


ಸಾಮಾಜಿಕ,ರಾಜಕೀಯ,ಸಹಕಾರಿ ಯಾವುದೇ ಕ್ಷೇತ್ರದಲ್ಲಿದ್ದರೂ ಜನಪರತೆ ಮುಖ್ಯ ಎಂದಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮುಂದಿನ ಮೂರು ವರ್ಷಗಳಲ್ಲಿ ೩೦೦೦ ಸಾವಿರ ಕೆ.ಪಿ.ಎಸ್. ಶಾಲೆಗಳನ್ನು ತೆರೆಯುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡುವ ಮುನ್ಸೂಚನೆ ನೀಡಿದರು.

ಸಿದ್ಧಾಪುರ ಟಿ.ಎಂ.ಎಸ್. ಸಂಸ್ಥೆಯ ಕಾನಸೂರು ಶಾಖೆಯ ಹೊಸ ಕಟ್ಟಡಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ರೈತರು,ಸಹಕಾರಿ ಕ್ಷೇತ್ರ,ಶಿಕ್ಷಣ ಕ್ಷೇತ್ರಗಳಲ್ಲಿ ಬದ್ಧತೆಯಿಂದ ಏನಾದರೂ ಸಾಧಿಸಲು ಸಾಧ್ಯ ಎಂಬುದನ್ನು ಸಾಬೀತುಮಾಡಿದವರು ಎಸ್. ಬಂಗಾರಪ್ಪ
ರೈತರಿಗೆ ಉಚಿತ ವಿದ್ಯುತ್ ನೀಡದಿದ್ದರೆ ಕೃಷಿ ಕ್ಷೇತ್ರ ಸುಧಾರಿಸುತ್ತಿರಲಿಲ್ಲ, ಶಾಲೆಗೆ ಬರುವ ಮಕ್ಕಳಿಗೆ ಹಣ ನೀಡುವ ಅಕ್ಷಯ ಯೋಜನೆಯಿಂದ ಶಿಕ್ಷಿತರ ಪ್ರಮಾಣ ಹೆಚ್ಚಾಯಿತು. ಕೃಷಿ-ಶಿಕ್ಷಣಗಳಿಂದ ಸಹಕಾರಿ ಕ್ಷೇತ್ರಕ್ಕೆ ನೆರವಾಯಿತು. ಇಂಥ ಸಂದರ್ಭದಲ್ಲಿ ಜನರು ಬಂಗಾರಪ್ಪನವರನ್ನು ನೆನಪಿಸಿದಾಗ ಅವರ ಕೊಡುಗೆ ಸ್ಮರಿಸಿದಂತಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ತಾಲೂಕಿನ ಸಹಕಾರಿ ಕ್ಷೇತ್ರದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಶಾಸಕರಾದ ಭೀಮಣ್ಣ ನಾಯ್ಕ ಮತ್ತು ಶಿವರಾಮ ಹೆಬ್ಬಾರ್ ಮಾತನಾಡಿದರು. ಟಿ.ಎಂ.ಎಸ್. ಅಧ್ಯಕ್ಷ ಆರ್. ಎಂ. ಹೆಗಡೆ ಪ್ರಾಸ್ಥಾವಿಕವಾಗಿ ಮಾತನಾಡಿ ಬಂಗಾರಪ್ಪನವರಿಂದ ತಾವು ಸಹಕಾರಿ ಕ್ಷೇತ್ರದಲ್ಲಿ ಉಳಿಯುವಂತಾಯಿತು ಎಂದು ನೆನಪಿಸಿ ಎಲ್ಲರನ್ನೂ ಸ್ವಾಗತಿಸಿದರು.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
