ಡಿಸೆಂಬರ್ 7 ಗುರುವಾರರಂದು ಬೆಳಗಾವಿಯಲ್ಲಿ ಧರಣಿ ಸತ್ಯಾಗ್ರಹ, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ :- ಅನಂತಮೂರ್ತಿ ಹೆಗಡೆ

ಶಿರಸಿ:- ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಹಾಗೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಆಗ್ರಹಿಸಿ ಡಿಸೆಂಬರ್ 7 ಗುರುವಾರರಂದು ಬೆಳಗಾವಿಯ ಸುವರ್ಣಸೌಧದ ಎದುರು ಧರಣಿ ಸತ್ಯಾಗ್ರಹ ಮಾಡಿ, ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುತ್ತೇವೆ ಎಂದು ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ಹೇಳಿದರು.

    ಅವರು ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಹಾಗೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಆಗ್ರಹಿಸಿ ನಗರದ ತಹಶೀಲ್ದಾರ್ ಕಛೇರಿ ಎದುರು ಹಮ್ಮಿಕೊಂಡ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡುತ್ತಾ, ನಾವು ಈ ಮೊದಲು ಕರ್ನಾಟಕ ಸರ್ಕಾರದ ಚಳಿಗಾಲದ ಅಧಿವೇಶನ ನಡೆಯುವ ಬೆಳಗಾವಿಯ ಸುವರ್ಣಸೌಧದ ಮುಂಭಾಗ ಡಿಸೆಂಬರ್ 4 ಸೋಮವಾರದಂದು ಧರಣಿ ಸತ್ಯಾಗ್ರಹ ನಡೆಸಿ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ ಮಾಡಲು ತೀರ್ಮಾನಿಸಿದ್ದು, ಆದರೆ ತಾಂತ್ರಿಕ ಕಾರಣಗಳಿಂದ ಡಿಸೆಂಬರ್ 7 ಗುರುವಾರದಂದು ಧರಣಿ ಸತ್ಯಾಗ್ರಹ ಮಾಡಲು ಬೆಳಗಾವಿಯ ಪೋಲೀಸ್ ಆಯುಕ್ತರ ಪರವಾಗಿಗೆ ಲಭ್ಯವಾಗಿದ್ದು, ಆದ್ದರಿಂದ ನಾವು ಡಿಸೆಂಬರ್ 7 ಗುರುವಾರದಂದು ಧರಣಿ ಸತ್ಯಾಗ್ರಹ ನಡೆಸಿ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುತ್ತೇವೆ. ಅಧಿವೇಶನ ನಡೆಯಲಿರುವ ಸುವರ್ಣಸೌಧದಲ್ಲಿ ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ನಮಗೆ ಬೆಳಗಾವಿಯ ಪೊಲೀಸ್ ಆಯುಕ್ತರು ಡಿಸೆಂಬರ್ 7 ರಂದು ಬೆಳಿಗ್ಗೆ 10 ಘಂಟೆ ಯಿಂದ ಸಂಜೆ 4 ಘಂಟೆಯ ವರೆಗೆ ಅನುಮತಿ  ನೀಡಿದ್ದಾರೆ ಎಂದರು.



https://www.youtube.com/watch?v=F2B2ef6ha50


ಈ ಧರಣಿ‌ ಸತ್ಯಾಗ್ರಹಕ್ಕೆ ಜಿಲ್ಲೆಯ ಹಲವಾರು ಸಂಘ ಸಂಸ್ಥೆಗಳು ಬೆಂಬಲ ನೀಡಿದ್ದು, ಜಿಲ್ಲೆಯಾದ್ಯಂತ ಸಾವಿರಕ್ಕೂ ಹೆಚ್ಚು ಜನರು‌ ಧರಣಿಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಈಗಾಗಲೇ ನಮ್ಮ ಜಿಲ್ಲೆಯ ಶಾಸಕರುಗಳಿಗೆ ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಹಾಗೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ವಿಧಾನಸಭೆ ಚಳಿಗಾಲದ ಅಧೀವೇಶನದಲ್ಲಿ‌ ವಿಷಯ ಪ್ರಸ್ತಾಪಿಸುವಂತೆ ಮನವಿ ಮಾಡಿದ್ದೇನೆ. ಜಿಲ್ಲೆಯ ಅನೇಕ ಗಣ್ಯರ ಬೆಂಬಲವನ್ನು ಕೋರಲಾಗಿದೆ. ತಹಶೀಲ್ದಾರ್ ಕಛೇರಿಯಲ್ಲಿ ಎದುರಯ ಹಮ್ಮಿಕೊಂಡ ಧರಣಿ ಸತ್ಯಾಗ್ರಹ ಆರು ದಿನ‌ ಪೂರೈಸಿದ್ದು, ನಾಳೆ ಕೊನೆಗೊಳ್ಳಲಿದೆ ಎಂದು ಹೇಳಿದರು.

ಧರಣಿ ಸತ್ಯಾಗ್ರಹದಲ್ಲಿ ಕರ್ನಾಟಕ ಅನ್ನದಾತ ರೈತ‌ ಸಂಘದ ರಾಜ್ಯಾಧ್ಯಕ್ಷ ಚಿದಾನಂದ ಹರಿಜನ, ಕರವೇ ಜನಧ್ವನಿ ಸಂಘಟನೆಯ ಜಿಲ್ಲಾಧ್ಯಕ್ಷ ಉಮೇಶ ಹರಿಕಾಂತ, ಸಾಮಾಜಿಕ ಕಾರ್ಯಕರ್ತ ಕೇಮು ವಂದಿಗೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

https://samajamukhi.net/2023/11/20/bheemanna-mla-agriculturist-achivment/


Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *