ಹುಬ್ಬಳ್ಳಿಯಲ್ಲಿ ಪುಂಡರಿಗೆ ಬಂಧನದ ಭೀತಿ!

ಹುಬ್ಬಳ್ಳಿ: 3 ದಶಕಗಳ ಹಿಂದೆ ರಾಮಮಂದಿರ ಚಳುವಳಿಯಲ್ಲಿ ಭಾಗಿಯಾಗಿದ್ದ ಹಿಂದೂ ಕಾರ್ಯಕರ್ತರಿಗೆ ಬಂಧನದ ಭೀತಿ!

ಅಯೋಧ್ಯೆಯಲ್ಲಿ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ, ಕರ್ನಾಟಕ ರಾಜ್ಯದಲ್ಲಿ ಪೊಲೀಸರು ರಾಮಮಂದಿರಕ್ಕಾಗಿ ಹೋರಾಟ ನಡೆಸಿದ್ದ ಕಾರ್ಯಕರ್ತರ ವಿರುದ್ಧದ ಹಳೆಯ ಪ್ರಕರಣಗಳಿಗೆ ಮರು ಜೀವ ನೀಡಿದ್ದಾರೆ.

A proposed model of Ram temple in Ayodhya. (Photo | Special Arrangement)

ಹುಬ್ಬಳ್ಳಿ: ಅಯೋಧ್ಯೆಯಲ್ಲಿ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ದೇಶದಲ್ಲಿ ಸಂಭ್ರಮಾಚರಣೆ ಮನೆ ಮಾಡಿರುವಾಗ ಕರ್ನಾಟಕ ರಾಜ್ಯದಲ್ಲಿ ಪೊಲೀಸರು ರಾಮಮಂದಿರಕ್ಕಾಗಿ ಹೋರಾಟ ನಡೆಸಿದ್ದ ಕಾರ್ಯಕರ್ತರ ವಿರುದ್ಧದ ಹಳೆಯ ಪ್ರಕರಣಗಳಿಗೆ ಮರು ಜೀವ ನೀಡಿದೆ.

3 ದಶಕಗಳ ಹಿಂದೆ ರಾಮ ಮಂದಿರಕ್ಕಾಗಿ ನಡೆದ ಚಳುವಳಿಯಲ್ಲಿ ಭಾಗಿಯಾಗಿದ್ದ ಕಾರ್ಯಕರ್ತರ ವಿರುದ್ಧದ ಪ್ರಕರಣಗಳನ್ನು ತನಿಖೆ ನಡೆಸುತ್ತಿದೆ.

ಪೊಲೀಸ್ ಇಲಾಖೆ ವಿಶೇಷ ತಂಡವನ್ನು ರಚಿಸಿದ್ದು, ಹಿಂಸಾಚಾರ, ಕೋಮು ಘರ್ಷಣೆಗಳಿಗೆ ಕಾರಣವಾಗಿದ್ದ 1992 ರ ರಾಮ ಮಂದಿರ ಚಳುವಳಿಯಲ್ಲಿ ಭಾಗಿಯಾಗಿದ್ದ ಆರೋಪಿಗಳ ಪಟ್ಟಿಯನ್ನು ತಯಾರಿಸಿದೆ.

ಹುಬ್ಬಳ್ಳಿ ಪೊಲೀಸರು 1992 ರ ಡಿ.05 ರಂದು ಅಲ್ಪಸಂಖ್ಯಾತ ಸಮುದಾಯದವರಿಗೆ ಸೇರಿದ ಅಂಗಡಿಯೊಂದಕ್ಕೆ ಹುಬ್ಬಳ್ಳಿಯಲ್ಲಿ ಬೆಂಕಿ ಹಚ್ಚಿದ್ದ ಆರೋಪದಡಿ ಶ್ರೀಕಾಂತ್ ಪೂಜಾರಿ ಎಂಬಾತನನ್ನು ಬಂಧಿಸಲಾಗಿದೆ. ಪೂಜಾರಿ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇತರ ಎಂಟು ಆರೋಪಿಗಳಿಗಾಗಿ ಹುಡುಕುತ್ತಿದ್ದಾರೆ. ಪೂಜಾರಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಅಂತೆಯೇ, ಹುಬ್ಬಳ್ಳಿ ಪೊಲೀಸರು 1992 ಮತ್ತು 1996 ರ ನಡುವೆ ನಡೆದ ಕೋಮು ಘರ್ಷಣೆಗಳಲ್ಲಿ ಬೇಕಾಗಿದ್ದಾರೆ ಎನ್ನಲಾದ 300 ಆರೋಪಿಗಳ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ. ಆರೋಪಿಗಳು ಈಗ 70 ರ ಆರಂಭದಲ್ಲಿ ಮತ್ತು 70 ರ ಆಸುಪಾಸಿನಲ್ಲಿದ್ದಾರೆ ಮತ್ತು ಅವರಲ್ಲಿ ಅನೇಕರು ದೂರ ಹೋಗಿದ್ದಾರೆ ಎಂದು ಪೊಲೀಸ್ ಮೂಲಗಳು ವಿವರಿಸುತ್ತವೆ.

ಅನೇಕ ಆರೋಪಿಗಳು ಈಗ ಪ್ರಮುಖ ಹುದ್ದೆಗಳಲ್ಲಿದ್ದು, ಅವರ ವಿರುದ್ಧ ಕಾನೂನು ಕ್ರಮದ ಪರಿಣಾಮವನ್ನೂ ಪೊಲೀಸರು ಪರಿಗಣಿಸುತ್ತಿದ್ದಾರೆ. ಈ ಸಂಬಂಧ ಪ್ರಕರಣಗಳನ್ನು ತನಿಖೆಗೆ ವಹಿಸುವಂತೆ ಪೊಲೀಸ್ ಇಲಾಖೆಗೆ ಕಾಂಗ್ರೆಸ್ ಸರ್ಕಾರ ಸೂಚಿಸಿದೆ ಎನ್ನಲಾಗಿದೆ.

ರಾಮಜನ್ಮ ಭೂಮಿ ಆಂದೋಲನದ ಅನೇಕ ವ್ಯಕ್ತಿಗಳು ಈಗ ಪ್ರಮುಖ ಬಿಜೆಪಿ ನಾಯಕರಾಗಿದ್ದಾರೆ ಮತ್ತು ಬಿಜೆಪಿ ಅಧಿಕಾರದಲ್ಲಿದ್ದಾಗ ಪ್ರಮುಖ ನಾಯಕರ ಮೇಲಿನ ಪ್ರಕರಣಗಳನ್ನು ಕೈಬಿಡಲಾಯಿತು ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಸರ್ಕಾರದ ಈ ಕ್ರಮದ ವಿರುದ್ಧ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ಮನೆ ಮನೆಗೆ ತೆರಳಿ ಪ್ರಚಾರ ನಡೆಸುತ್ತಿದ್ದು, ಪ್ರಚಾರ ಸಹಿಸದ ಕಾಂಗ್ರೆಸ್ ಸರ್ಕಾರ ಪ್ರಕರಣಗಳ ಬಗ್ಗೆ ಕ್ರಮ ಕೈಗೊಳ್ಳಲು ಇಂತಹ ಕ್ರಮಕ್ಕೆ ಮುಂದಾಗಿದೆ ಎಂದು ಆರೋಪಿಸಿದ್ದಾರೆ. 

ಈ ಬೆಳವಣಿಗೆ ರಾಜ್ಯದಲ್ಲಿ ಭಾರೀ ವಿವಾದಕ್ಕೆ ಎಡೆಮಾಡಿಕೊಡುವ ಸಾಧ್ಯತೆ ಇದೆ. 1990 ರ ದಶಕದಲ್ಲಿ ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ಪ್ರಾರಂಭಿಸಿದ ರಾಮ ಜನ್ಮಭೂಮಿ ರಥ ಯಾತ್ರೆಯ ಚಳವಳಿಯಲ್ಲಿ ಕರ್ನಾಟಕವು ದೊಡ್ಡ ಹಿಂಸಾಚಾರಕ್ಕೆ ಸಾಕ್ಷಿಯಾಗಿತ್ತು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *