದನೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಜರುಗಿತು.
ಕಾರ್ಯಕ್ರಮ ಆರಂಭಕ್ಕೂ ಮುನ್ನ ಶಾಸಕ ಭೀಮಣ್ಣ ನಾಯ್ಕ ಹಾಗೂ ಗಣ್ಯರನ್ನು ತ್ಯಾರ್ಸಿಯ ಬಸ್ ನಿಲ್ದಾಣದಿಂದ ಕಾಳಿಕಾಂಬಾ ದೇವಸ್ಥಾನದವರೆಗೆ ಊರಿನ ಮಹಿಳೆಯರ ಪೂರ್ಣಕುಂಭ ಹಾಗೂ ಡೊಳ್ಳು ಕುಣಿತದೊಂದಿಗೆ ಮೆರವಣಿಗೆಯಲ್ಲಿ ಕರೆದೊಯ್ಯಲಾಯಿತು. ನಂತರ ಕಾಳಿಕಾಂಬಾ ಕಲಾವೇದಿಕೆಯಲ್ಲಿ ಸಭಾ ಕಾರ್ಯಕ್ರಮ ನಡೆಸಲಾಯಿತು.


ಅಮರ ಪುನೀತ್ ಕನ್ನಡ ಕಲಾವೇದಿಕೆ ಹಾಗೂ ಸಮೃದ್ಧಿ ಯುವ ಬಳಗದ ವತಿಯಿಂದ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಅವರನ್ನು ಅಭಿನಂದಿಸಲಾಯಿತು‌. ನಂತರ ಸಾಮಾಜಿಕ ಕ್ಷೇತ್ರದಲ್ಲಿ ಕೆ.ಜಿ.ನಾಗರಾಜ, ವೈದ್ಯಕೀಯ ಕ್ಷೇತ್ರದ ಡಾ. ಶ್ರೀಧರ ವೈದ್ಯ, ಕನ್ನಡಪರ ಸಂಘಟನೆಯ ಕೃಷ್ಣಮೂರ್ತಿ ನಾಯ್ಕ ಐಸೂರ, ಅಣ್ಣಪ್ಪ ನಾಯ್ಕ ಶಿರಳಗಿ, ಅನಿಲ್ ಕೊಠಾರಿ, ರವಿಕುಮಾರ ಕೊಠಾರಿ, ಅರಣ್ಯ ಅತಿಕ್ರಮಣ ಹೋರಾಟಗಾರ ಮಾಬ್ಲೇಶ್ವರ ನಾಯ್ಕ ಬೇಡ್ಕಣಿ, ಕಲಾ ಕ್ಷೇತ್ರದ ಮಧುಕೇಶ್ವರ ಗುಡ್ನಾಪುರ, ಉಮೇಶ ನಾಯ್ಕ ತ್ಯಾರ್ಸಿ, ಎಚ್.ಟಿ.ವಾಸು ಕಡಕೇರಿ, ಕೃಷ್ಣ ನಾಯ್ಕ ಕೊಪ್ಪ, ಜಿ.ಎನ್.ಹೆಗಡೆ ಮದ್ದಿನಕೇರಿ, ಗಣಪತಿ ಕೊಂಡ್ಲಿ ಹಾಗೂ ರವಿ ಹಿತ್ಲಳ್ಳಿ ಇವರನ್ನು ಸನ್ಮಾನಿಸಲಾಯಿತು.


ಕನ್ನಡ ಕಲರವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಭೀಮಣ್ಣ ನಾಯ್ಕ ಮಾತನಾಡಿ,
ಕೋಟ್ಯಂತರ ಹೃದಯಗಳು ಸದಾ ಸ್ಮರಿಸುತ್ತಿರುವ ಪುನೀತ್ ರಾಜಕುಮಾರ ಹೆಸರಿನಲ್ಲಿ ಕಲಾ ವೇದಿಕೆ ಕಟ್ಟಿಕೊಂಡು ಸಾಂಸ್ಕೃತಿಕ ಚಟುವಟಿಕೆ ನಡೆಸುತ್ತಿರುವ ಅಮರ ಪುನೀತ್ ಕನ್ನಡ ಕಲಾವೇದಿಕೆಯ ಕಾರ್ಯ ನಿಜಕ್ಕೂ ಶ್ಲಾಘನೀಯವಾದುದು. ಪುನೀತ ರಾಜಕುಮಾರರ ಆದರ್ಶಗಳನ್ನು ನಾವೆಲ್ಲರೂ ಪಾಲಿಸೋಣ. ತ್ಯಾರ್ಸಿಯ ಗ್ರಾಮಸ್ಥರು ನನ್ನ ಮೇಲಿಟ್ಟಿರುವ ಅಭಿಮಾನಕ್ಕೆ ಸದಾ ಚಿರ ಋಣಿಯಾಗಿರುತ್ತೇನೆ. ಈ ಕ್ಷೇತ್ರದಲ್ಲಿ ಗೆದ್ದಿದ್ದು ಭೀಮಣ್ಣ ಅಲ್ಲ. ಶಿರಸಿ-ಸಿದ್ದಾಪುರ ಕ್ಷೇತ್ರದ ಸಮಸ್ತ ಜನತೆ. ಎಲ್ಲರೂ ಸೇರಿ ಕಲೆಯನ್ನು ಬೆಳೆಸುವ ಜತೆಗೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸೋಣ ಎಂದರು.


ಅಧ್ಯಕ್ಷತೆ ವಹಿಸಿದ್ದ ಅಮರ ಪುನೀತ್ ಕನ್ನಡ ಕಲಾವೇದಿಕೆ ಅಧ್ಯಕ್ಷ ವಿನಾಯಕ ಕೊಂಡ್ಲಿ ಮಾತನಾಡಿ, ಕಳೆದ ಐದು ವರ್ಷಗಳಿಂದ ಪುನೀತ್ ರಾಜಕುಮಾರ ಹೆಸರಿನಲ್ಲಿ ಸಂಘ ರಚಿಸಿ ನಾಡಿನ ವಿವಿಧೆಡೆ ನಾಟಕ ಪ್ರದರ್ಶನ ನಡೆಸಿದ್ದೇವೆ. ಪುನೀತ್ ನಿಧನದ ನಂತರ ಅಮರ ಪುನೀತ್ ಕನ್ನಡ ಕಲಾವೇದಿಕೆ ಎಂದು ಸೇರಿಸಲಾಗಿದೆ. ಕನ್ನಡವನ್ನು ಉಳಿಸಲು ಸಂಘದಿಂದ ಪ್ರಯತ್ನ ನಡೆಸಲಾಗುತ್ತಿದೆ. ಕರ್ನಾಟಕದಲ್ಲಿ ಕನ್ನಡಕ್ಕೆ ಸಿಗಬೇಕಾದ ಸ್ಥಾನ-ಮಾನ ವೃದ್ಧಿಸಬೇಕು ಎಂದರು.


ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ, ವಕೀಲ ಜಿ.ಟಿ.ನಾಯ್ಕ, ಸಾಮಾಜಿಕ ಮುಖಂಡ ಕೆ.ಜಿ.ನಾಗರಾಜ, ಡಾ.ಶ್ರೀಧರ ವೈದ್ಯ, ಬೇಡ್ಕಣಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಉಲ್ಲಾಸ ಗೌಡರ್, ರೈತ ಮುಖಂಡ ವೀರಭದ್ರ ನಾಯ್ಕ, ತ್ಯಾರ್ಸಿ ಗ್ರಾಮದ ಮುಖ್ಯಸ್ಥ ಮಾರುತಿ ನಾಯ್ಕ ಮಾತನಾಡಿದರು. ವೇದಿಕೆಯಲ್ಲಿ ಸಂವಿಧಾನ ಓದು ಸಮಿತಿಯ ರಾಜ್ಯ ಸದಸ್ಯ ಎನ್.ಟಿ.ನಾಯ್ಕ, ಎಸ್.ಕೆ.ನಾಯ್ಕ ಕಡಕೇರಿ, ಮಂಜುನಾಥ ನಾಯ್ಕ ತ್ಯಾರ್ಸಿ, ವಕೀಲ ಎ.ಆರ್.ನಾಯ್ಕ, ಕಾಳಿಕಾಂಬಾ ದೇವಾಲಯದ ಅಧ್ಯಕ್ಷ ನಾರಾಯಣ ನಾಯ್ಕ, ಕನ್ನಡಪರ ಹೋರಾಟಗಾರರಾದ ಎನ್.ಬಿ.ಕುಮಾರ, ಆಂಜನೇಯ ಹಾವೇರಿ ಉಪಸ್ಥಿತರಿದ್ದರು. ಅಶೋಕ ನಾಯ್ಕ ತ್ಯಾರ್ಸಿ ನಿರೂಪಿಸಿದರು.
ಉಪನ್ಯಾಸಕ ಎನ್.ಟಿ.ನಾಯ್ಕ ಪ್ರಾಸ್ತಾವಿಕ ಮಾತನಾಡಿದರು. ವಕೀಲ ರವಿಕುಮಾರ ನಾಯ್ಕ ಚೆನಮಾಂವ್ ಸ್ವಾಗತಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *