ಗಣಪತಿಯ ಪ್ರತಿಬಿಂಬವಿಲ್ಲದ ಕಾಟೇರ! katera move review

ರಾಜ್ಯದ ಲಕ್ಷಾಂತರ ಗೇಣಿದಾರರನ್ನು ಭೂ ಒಡೆಯರನ್ನಾಗಿಸಿದ ಕಾನೂನು ಜಾರಿ ಮಾಡಿದವರು ಕಾಂಗ್ರೆಸ್‌ ನ ಇಂದಿರಾಗಾಂಧಿ ಮತ್ತು ದೇವರಾಜ್‌ ಅರಸು ಎನ್ನುವ ಸತ್ಯ ಸಾಕಷ್ಟು ಪ್ರಚಾರ ಪಡೆದಿದೆ. ಆದರೆ ರಾಜ್ಯದಲ್ಲಿ ಊಳುವವನೇ ಒಡೆಯ ಕಾಯಿದೆ ಜಾರಿಯಾಗಲು ಕಾರಣವಾದದ್ದು ಶಿವಮೊಗ್ಗ ಜಿಲ್ಲೆಯ ಸಾಗರದ ಕಾಗೋಡು ಹೋರಾಟ, ಈ ಹೋರಾಟದ ಫಲವಾಗಿ ಕಾಂಗ್ರೆಸ್‌ ಊಳುವವನೇ ಒಡೆಯ ಕಾನೂನು ಜಾರಿ ಮಾಡಿ ಈಗಲೂ ಪ್ರಬಲ ವರ್ಗಗಳ ವಿರೋಧ ಎದುರಿಸುತ್ತಿರುವುದು ವಾಸ್ತವ.

ಈ ವರ್ಷ ವ್ಯಾಪಕ ಚರ್ಚೆ,ಪ್ರಚಾರಕ್ಕೆ ಕಾರಣವಾದ ಕಾಟೇರ ಸಿನೆಮಾ ಕಾಲ್ಪನಿಕ ಕಥಾ ಹಂದರದ ಚಿತ್ರವಾದರೂ ವಾಸ್ತವದಲ್ಲಿ ಆ ಚಿತ್ರದ ಕಾಟೇರ ಉತ್ತರ ಕನ್ನಡ ಜಿಲ್ಲೆಯ ಹೊಸೂರು ಗಣಪತಿಯಪ್ಪ.

ಗ್ರಾಮ ಪಂಚಾಯತ್‌ ಆಡಳಿತವಿದ್ದ ಸಿದ್ಧಾಪುರ ತಾಲೂಕಿನ ಹೊಸೂರು ಗಾಡಿ ಗಣಪತಿಯಪ್ಪ ಸಿದ್ಧಾಪುರದ ಪ್ರಾಥಮಿಕ ಶಾಲೆಯಲ್ಲಿ ಜಮೀನ್ಧಾರರ ಮಗ ರಾಮಕೃಷ್ಣ ಹೆಗಡೆಯವರ ಸಹಪಾಠಿಯಾಗಿ ಬೆಳೆಯುತ್ತಾರೆ. ಶ್ರೀಮಂತ ರಾಮಕೃಷ್ಣ ಹೆಗಡೆ ಶಿಕ್ಷಣಕ್ಕಾಗಿ ಊರೂರು ಅಲೆದು ವಕೀಲನಾದರೆ ಬಡ ಗಣಪತಿ ಏಳನೇ ತರಗತಿ ಅಂದರೆ ಅಂದಿನ ಮುಲ್ಕಿ ನಂತರ ಸಿದ್ಧಾಪುರ ಗ್ರಾ.ಪಂ ಕಾರ್ಯದರ್ಶಿಯಾಗಿ ಬ್ರಿಟೀಷರಿಗೆ ವಿಧೇಯರಾಗದೆ ಸರ್ಕಾರಿ ನೌಕರಿ ಬಿಟ್ಟು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಳ್ಳುತ್ತಾರೆ. ಸ್ವಾತಂತ್ರ್ಯ ಹೋರಾಟಗಾರರಿಗೆ ಕರಪತ್ರಗಳ ಸಾಹಿತ್ಯ ಸಾಗಿಸುವ ಗಣಪತಿ ಶಿರಸಿಯಲ್ಲಿ ಪೊಲೀಸರಿಗೆ ಸೆರೆ ಸಿಕ್ಕು ಬೆಳಗಾವಿ ಜೈಲು ಪಾಲಾಗುತ್ತಾರೆ.

ಹೀರೋ ಗಣಪತಿ ಸ್ವಾತಂತ್ರ್ಯದ ಜೈಲು ಪೂರೈಸಿ ಗ್ರಾಮಕ್ಕೆ ಬಂದಾಗ ನೌಕರಿ ಬಿಟ್ಟು ಜೈಲು ಸೇರಿದನೆಂದು ಮನೆ, ಗ್ರಾಮ, ಸಂಬಂಧಿಗಳ ತಿರಸ್ಕಾರಕ್ಕೆ ಒಳಗಾಗಿ ಮುಂಬೈ ಪ್ರೆಸಿಡೆನ್ಸಿಯ ಬ್ರಿಟೀಸ್‌ ಸರ್ಕಾರದಿಂದ ತಪ್ಪಿಸಿಕೊಳ್ಳಲು ಮೈಸೂರು ಸಂಸ್ಥಾನದ ಸಾಗರ ತಾಲೂಕು ಸೇರುತ್ತಾರೆ.

ಸಾಗರದ ಹಿರೇನೆಲ್ಲೂರಿನಲ್ಲಿ ಗಾಂವಟಿ ಶಾಲೆ ಮಾಸ್ತರ್‌ ಆಗಿ ಗ್ರಾಮೀಣ ಜನರಿಗೆ ಅಕ್ಷರ ಬರೆಸಿದ ಗಣಪತಿಯವರಿಗೆ ಶಾಲೆ ನಡೆಸಲು ಜಾಗ ಕೊಡದ ಊರಿನ ಸಾಹುಕಾರರ ವಿರುದ್ಧ ಜನಸಂಘಟನೆ ಮಾಡುವ ಗಣಪತಿ ಗೇಣಿದಾರರ ನೋವಿಗೆ ಕಿವಿಯಾಗಿ ಗೇಣಿ ಪದ್ಧತಿ ವಿರುದ್ಧ ಹೋರಾಟ ಪ್ರಾರಂಭಿಸುತ್ತಾರೆ. ಹಿರೆನೆಲ್ಲೂರಿನಿಂದಲೇ ಅಂದಿನ ಪ್ರಜಾಪ್ರತಿನಿಧಿ ಕಾಗೋಡು ಒಡೆಯರ್‌ ಮನೆತನದ ಜಮೀನ್ಧಾರಿಕೆ ವಿರುದ್ಧ ಹೋರಾಟ ಪ್ರಾರಂಭಿಸಿ ರೈತ ಸಂಘದ ನೆರವಿನೊಂದಿಗೆ ಸಮಾಜವಾದಿಗಳ ಸಂಘ ಸೇರಿ ಶಾಂತವೇರಿ ಗೋಪಾಲಗೌಡರ ಮೂಲಕ ಲೋಹಿಯಾರನ್ನು ಕಾಗೋಡಿಗೆ ಕರೆತರುತ್ತಾರೆ.

ರಾಷ್ಟ್ರ ನಾಯಕ ಲೋಹಿಯಾ ಪ್ರವೇಶದಿಂದ ಅಂತರಾಷ್ಟ್ರೀಯ ಸುದ್ದಿಯಾದ ಗೇಣಿದಾರರ ಕಾಗೋಡು ಹೋರಾಟ ಊಳುವವನೇ ಒಡೆಯ ಕಾನೂನು ಜಾರಿಗೆ ಕಾರಣವಾಗುತ್ತದೆ. ಕಾಂಗ್ರೆಸ್‌ ಬದ್ಧತೆ, ದೇವರಾಜ್‌ ಅರಸು ಗಟ್ಟಿತನಗಳಿಂದ ಊಳುವವನೇ ಒಡೆಯ ಕಾನೂನೇನೋ ಜಾರಿಯಾಯಿತು. ಆದರೆ ಮೇಲ್ವರ್ಗ, ಜಮೀನ್ಧಾರರ ಕಿರುಕುಳ ಅಂತ್ಯವಾಯಿತೆ?

ಅದು ಮತ್ತೊಂದು ಕತೆ. ತೆಲುಗು ಚಿತ್ರಗಳ ಮಾದರಿಯಲ್ಲಿ ಹಿರೋಜಿಸಂ. ಹಿಂಸೆ ವಿಜೃಂಬಿಸಿದ ಕಾಟೇರ ಕತೆ,ನಿರೂಪಣೆ ಯಾವ ದೃಷ್ಟಿಯಿಂದಲೂ ಕಾಗೋಡಿನ ರಕ್ತರಹಿತ ಕ್ರಾಂತಿಯನ್ನು ನೆನಪಿಸುವುದೇ ಇಲ್ಲ. ಆದರೆ ಜಮೀನ್ಧಾರರ ಕ್ರೌರ್ಯ, ಜಾತೀಯತೆ ಅದರೊಂದಿಗೆ ಮರ್ಯಾದೆ ಹತ್ಯೆಯನ್ನೂ ಸೇರಿಸಿ ಪರಿಶಿಷ್ಟರು,ಮೇಲ್ವರ್ಗದ ಸಂಘರ್ಷವನ್ನು ತೆರೆಯ ಮೇಲೆ ರಾರಾಜಿಸಿದ ನಿರ್ಧೇಶಕರು ವ್ಯಾಪಾರಿ ದೃಷ್ಟಿಯಿಂದ ಗೆಲುವುಸಾಧಿಸಿದ್ದಾರೆ. ಗೇಣಿಪದ್ಧತಿ ತೆರವಾಗಿ ಊಳುವವನೇ ಒಡೆಯನನ್ನಾಗಿ ಮಾಡಿದ ನಿಜ ಹೀರೋ ಹೊಸೂರಿನ ಗಣಪತಿಯಪ್ಪ ಶಾಂತಿಯಿಂದ ರಾಜ್ಯದ ರೈತರಿಗೆ ಭೂಮಿ ಒಡೆಯರನ್ನಾಗಿಸಿದ ಧೀರ. ಕಾಟೇರದ ಹೀರೋಗೂ,ವಾಸ್ತವದ ನಿಜ ನಾಯಕ ಗಣಪತಿಗೂ ಎಲ್ಲಿಯೂ ಸಂಬಂಧವಿಲ್ಲ!

ಕಾಟೇರ ಚಿತ್ರ ನೋಡಿ ಇದು ಕಾಗೋಡು ಹೋರಾಟದ ಕಥನವೆಂದರೆ ಅದು ಕಾಗೋಡು ಹೋರಾಟವಲ್ಲ ಅದರ ನೆರಳಾಗಿಯೂ ದಕ್ಕುವುದಿಲ್ಲ. ಆದರೆ ನಿಜಹೀರೋ ನಂತೆ ತೆರೆಯ ಹೀರೋ ಗಾಂಧಿತತ್ವ, ಶಾಂತಿ ಮಂತ್ರ ಜಪಿಸಿದರೆ ಅದನ್ನ್ಯಾರು ನೋಡುತ್ತಾರೆ?

ಕೆಲವು ನ್ಯೂನ್ಯತೆಗಳ ನಡುವೆ ನಮ್ಮದೇ ಚರಿತ್ರೆಯನ್ನು ಹೊಲೆಮಾರಿ ವೈಭವವನ್ನು ರಂಗುತುಂಬಿ ವಿಜೃಂಬಿಸುವ ಮೂಲಕ ಮತಾಂಧ ಕೋಣಗಳಾಗಿರುವಕೆಲವು ಶೂದ್ರ ಅನಕ್ಷರಸ್ಥ ಅವಿವೇಕಿಗಳ ತಲೆ ಕಡಿದಿರುವ ಚಿತ್ರತಂಡ ಹೊಸ ಅಲೆಯನ್ನಂತೂ ಎಬ್ಬಿಸಿದೆ. ರಾಕಲೈನ್‌ ತರುಣ್‌ ಸುಧೀರ, ದರ್ಶನ್‌ ಸೇರಿದ ಕನ್ನಡ ಚಿತ್ರತಂಡ ೨೦೨೪ ರ ವೇಳೆಗಾದರೂ ಹೀಗೆ ಎದ್ದು ನಿಂತಿದ್ದು ಶುಭ ಸೂಚನೆಯೇ. ಬಹುಸಂಖ್ಯಾತರ ವಿಸ್ಮೃತಿಯ ಕಣ್ಣು ತೆರೆಸುವ ಹಿನ್ನೆಲೆಯಲ್ಲಿ ಇಡೀ ಚಿತ್ರತಂಡವನ್ನು ಮನತುಂಬಿ ಅಭಿನಂದಿಸಲೇ ಬೇಕು.

(- ಕನ್ನೇಶ್‌ ಕೋಲಶಿರ್ಸಿ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *