ಮತ್ತೆ ಮಂಗನ ಖಾಯಿಲೆ ಆತಂಕ… ಇಂದು ಎ.ಸಿ. ಅಧ್ಯಕ್ಷತೆಯಲ್ಲಿ ಸಿದ್ಧಾಪುರದಲ್ಲಿ ಸಭೆ

ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಕೆಎಫ್​ಡಿ ಪ್ರಕರಣ ಪತ್ತೆ, ಮಹಿಳೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

ತೀರ್ಥಹಳ್ಳಿ ತಾಲೂಕಿನ ಅತ್ತಿಸರ ಗ್ರಾಮದಲ್ಲಿ ಕಳೆದ ಗುರುವಾರ ಕೆಎಫ್​ಡಿ (ಕ್ಯಾಸನೂರು ಫಾರೆಸ್ಟ್​ ಡಿಸೀಸ್) ​ಮೊದಲ ಪ್ರಕರಣ ಪತ್ತೆಯಾಗಿದೆ.

File photo

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಅತ್ತಿಸರ ಗ್ರಾಮದಲ್ಲಿ ಕಳೆದ ಗುರುವಾರ ಕೆಎಫ್​ಡಿ (ಕ್ಯಾಸನೂರು ಫಾರೆಸ್ಟ್​ ಡಿಸೀಸ್) ​ಮೊದಲ ಪ್ರಕರಣ ಪತ್ತೆಯಾಗಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ರಾಜೇಶ್ ಸುರಗಿಹಳ್ಳಿ ಅವರು ಇದನ್ನು ದೃಢಪಡಿಸಿದ್ದಾರೆ. 53 ವರ್ಷದ ಮಹಿಳೆಯಲ್ಲಿ ಕೆಎಫ್​ಡಿ ಪತ್ತೆಯಾಗಿದೆ ಎಂದು ಹೇಳಿದ್ದಾರೆ.

ಡಿಸೆಂಬರ್ 10 ರಂದು ಮಹಿಳೆಗೆ ಜ್ವರ ಕಾಣಿಸಿಕೊಂಡಿದ್ದು, ಕೆಲ ದಿನಗಳು ಕಳೆದರೂ ಜ್ವರ ಕಡಿಮೆಯಾಗಿರಲಿಲ್ಲ. ಈ ವೇಳೆ ವೈದ್ಯರು ಪರೀಕ್ಷೆ ನಡೆಸಿದ್ದು, ವರದಿಯಲ್ಲಿ ಕೆಎಫ್’ಡಿ ಪಾಸಿಟಿವ್ ಬಂದಿದೆ. ಇದೀಗ ಮಹಿಳೆಯನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, 5 ದಿನಗಳ ಕಾಲ ನಿಗಾದಲ್ಲಿ ಇರಿಸಲಾಗಿದೆ ಎಂದು ತಿಳಿಸಿದ್ದಾರೆ,

ಕೆಎಫ್​ಡಿ (ಕ್ಯಾಸನೂರು ಫಾರೆಸ್ಟ್ ಡಿಸೀಸ್) ಮೊದಲ ಬಾರಿಗೆ ಕಾಣಿಸಿಕೊಂಡಿದ್ದು ಸೊರಬ ತಾಲೂಕು ಕ್ಯಾಸನೂರು ಗ್ರಾಮದಲ್ಲಿ. ಅದು 1960ರ ಅಸುಪಾಸು. ಹಾಗಾಗಿ ಇದಕ್ಕೆ ಕೆಎಫ್​ಡಿ ಕಾಯಿಲೆ ಎಂದು ಕರೆಯುತ್ತಾರೆ. ನಂತರ ಈ ರೋಗ ಜಿಲ್ಲೆಯ ಮುಖ್ಯವಾಗಿ ಕಾಡು ಪ್ರದೇಶದಲ್ಲಿ ಕಂಡು ಬರಲು ಪ್ರಾರಂಭಿಸಿತು. ಕಾಡಿನಲ್ಲಿ ಇರುವ ಸಣ್ಣ ಗಾತ್ರದ ಉಣ್ಣೆಗಳು ಮನುಷ್ಯನಿಗೆ ಕಚ್ಚಿದರೆ, ಕೆಎಫ್​ಡಿ ರೋಗ ಮನುಷ್ಯನಿಗೆ ಬರುತ್ತದೆ. ಉಣ್ಣೆಯ ವಾಹಕವಾಗಿ ಪ್ರಾಣಿಗಳು ಕೆಲಸ ಮಾಡುತ್ತಿವೆ.

ಉಣ್ಣೆಗಳು ಪ್ರಮುಖವಾಗಿ ಕಾಡಿನಲ್ಲಿನ ಮಂಗಗಳಲ್ಲಿ ಹೆಚ್ಚಾಗಿ ಕಂಡುಬರುತ್ತವೆ. ಎಲ್ಲಿ ಮಂಗಗಳು ಸಾಯುತ್ತವೆಯೋ ಅಲ್ಲಿ ಈ ಉಣ್ಣೆಗಳು ಬೇರೆ ಪ್ರಾಣಿಗಳ ದೇಹವನ್ನು ಆಶ್ರಿಯಿಸುತ್ತವೆ. ಇದಕ್ಮೆ ಇದನ್ನು ಮಂಗನ ಕಾಯಿಲೆ ಎಂದು ಕರೆಯುತ್ತಾರೆ.

ಕೆಎಫ್​ಡಿ (ಕ್ಯಾಸನೂರು ಫಾರೆಸ್ಟ್ ಡಿಸೀಸ್) ಮೊದಲ ಬಾರಿಗೆ ಕಾಣಿಸಿಕೊಂಡಿದ್ದು ಸೊರಬ ತಾಲೂಕು ಕ್ಯಾಸನೂರು ಗ್ರಾಮದಲ್ಲಿ. ಅದು 1960ರ ಅಸುಪಾಸು. ಹಾಗಾಗಿ ಇದಕ್ಕೆ ಕೆಎಫ್​ಡಿ ಕಾಯಿಲೆ ಎಂದು ಕರೆಯುತ್ತಾರೆ. ನಂತರ ಈ ರೋಗ ಜಿಲ್ಲೆಯ ಮುಖ್ಯವಾಗಿ ಕಾಡು ಪ್ರದೇಶದಲ್ಲಿ ಕಂಡು ಬರಲು ಪ್ರಾರಂಭಿಸಿತು. ಕಾಡಿನಲ್ಲಿ ಇರುವ ಸಣ್ಣ ಗಾತ್ರದ ಉಣ್ಣೆಗಳು ಮನುಷ್ಯನಿಗೆ ಕಚ್ಚಿದರೆ, ಕೆಎಫ್​ಡಿ ರೋಗ ಮನುಷ್ಯನಿಗೆ ಬರುತ್ತದೆ. ಉಣ್ಣೆಯ ವಾಹಕವಾಗಿ ಪ್ರಾಣಿಗಳು ಕೆಲಸ ಮಾಡುತ್ತಿವೆ.

ಕಾಡಂಚಿನ ಗ್ರಾಮಗಳ ಪ್ರಾಣಿಗಳು ಕಾಡಿಗೆ ಹೋದಾಗ ಈ ಉಣ್ಣೆಗಳು ಎಮ್ಮೆ, ಹಸು, ಕುರಿ, ಮೇಕೆಗಳ ಮೂಲಕ ಗ್ರಾಮಕ್ಕೆ ಬರುತ್ತವೆ. ಹಸು, ಮೇಕೆ, ಕುರಿಗಳು ಮನುಷ್ಯನ ಸಂಪರ್ಕಕ್ಕೆ ಬಂದು ಉಣ್ಣೆಗಳು ಮನುಷ್ಯನಿಗೆ ಕಚ್ಚಿದಾಗ ಮನುಷ್ಯನಲ್ಲಿ ಜ್ವರ ಕಾಣಿಸಿಕೊಳ್ಳುತ್ತದೆ. ಈ ಜ್ವರ ಬಂದವರ ರಕ್ತ ಪರೀಕ್ಷೆ ನಡೆಸಿದಾಗ ಅವರಲ್ಲಿ ಕೆಎಫ್​ಡಿ ಪಾಸಿಟಿವ್, ಇಲ್ಲ ನೆಗೆಟಿವ್​ ಪತ್ತೆಯಾಗುತ್ತದೆ.

ನಿರಂತರ ನಾಲ್ಕೈದು ದಿನ ಜ್ವರ ಹೋಗದೆ ಇದ್ದರೆ, ಅವರು ತಕ್ಷಣ ರಕ್ತ ಪರೀಕ್ಷೆ ಮಾಡಿಸಬೇಕಿದೆ. ಈ ರೋಗವು, ಶಿವಮೊಗ್ಗ ಜಿಲ್ಲೆ ಅಲ್ಲದೆ, ಚಿಕ್ಕಮಗಳೂರು, ಉಡುಪಿ, ಚಾಮರಾಜನಗರದಲ್ಲೂ ಕಂಡು ಬಂದಿದೆ. ಸದ್ಯ ಈ ರೋಗಕ್ಕೆ ನಿರ್ದಿಷ್ಟ ಚುಚ್ಚುಮದ್ದು ಇಲ್ಲ. ಇದಕ್ಕೆ ಮುಂಜಾಗ್ರತಾ ಕ್ರಮವೇ ಮದ್ದು.

 ಕಳೆದ ವರ್ಷ ಈ ರೋಗಕ್ಕೆ ವರ್ಷಕ್ಕೆ ಮೂರರಂತೆ ಬೂಸ್ಟರ್ ಡೋಸ್ ನೀಡಲಾಗಿತ್ತು. ಈಗ ಬೂಸ್ಟರ್ ಡೋಸ್ ತಯಾರಿಕೆ ನಿಲ್ಲಿಸಲಾಗಿದೆ. ಕಾಡಂಚಿನ ಗ್ರಾಮದವರಿಗೆ ಆರೋಗ್ಯ ಇಲಾಖೆಯಿಂದ ಕಾಡಿಗೆ ಹೋಗುವವರಿಗೆ ಡಿಎಂಪಿ ಆಯಿಲ್ ನೀಡುತ್ತಾರೆ. ಇದನ್ನು ಕೈ ಕಾಲುಗಳಿಗೆ ಹಚ್ಚಿಕೊಂಡು ಕಾಡಿಗೆ ಹೋಗುವಂತೆ ಹಾಗೂ ಮನೆಗೆ ಬಂದ ನಂತರ ಕೈ ಕಾಲು ತೊಳೆದುಕೊಳ್ಳುವಂತೆ ಸೂಚಿಸಲಾಗಿದೆ. ಈ ಆಯಿಲ್​ಗೆ ಉಣ್ಣೆಗಳು ಅಂಟಿಕೊಳ್ಳುವುದಿಲ್ಲ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *