ನಾಳೆ ಹುಲಿಮನೆ ರಾಘವೇಂದ್ರ ಹೆಗಡೆಯವರಿಗೆ ಸನ್ಮಾನ

ಹುಲಿಮನೆ ಕುಟುಂಬದವರಿಂದ ಸನ್ಮಾನ
ಮೂಲತ: ತಾಲೂಕಿನ ಹುಲಿಮನೆಯ ಪ್ರಸಕ್ತ ಸಿ.ಐ.ಡಿ ಸೂಪರಿಂಟೆಂಡೆಂಟ್ ಆಪ್ ಪೊಲೀಸ್ ಅಧೀಕ್ಷಕರಾದ ರಾಘವೇಂದ್ರ ಹೆಗಡೆ ಹುಲಿಮನೆಯವರನ್ನು ಹುಲಿಮನೆ ಕುಟುಂಬದವರು ಜ.೫ರಂದು ಮಧ್ಯಾಹ್ನ ೩.೩೦ಕ್ಕೆ ಪಟ್ಟಣದ ಶಂಕರಮಠದ ಸಭಾಭವನದಲ್ಲಿ ಸನ್ಮಾನಿಸಲಿದ್ದಾರೆ.


ರಾಘವೇಂದ್ರ ಹೆಗಡೆ ತಮ್ಮ ಕರ್ತವ್ಯ ನಿರ್ವಹಣೆಗಾಗಿ ರಾಷ್ಟçಪತಿ ಶಾಘ್ಲನೀಯ ಸೇವಾಪದಕ ಪಡೆಯುವ ಮೂಲಕ ಪ್ರತಿಷ್ಠಿತ ಗೌರವಕ್ಕೆ ಪಾತ್ರರಾಗಿದ್ದಾರೆ. ೨೦೧೨ರಲ್ಲಿ ಮುಖ್ಯಮಂತ್ರಿಗಳ ಚಿನ್ನದ ಪದಕದ ಗೌರವವನ್ನು ಇವರು ಪಡೆದಿದ್ದರು.
ಇವರು ಕನ್ನಡ ರಂಗಭೂಮಿಯಲ್ಲಿ ದಂತಕಥೆಯಾಗಿರುವ, ತಮ್ಮ ಅಭಿನಯಕ್ಕಾಗಿ ದೇಶದ ಮೊದಲ ರಾಷ್ಟçಪತಿ ಬಾಬು ರಾಜೇಂದ್ರ ಪ್ರಸಾದ ಅವರಿಂದ ಗೌರವಿಸಲ್ಪಟ್ಟ ಹುಲಿಮನೆ ಸೀತಾರಾಮ ಶಾಸ್ತಿçಯವರ (ಅಣ್ಣನ ಮೊಮ್ಮಗ) ಮೊಮ್ಮಗ ಎನ್ನುವದು ಮಹತ್ವದ ಸಂಗತಿ.
ಹುಲಿಮನೆಯ ಕೃಷ್ಣಮೂರ್ತಿ ಹೆಗಡೆ, ಲಲಿತಾ ಹೆಗಡೆ ದಂಪತಿಗಳ ಪುತ್ರರಾದ ರಾಘವೇಂದ್ರ ಹೆಗಡೆ ಬೆಂಗಳೂರು ವಿ.ವಿ. ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದು ಎರಡು ವರ್ಷಗಳ ವಕೀಲಿ ವೃತ್ತಿಯ ನಂತರ ಸಿ.ಐ.ಡಿ.ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಪೊಲೀಸ್ ಇಲಾಖೆಗೆ ಸೇರಿ ೨೨ ವರ್ಷಗಳ ಸೇವೆ ಸಲ್ಲಿಸುತ್ತ,೨೦೦೧ರಲ್ಲಿ ಡಿಟೆಕ್ಟಿವ್ ಸಬ್ ಇನಸ್ಪೆಕ್ಟರ್ ಆಗಿ,ಸೈಬರ್ ಕ್ರೆöÊಂ ಇಲಾಖೆಯ ಉಸ್ತುವಾರಿಯಾಗಿ ಈಗ ಸಿ.ಐ.ಡಿ ಸೂಪರಿಂಟೆಂಡೆಂಟ್ ಆಪ್ ಪೊಲೀಸ್ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ನಿ ಸುಮಲತಾ, ಪುತ್ರ ಯಶಸ್ವಿ ಜೊತೆಗಿನ ಸಂತೃಪ್ತ ಕುಟುಂಬ ಅವರದ್ದು.


ಸವಾಲಿನ ಪ್ರಕರಣಗಳಾದ ಬಹುಕೋಟಿ ವಂಚನೆಯ ಅಬ್ದುಲ್ ಕರೀಂ ತೆಲಗಿ ನಕಲಿ ಸ್ಟಾಂಪ್ ಪೇಪರ್ ಜಾಲದ ಪ್ರಾಥಮಿಕ ತನಿಖೆ, ಪಿ.ಎಸ್.ಐ.ನೇಮಕಾತಿ ಅಕ್ರಮ ಪ್ರಕರಣದ ಉಸ್ತುವಾರಿ,ಸೈಬರ್ ಅಪರಾಧಗಳ ಬಗೆಹರಿಸುವಿಕೆ ಮುಂತಾದ ಕ್ಲಿಷ್ಟಕರ ಪ್ರಕರಣಗಳನ್ನು ರಾಘವೇಂದ್ರ ಹೆಗಡೆ ನಿಭಾಯಿಸಿದ್ದಾರೆ.
ತಮ್ಮ ಕುಟುಂಬದ ರಾಘವೇಂದ್ರ ಹೆಗಡೆಯವರ ಸಾಧನೆಗೆ ಹುಲಿಮನೆ ಕುಟುಂಬದವರು ಗೌರವ ಸನ್ಮಾನ ಆಯೋಜಿಸಿದ್ದು ಎಲ್ಲರೂ ಪಾಲ್ಗೊಳ್ಳಬೇಕೆಂದು ಸಂಘಟಕರಲ್ಲೊಬ್ಬರಾದ ಗಣಪತಿ ಹೆಗಡೆ ಹುಲಿಮನೆ ಕೋರಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *