d.25 ಅಖಿಲ ಹವ್ಯಕ ಮಹಾಸಭೆಯ ಪ್ರತಿಬಿಂಬ ಕಾರ್ಯಕ್ರಮ


ಸಿದ್ದಾಪುರ
ಅಖಿಲ ಹವ್ಯಕ ಮಹಾಸಭೆಯು ಹವ್ಯಕರಿಂದ,ಹವ್ಯಕರಿಗಾಗಿ,ಹವ್ಯಕರಿಗೋಸ್ಕರ ತಾಲೂಕಿನ ಹೇರೂರು ಹಾಗೂ ಸುತ್ತಲಿನ ಪ್ರಾಂತ್ಯಗಳ ಹವ್ಯಕ ಪ್ರತಿಭೆಗಳಿಗಾಗಿ ಪ್ರತಿಬಿಂಬ ಎನ್ನುವ ಸಾಂಸ್ಕೃತಿಕ ಸ್ಪರ್ಧೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಡಿ.೨೫ರಂದು ಹೇರೂರಿನ ಶ್ರೀ ಸಿದ್ಧಿವಿನಾಯಕ ಸಭಾಭವನದಲ್ಲಿ ಆಯೋಜಿಸಿದೆ ಎಂದು ಹವ್ಯಕ ಮಹಾಸಭೆಯ ನಿರ್ದೇಶಕ ಜಿ.ಎಂ.ಭಟ್ಟ ಕಾಜಿನಮನೆ ತಿಳಿಸಿದರು.


ಅವರು ಸುದ್ದಿಗೋಷ್ಠಿಯಲ್ಲಿ ವಿವರಗಳನ್ನು ನೀಡಿ ಡಿ.೨೫ರ ಬೆಳಿಗ್ಗೆ ೯.೩೦ಕ್ಕೆ ಶಿ.ಪ್ರ.ಸಮಿತಿಯ ಉಪಾಧ್ಯಕ್ಷ ಡಾ|ಶಶಿಭೂಷಣ ಹೆಗಡೆ ದೊಡ್ಮನೆ ಉದ್ಘಾಟಿಸುವರು. ಅಖಿಲ ಹವ್ಯಕ ಮಹಾಸಭೆ ಉಪಾಧ್ಯಕ್ಷ ಆರ್.ಎಂ.ಹೆಗಡೆ ಬಾಳೇಸರ ಅಧ್ಯಕ್ಷತೆವಹಿಸುವರು. ಅತಿಥಿಗಳಾಗಿ ಕೆ.ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ರಾಘವೇಂದ್ರ ಶಾಸ್ತಿç ಪಾಲ್ಗೊಳ್ಳುವರು. ಕಿಬ್ಬಳ್ಳಿ ಮ.ಗ.ಶಿ.ಗ್ರಾ. ಸಂಸ್ಥೆ ಅಧ್ಯಕ್ಷ ನಾಗಪತಿ ಭಟ್ಟ ಮಿಳಗಾರ,ಹೆಗ್ಗರಣಿ ವಿ.ಶಿ.ಸಂಸ್ಥೆ ಅಧ್ಯಕ್ಷ ಎನ್.ಆರ್.ಭಟ್ಟ ದರೆ, ಶ್ರೀಮನ್ನೆಲೆಮಾವು ಮಠದ ಅಧ್ಯಕ್ಷ ಜಿ.ಎಂ.ಹೆಗಡೆ ಹೆಗ್ನೂರು, ನೆಲೆಮಾವು ಸೇ.ಸ.ಸಂಘದ ಅಧ್ಯಕ್ಷ ಜಿ.ಆಯ್.ಹೆಗಡೆ ಉಂಬಳಮನೆ, ಹೆಗ್ಗರಣಿ ಸೇ.ಸ.ಸಂ.ದ ಅಧ್ಯಕ್ಷ ಎಂ.ಎಲ್.ಭಟ್ಟ ಉಂಚಳ್ಳಿ, ಹೇರೂರು ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಅಧ್ಯಕ್ಷ ನರಸಿಂಹಮೂರ್ತಿ ಹೆಗಡೆ ತ್ಯಾರ್ಗಲ್, ಸರಕುಳಿ ಜಗದಾಂಬಾ ಪ್ರೌಢಶಾಲೆ ಅಧ್ಯಕ್ಷ ಎಂ.ಜಿ.ಹೆಗಡೆ ತ್ಯಾರ್ಗಲ್ ಉಪಸ್ಥಿತರಿರುವರು.‌


ಬೆಳಿಗ್ಗೆ ೧೦ರಿಂದ ಸ್ಪರ್ಧಾ ಸೌರಭ ನಡೆಯಲಿದ್ದು ೬ ವರ್ಷದ ಒಳಗಿನವರಿಗೆ ಛದ್ಮವೇಷ,ಶ್ಲೋಕಪಠಣ,ಚೆಂಡು ಎಸೆತ ಸ್ಪರ್ಧೆಗಳು, ೭ರಿಂದ೧೨ ವರ್ಷದವರಿಗೆ ಭಗವದೀತೆ(೧೦ನೇ ಅಧ್ಯಾಯದ ಮೊದಲ ೧೫ ಶ್ಲೋಕಗಳು),ಚಿತ್ರಕಲೆ( ಹಬ್ಬ),ಕೆರೆದಡ ಸ್ಪರ್ಧೆ,೧೩ರಿಂದ ೧೮ ವರ್ಷದವರಿಗೆ ಭಾವಗೀತೆ,ಆಶುಭಾಷಣ,ಸಂಗೀತ ಕುರ್ಚಿ ಸ್ಪರ್ಧೆಗಳು, ಸಾಮಾನ್ಯ ವಿಭಾಗ(೧೮ವರ್ಷ ಮೆಲ್ಪಟ್ಟು) ಹವಿ-ರುಚಿ(ಹಲ್ವಾ),ಸಂಪ್ರದಾಯಗೀತೆ(ಪ್ರತಿ ತಂಡದಲ್ಲಿ ೩ ಜನಕ್ಕೆಅವಕಾಶ) ರಂಗೋಲಿ,ಆರತಿತಟ್ಟೆ,ಪಾಯಸ ಕುಡಿಯುವದು, ಹಗ್ಗಜಗ್ಗಾಟ(೬ಜನರ ತಂಡ) ಮುಂತಾದ ಸ್ಪರ್ಧೆಗಳು ನಡೆಯಲಿವೆ. ಸಂಜೆ ೪ರಿಂದ ಸಂಸ್ಕಾರ ಮತ್ತು ಸಂಸ್ಕೃತಿ ವಿಷಯದ ಕುರಿತು ವಿ| ವಿಶ್ವನಾಥ ವಿ.ಭಟ್ ನರ‍್ಗಾನು, ಸನಾತನ ವೈದಿಕ ಧರ್ಮ ವಿಷಯದ ಕುರಿತು ವಿ| ಮಂಜುನಾಥ ಜಿ.ಭಟ್ಟ ಹೇರೂರು ಉಪನ್ಯಾಸ ನೀಡುವರು.


ಸಂಜೆ ೫ರಿಂದ ಸಮಾರೋಪ ನಡೆಯಲಿದ್ದು ಶ್ರೀಮನ್ನೆಲೆಮಾವು ಮಠದ ಶ್ರೀ ಮಾದವಾನಂದ ಭಾರತೀ ಶ್ರೀಗಳು ದಿವ್ಯ ಉಪಸ್ಥಿತಿ ವಹಿಸಲಿದ್ದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಭ್ಯಾಗತರಾಗಿ ಪಾಲ್ಗೊಳ್ಳುವರು. ಬಾಳೇಸರ ಸೇ.ಸ.ಸಂಘದ ಅಧ್ಯಕ್ಷ ಸಿ.ಎನ್.ಹೆಗಡೆ ತಂಗರ‍್ಮನೆ, ಕಂಚಿಕೈ ಸೇ.ಸ.ಸಂಘದ ಅಧ್ಯಕ್ಷ ಎಂ.ವಿ.ಹೆಗಡೆ, ನಿಲ್ಕುಂದ ಗ್ರಾಪಂ ಅಧ್ಯಕ್ಷ ರಾಜಾರಾಮ ಆರ್.ಹೆಗಡೆ ಬೆಳೆಕಲ್ಲು ಉಪಸ್ಥಿತರಿರುವರು ಎಂದರು.
ಈ ಪ್ರತಿಬಿಂಬ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಬಹುಮಾನ ಪಡೆದವರಿಗೆ ಬೆಂಗಳೂರಿನಲ್ಲಿ ನಡೆಯುವ ಮೆಗಾ ಸ್ಪರ್ಧೆಗೆ ಅವಕಾಶವಿದೆ. ಸ್ಪರ್ಧೆಗಳಿಗೆ ಹೆಸರು ನೊಂದಾಯಿಸುವವರು ಡಿ.೨೫ರ ಒಳಗೆ ೯೧೪೮೪ ೫೯೧೯೧,೮೦೮೮೫೭೪೧೮೧, ೮೭೬೨೬೩೨೮೬೭ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದರು.
ರಾಷ್ಟçಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಜಿ.ಜಿ.ಹೆಗಡೆ ಬಾಳಗೋಡ ಉಪಸ್ಥಿತರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *