ಸರ್ಕಾರದ ಸಹಾಯಧನದ ಉಪಕರಣಗಳಿಗೆ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಬೆಲೆ ಹೇಗೆ? ಶಾಸಕರ ಪ್ರಶ್ನೆ

ಸಿದ್ದಾಪುರ: ರೈತರಿಗೆ ಸರ್ಕಾರದಿಂದ ನೀಡುವ ಸಲಕರಣೆಗಳಿಗೆ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಬೆಲೆ ತೆಗೆದುಕೊಂಡರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಎಚ್ಚರಿಕೆ ನೀಡಿದರು.


ಕೃಷಿ ಇಲಾಖೆ ವತಿಯಿಂದ ಫಲಾನುಭವಿ ರೈತರಿಗೆ ವಿವಿಧ ಯೋಜನೆಯಡಿ ಸಹಾಯಧನ ಮಂಜೂರಾತಿ ಪತ್ರ, ಕೃಷಿ ಪರಿಕರಗಳ ವಿತರಣೆ ಹಾಗೂ ಆತ್ಮ ಯೋಜನೆಯಡಿ ಪರಿಶಿಷ್ಟ ಜಾತಿ ರೈತರಿಗೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರೈತರು ಕೃಷಿ ಇಲಾಖೆಯಿಂದ ಸಿಗುವ ಸೌಲಭ್ಯವನ್ನು ಸರಿಯಾಗಿ ಸದುಪಯೋಗಪಡಿಸಿಕೊಳ್ಳಬೇಕು. ಕೆಲವರು ತಾನು ಕೃಷಿಕ ಎಂದು ಹೇಳಿಕೊಳ್ಳಲು ಹಿಂಜರಿಯುತ್ತಿದ್ದಾರೆ. ನನಗಂತೂ ಕೃಷಿಕ ಎಂದುಕೊಳ್ಳಲು ತುಂಬಾ ಹೆಮ್ಮೆ ಎನಿಸುತ್ತದೆ. ರೈತರನ್ನು ಯಾರೂ ಕೂಡ ನಿರ್ಲಕ್ಷ ಮಾಡಬಾರದು. ರೈತರಿಗೆ ಅವಶ್ಯವಾಗಿ ಬೇಕಾಗಿರುವ ನೀರು ಹಾಗೂ ವಿದ್ಯುತ್ ಸರಿಯಾಗಿ ನೀಡಬೇಕು. ಅಂದಿನ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಕೃಷಿ ಪಂಪಿಗೆ ಉಚಿತ ವಿದ್ಯುತ್ ನೀಡುವ ಯೋಜನೆ ಜಾರಿಗೊಳಿಸದಿದ್ದರೆ ಎಷ್ಟೋ ಕೃಷಿಕರು ಕೃಷಿಯಿಂದ ವಿಮುಖರಾಗುತ್ತಿದ್ದರು. ರೈತರಿಗೆ ದಿನದ 24 ಗಂಟೆ ಕರೆಂಟ್ ಕೊಡಬೇಕು. ರೈತರಿಗೆ ಸರ್ಕಾರದಿಂದ ನೀಡುವ ಸಲಕರಣೆಗಳಿಗೆ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಬೆಲೆಗೆ ಖರೀದಿಸಿದರೆ ಸಹಿಸಲು ಸಾಧ್ಯವಿಲ್ಲ ಎಂದ ಅವರು, ಈ ಬಾರಿ ಮಳೆ ತುಂಬಾ ಕಡಿಮೆಯಾಗಿದೆ. ಜಿಲ್ಲೆಯ ಬರ ಪರಿಸ್ಥಿತಿ ನಿಭಾಯಿಸಲು 16 ಕೋಟಿ ಜಿಲ್ಲಾಧಿಕಾರಿ ಖಾತೆಗೆ ಜಮಾ ಮಾಡಲಾಗಿದೆ ಎಂದರು.


ಸಹಾಯಕ ಕೃಷಿ ನಿರ್ದೇಶಕಿ ಸುಮಾ ಎಸ್.ಎಂ., ಮಾತನಾಡಿ, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಲ್ಲಿ ಸಾಕಷ್ಟು ಸೌಲಭ್ಯಗಳಿವೆ. ರೈತರು ಇಲಾಖೆಯಿಂದ ಸಿಗುವ ಸಹಾಯಧನ ಪಡೆದುಕೊಳ್ಳಬೇಕು ಎಂದರು.


ಇದೇ ವೇಳೆ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಭಾಜನರಾದ ಪಿ.ಎಸ್.ಭಟ್ ಮುತ್ತಿಗೆ, ರಾಮಚಂದ್ರ ಹೆಗಡೆ, ಕಿರಣ ನಾಯ್ಕ ಕ್ಯಾದಗಿ, ಪುರುಷೋತ್ತಮ ನಾಯ್ಕ ಕಿಲಾರ ಇವರಿಗೆ ಶಾಸಕ ಭೀಮಣ್ಣ ನಾಯ್ಕ ಪ್ರಶಸ್ತಿ ಪತ್ರ ಪ್ರಧಾನ ಮಾಡಿದರು.
ಈ ವೇಳೆ ಕೋರ್ಲಕಟ್ಟಾ ಗ್ರಾಪಂ ಅಧ್ಯಕ್ಷ ನಟರಾಜ ಜಿಡ್ಡಿ, ವಿವಿಧ ಗ್ರಾಪಂ. ಸದಸ್ಯರುಗಳಾದ ಸೀಮಾ ಹೆಗಡೆ, ಸುರೇಂದ್ರ ಗೌಡ, ಹನುಮಂತ ನಾಯ್ಕ, ಬೇಡ್ಕಣಿ ಸೊಸೈಟಿ ಉಪಾಧ್ಯಕ್ಷ ಬಾಬು ನಾಯ್ಕ ಉಪಸ್ಥಿತರಿದ್ದರು. ಸಹಾಯಕ ಕೃಷಿ ನಿರ್ದೇಶಕಿ ಸುಮಾ ಎಸ್.ಎಂ. ಸ್ವಾಗತಿಸಿದರು. ಪ್ರಶಾಂತ ಜಿ.ಎಸ್ ನಿರೂಪಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹಾವಿನ ಸೇಡು ಹೆಣ್ಣಿನ ಮೋಸಗಳಿಗೆ ಬಹಳ ವರ್ಷಗಳ ಆಯುಷ್ಯಂತೆ! A ಉಪೇಂದ್ರ & B ಕೂಡಾ ಉಪೇಂದ್ರ!

ಶ್‌ ಚಿತ್ರದ ಮೂಲಕ ಭರವಸೆ ಹುಟ್ಟಿಸಿದ್ದ ಉಪೇಂದ್ರರ ಮುಂದಿನ ಚಿತ್ರ ಯಾವುದು? ಎನ್ನುವ ಕುತೂಹಲದ ಪ್ರಶ್ನೆಗೆ ಉಪೇಂದ್ರ ಎ ಎಂದು ಉತ್ತರ ಕೊಟ್ಟಿದ್ದರು. ಎ.ಸಿನೆಮಾ...

ಕಶಿಗೆಯಲ್ಲಿ ಸಂಸ್ಕೃತಿ ಚಿಂತನ

ಸಿದ್ದಾಪುರತಾಲೂಕಿನ ಕಶಿಗೆಯ ಶ್ರೀ ಕೇಶವನಾರಾಯಣ ದೇವಾಲಯದ ಗಣೇಶಹೆಗಡೆ ದೊಡ್ಮನೆ ಸಭಾಭವನದಲ್ಲಿ ಮೇ.೧೭ರಂದು ಹಿರಿಯ ಪತ್ರಕರ್ತ ಜಿ.ಕೆ.ಭಟ್ಟ ಕಶಿಗೆ ಅವರ ಕುರಿತಾದ ಸಂಸ್ಕೃತಿ ಚಿಂತನ ಕಾರ್ಯಕ್ರಮ...

ಶಿರಸಿ ಪ್ರೀತಮ್‌ ಪಾಲನಕರ್‌ ಸಾವಿನ ಹಿಂದಿನ ಕಾರಣ ಏನು? ಇಲ್ಲಿದೆ ಕ್ಲೂ!

ಪ್ರೀತಮ್‌ ಪಾಲನಕರ್‌ ಆತ್ಮಹತ್ಯೆಗೆ ಕಾರಣ ಮೊಬೈಲ್‌ ಕರೆಯೆ? ಶಿರಸಿ ನಗರದ ಕಾಮಧೇನು ಜ್ಯುವೆಲ್ಲರ್ಸ್‌ ನ ಮಾಲಿಕ ಪ್ರಕಾಶ್‌ ಪಾಲನಕರ್‌ ರ ಹಿರಿಯ ಪುತ್ರ ಪ್ರೀತಮ್‌...

ಕಬೀರ್‌ ಸಾಬ್‌ ರಿಗೂ ಕಾಂಗ್ರೆಸ್‌ ಗೂ ಎತ್ತಣಿದೆತ್ತ ಸಂಬಂಧವಯ್ಯ…..

ಕಬೀರ್‌ ನಿಲ್ಕುಂದ ಎಂಬ ಫೇಸ್‌ ಬುಕ್‌ ಖಾತೆಯಿಂದ ಸಿದ್ಧಾಪುರ ಕಾಂಗ್ರೆಸ್‌ ವಿಚಾರವಾಗಿ ಪ್ರಕಟವಾದ ಸಂದೇಶಗಳು ಹಲವು ಚರ್ಚೆಗೆ ಗ್ರಾಸ ಒದಗಿಸಿವೆ. ಕಬೀರ್‌ ಎನ್ನುವ ಪಕ್ಕಾ...

ನಾಣಿಕಟ್ಟದಲ್ಲಿ‌ ವಸಂತ ಸಂಭ್ರಮ; ಸನ್ಮಾನ

ಸಿದ್ದಾಪುರ: ವಿಶ್ವಶಾಂತಿ‌ ಸೇವಾ ಟ್ರಸ್ಟ್ ಸಂಸ್ಥೆಯು‌ ನಾಣಿಕಟ್ಟದಲ್ಲಿ ತ್ಯಾಗಲಿ ಸೊಸೈಟಿಯ ಸಹಕಾರದೊಂದಿಗೆ ಮೇ.೧೮ರ ಸಂಜೆ ೫:೪೦ಕ್ಕೆ ವಸಂತ ಸಂಭ್ರಮ ಕಾರ್ಯಕ್ರಮ ಆಯೋಜಿಸಿದೆ.ನಾಣಿಕಟ್ಟದ ಸೊಸೈಟಿಯ ಶತಮಾನೋತ್ಸವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *