ದೇವಸ್ಥಾನಗಳು ಮಾನಸಿಕ ಗುಲಾಮಗಿರಿಗೆ ದಾರಿ…

ದೇವಸ್ಥಾನಗಳು ಮಾನಸಿಕ ಗುಲಾಮಗಿರಿಗೆ ದಾರಿ: ಶಾಲೆಗಳು ಬೆಳಕಿನ ಮಾರ್ಗ; ಬಿಹಾರ ಶಿಕ್ಷಣ ಸಚಿವ

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಉದ್ಘಾಟನೆಗೊಳ್ಳಲಿರುವ ರಾಮಮಂದಿರದ ಕುರಿತು ಬಿಹಾರದ ಶಿಕ್ಷಣ ಸಚಿವ ಡಾ.ಚಂದ್ರಶೇಖರ್ ನೀಡಿರುವ ಹೇಳಿಕೆ ವಿವಾದ ಸೃಷ್ಟಿಸಿದೆ.

Bihar Minister Chandrashekar

ಪಾಟ್ನಾ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಉದ್ಘಾಟನೆಗೊಳ್ಳಲಿರುವ ರಾಮಮಂದಿರದ ಕುರಿತು ಬಿಹಾರದ ಶಿಕ್ಷಣ ಸಚಿವ ಡಾ.ಚಂದ್ರಶೇಖರ್ ನೀಡಿರುವ ಹೇಳಿಕೆ ವಿವಾದ ಸೃಷ್ಟಿಸಿದೆ.

ಶಾಲೆಗಳು ಜೀವನದ ಬೆಳಕಿನ ಮಾರ್ಗವಾಗಿವೆ ಎಂದು ಪಕ್ಷದ ಶಾಸಕ ಫತೇಹ್ ಬಹದ್ದೂರ್ ಸಿಂಗ್ ಅವರ ಹೇಳಿಕೆಗೆ ಬೆಂಬಲ ಸೂಚಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಅಯೋಧ್ಯೆ ರಾಮಮಂದಿರ ಕುರಿತು ಮಾತನಾಡಿದ ಅವರು, ದೇವಸ್ಥಾನಕ್ಕೆ ಹೋಗುವ ಹಾದಿ ಮಾನಸಿಕ ಗುಲಾಮಗಿರಿಯ ದಾರಿಯಾಗಿದೆ. ಶಾಲೆಗಳಿಗೆ ಹೋಗುವ ಹಾದಿ ಮಾತ್ರವೇ ಬೆಳಕಿನ ಹಾದಿಯನ್ನು ಸುಗಮಗೊಳಿಸುತ್ತವೆ ಎಂದು ಹೇಳಿ, ಇದನ್ನು ನಾನು ಹೇಳಿಲ್ಲ, ಸಾವಿತ್ರಿ ಬಾಯಿ ಫುಲೆ ಅವರು ಹೇಳಿದ್ದು ಎಂದಿದ್ದಾರೆ.

ರಾಮ ಮಂದಿರಕ್ಕಾಗಿ ಮಂಜೂರು ಮಾಡಿರುವ ನಿವೇಶನ ಕೇವಲ ಶೋಷಣೆಯ ತಾಣವಾಗಿದೆ. ಇದು ಒಂದು ನಿರ್ದಿಷ್ಟ ಸಮುದಾಯದ ಕೆಲವು ಪಿತೂರಿಗಾರರ ಜೇಬು ತುಂಬುವ ಸ್ಥಳವಾಗಿದೆ. ನಾವು ಹುಸಿ ಹಿಂದುತ್ವ ಮತ್ತು ಹುಸಿ ರಾಷ್ಟ್ರೀಯತೆಯ ಬಗ್ಗೆ ಜಾಗೃತರಾಗಿರಬೇಕು. ಪ್ರತಿಯೊಂದರಲ್ಲೂ ಭಗವಾನ್ ರಾಮ ವಾಸಿಸುತ್ತಾನೆ. ಭಗವಾನ್ ರಾಮನನ್ನು ಹುಡುಕಲು ಯಾವುದೇ ದೇವಾಲಯಕ್ಕೆ ಹೋಗುವ ಅಗತ್ಯವಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

19ನೇ ಶತಮಾನದಲ್ಲಿ ಅಸ್ಪೃಶ್ಯತೆ, ಸತಿ ಪದ್ಧತಿ, ಬಾಲ್ಯವಿವಾಹದಂತಹ ಅನಿಷ್ಠ ಪದ್ಧತಿಗಳ ವಿರುದ್ಧ ಸಾವಿತ್ರಿ ಬಾಯಿ ತಮ್ಮ ಪತಿಯೊಂದಿಗೆ ಒಟ್ಟಾಗಿ ಹೋರಾಡಿದ್ದಾರೆ. ಅವರಿಂದಲೇ ನಮ್ಮ ಸಮಾಜದಲ್ಲಿ ಪರಿಶಿಷ್ಟ ಜಾತಿಗೆ ಸ್ಥಾನ ಸಿಕ್ಕಿದೆ. ಹಾಗಾಗಿ ಪ್ರತಿಯೊಬ್ಬರು ವಿದ್ಯಾವಂತರಾಗಿ, ಸಂಘಟಿತರಾಗಿ ಹೋರಾಡಬೇಕು ಎಂದು ಕರೆ ನೀಡಿದ್ದಾರೆ.

ಯಾವುದೇ ದೇವಸ್ಥಾನಗಳು ನಿಮ್ಮ ಮಕ್ಕಳನ್ನು ಜವಾನನಿಂದ ಕಲೆಕ್ಟರ್‌ ಆಗಿ ಪರಿವರ್ತಿಸುವುದಿಲ್ಲ, ಪುಸ್ತಕ, ಲೇಖನಿ, ಶಾಲೆ, ಶಿಕ್ಷಣದಿಂದ ಮಾತ್ರವೇ ನಿಮ್ಮ ಮಕ್ಕಳನ್ನ ಪರಿವರ್ತಿಸಲು ಸಾಧ್ಯ. ಆದ್ದರಿಂದ ಅಕ್ಷತೆಯನ್ನು ನೀಡುವವರನ್ನು ಬಿಟ್ಟು ಅಂಬೇಡ್ಕರ್‌ ಅವರ ತತ್ವಗಳನ್ನು ಅನುಸರಿಸಿ ಎಂದು ಕರೆ ನೀಡಿದ್ದಾರೆ.

ಗಾಯವಾದರೆ ಎಲ್ಲಿಗೆ ಹೋಗುತ್ತೀರಿ? ದೇವಸ್ಥಾನ ಅಥವಾ ಆಸ್ಪತ್ರೆ? ನಿಮಗೆ ಶಿಕ್ಷಣ ಬೇಕು, ಅಧಿಕಾರಿ, ಎಂಎಲ್ಎ ಅಥವಾ ಎಂಪಿ ಆಗಬೇಕಾದರೆ ನೀವು ದೇವಸ್ಥಾನಕ್ಕೆ ಹೋಗುತ್ತೀರಾ ಅಥವಾ ಶಾಲೆಗೆ ಹೋಗುತ್ತೀರಾ? ಫತೇ ಬಹದ್ದೂರ್ ಸಿಂಗ್ ಅವರು ಸಾವಿತ್ರ ಬಾಯಿ ಫುಲೆ ಅವರ ಮಾತನ್ನೇ ಹೇಳಿದ್ದಾರೆ ಎಂದು ಪ್ರತಿಪಾದಿಸಿದರು. ಈಗ ಏಕಲವ್ಯನ ಮಗ ತನ್ನ ಹೆಬ್ಬೆರಳನ್ನು ಬಲಿ ಕೊಡುವುದಿಲ್ಲ, ಈಗ, ಜನರಿಗೆ ಹೇಗೆ ಕಾಣಿಕೆಗಳನ್ನು ಸಲ್ಲಿಸಬೇಕೆಂದು ತಿಳಿದಿದೆ.

ಇಂತಹ ಹೇಳಿಕೆಗಳ ಮೂಲಕ ಆರ್‌ಜೆಡಿ ನಾಯಕರು ತಮ್ಮ ಮುಸ್ಲಿಂ ಮತದಾರರನ್ನು ಮೆಚ್ಚಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿಯ ಹಿರಿಯ ನಾಯಕ ನಿಖಿಲ್ ಆನಂದ್ ಹೇಳಿದ್ದಾರೆ. ಹಿಂದೂಗಳನ್ನು ನಿಂದಿಸಲು ಮತ್ತು ಮುಸ್ಲಿಮರನ್ನು ಸಮಾಧಾನಪಡಿಸಲು ಆರ್‌ಜೆಡಿ ಯಾವುದೇ ಹಂತಕ್ಕೂ ಹೋಗಲು ಸಿದ್ಧವಾಗಿದೆ. ಅಯೋಧ್ಯೆ ಮತ್ತು ಮಥುರಾ ಭಾರತದ ಆಧ್ಯಾತ್ಮಿಕ-ಸಾಂಸ್ಕೃತಿಕ ಪರಂಪರೆ ಸ್ಥಾನಗಳು ಎಂದಿದ್ದಾರೆ. (ಕಪ್ರಡಾ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *