ಶಿವರಾಮ್‌ ಹೆಬ್ಬಾರ್‌, ಸೋಮಶೇಖರ್‌ ಕಾಂಗ್ರೆಸ್‌ ಸೇರ್ಪಡೆ ಪಕ್ಕಾ…

ಬಿಜೆಪಿ ಸಭೆಗೆ ಚಕ್ಕರ್, ಕಾಂಗ್ರೆಸ್ ಔತಣಕೂಟಕ್ಕೆ ಹಾಜರ್: ‘ಕೈ’ ಹಿಡಿಯಲು ಸೋಮಶೇಖರ್, ಹೆಬ್ಬಾರ್ ಸಜ್ಜು!

ರಾಜ್ಯ ಬಿಜೆಪಿಯಲ್ಲಿ ಅಸಮಾಧನದ ಹೊಗೆಯಾಡುತ್ತಿರುವ ಹೊತ್ತಲ್ಲೇ ಬಿಜೆಪಿ ಪ್ರಮುಖ ನಾಯಕರಿಬ್ಬರು ಕಾಂಗ್ರೆಸ್‌ ಔತಣಕೂಟದಲ್ಲಿ ಭಾಗಿಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ST Somashekar And Shivaram hebbar

ಬೆಳಗಾವಿ: ರಾಜ್ಯ ಬಿಜೆಪಿಯಲ್ಲಿ ಅಸಮಾಧನದ ಹೊಗೆಯಾಡುತ್ತಿರುವ ಹೊತ್ತಲ್ಲೇ ಬಿಜೆಪಿ ಪ್ರಮುಖ ನಾಯಕರಿಬ್ಬರು ಕಾಂಗ್ರೆಸ್‌ ಔತಣಕೂಟದಲ್ಲಿ ಭಾಗಿಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಕಾಂಗ್ರೆಸ್‌ ಶಾಸಕರಿಗೆ ಬುಧವಾರ ರಾತ್ರಿ ಏರ್ಪಡಿಸಿದ ಔತಣಕೂಟದಲ್ಲಿ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್‌. ಟಿ ಸೋಮಶೇಖರ್‌ ಮತ್ತು ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್‌ ಅವರು ಭಾಗವಹಿಸಿದರು. ಈಗಾಗಲೇ ಬಿಜೆಪಿ ಸಭೆಗಳಿಂದ ದೂರ ಉಳಿದಿರುವ ಅವರು, ಮತ್ತೆ ಕಾಂಗ್ರೆಸ್‌ ಸೇರುವ ಸಾಧ್ಯತೆ ದಟ್ಟವಾಗಿದೆ.

ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಕೇಳುವ ನೆಪದಲ್ಲಿ ಹಲವು ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವ ಈ ಇಬ್ಬರೂ ಶಾಸಕರು, ಬುಧವಾರ ರಾತ್ರಿ ಪಕ್ಷದ ಶಾಸಕರ ಜೊತೆ ಭೋಜನಕೂಟದಲ್ಲಿ ಭಾಗವಹಿಸಿದರು ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಅದಕ್ಕೂ ಮೊದಲು ಕಾಂಗ್ರೆಸ್‌ ಶಾಸಕರ ಸಭೆ ನಡೆಯಿತು. ವಿಧಾನಸಭೆ ತಡವಾಗಿ ಮುಕ್ತಾಯವಾದ ಕಾರಣ ಎಲ್ಲ ಶಾಸಕರು ಬಂದು ಸೇರುವುದು ವಿಳಂಬವಾಯಿತು. ಹೀಗಾಗಿ ವಿಳಂಬವಾಗಿ ಸಭೆ ಆರಂಭವಾಯಿತು. ಸಭೆಯಲ್ಲಿ ಸೋಮಶೇಖರ್‌ ಮತ್ತು ಹೆಬ್ಬಾರ್‌ ಭಾಗವಹಿಸಲಿಲ್ಲ. ಆದರೆ, ಭೋಜನದಲ್ಲಿ ಎಲ್ಲರ ಜೊತೆ ಭಾಗವಹಿಸಿದರು ಎಂದೂ ಮೂಲಗಳು ಹೇಳಿವೆ.

ಮುಂಬರುವ ಲೋಕಸಭೆ ಚುನಾವಣೆಗೆ ಎಲ್ಲ ರೀತಿಯಲ್ಲೂ ಸಿದ್ಧರಾಗುವಂತೆ ಸಭೆಯಲ್ಲಿ ಶಾಸಕರಿಗೆ ಸಲಹೆ ನೀಡಲಾಯಿತು. ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಘೋಷಿಸಿದ ‘ಗ್ಯಾರಂಟಿ’ ಯೋಜನೆಗಳು ಯಶಸ್ವಿಯಾಗಿವೆ. ಈ ಯೋಜನೆಗಳ ಬಗ್ಗೆ ಜನವರಿಯಲ್ಲಿ ಎಲ್ಲ ಜಿಲ್ಲೆಗಳಲ್ಲಿ ಮತ್ತು ವಿಧಾನ ಸಭಾ ಕ್ಷೇತ್ರವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ‘ಗ್ಯಾರಂಟಿ’ ಯೋಜನೆಗಳ ಪ್ರಯೋಜನ ಪಡೆದ ಫಲಾನುಭವಿಗಳನ್ನು ಒಂದೆಡೆ ಸೇರಿಸಬೇಕು. ಆ ಮೂಲಕ, ಲೋಕಸಭಾ ಚುನಾವಣೆಗೆ ಸಜ್ಜಾಗಬೇಕು ಎಂದು ಸಭೆಯಲ್ಲಿ ಶಾಸಕರಿಗೆ ಸಲಹೆ ನೀಡಲಾಗಿದೆ.

ಬಿಜೆಪಿಯಲ್ಲಿ ಅಸಮಾಧನಗೊಂಡಿರುವ ಎಸ್‌ ಟಿ ಸೋಮಶೇಖರ್‌ ಹಾಗೂ ಶಿವರಾಂ ಹೆಬ್ಬಾರ್‌ ಅವರು ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ ಎನ್ನುವ ಚರ್ಚೆಯ ನಡುವೆಯೇ ಕಾಂಗ್ರೆಸ್‌ ಔತಣಕೂಟದಲ್ಲಿ ಭಾಗಿಯಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *