ಶೃಂಗೇರಿ ಶಾರದಾ ಪೀಠ ಸ್ಪಷ್ಟನೆ: ಈ ಮಧ್ಯೆ ಕೆಲ ಧರ್ಮದ್ವೇಷಿಗಳು ಸಾಮಾಜಿಕ ಜಾಲತಾಣದಲ್ಲಿ ಶೃಂಗೇರಿ ಶಾರದಾಪೀಠದ ಭಾರತೀತೀರ್ಥಸ್ವಾಮಿಗಳ ಫೋಟೋದ ಜೊತೆಗೆ ಶ್ರೀಗಳು ಪ್ರಾಣಪ್ರತಿಷ್ಠಾ ಕಾರ್ಯಕ್ರಮವನ್ನು ವಿರೋಧಿಸುತ್ತಿದ್ದಾರೆ……

ಅಯೋಧ್ಯೆ ರಾಮಮಂದಿರ: ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳದಿರಲು ಕೆಲ ಪ್ರಮುಖ ಹಿಂದೂ ಸ್ವಾಮೀಜಿಗಳ ನಿರ್ಧಾರ!

ಅಯೋಧ್ಯೆಯಲ್ಲಿನ ನೂತನ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದ ಬಗ್ಗೆ ಹಲವು ಹಿಂದೂ ಸ್ವಾಮೀಜಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಅವರ ವಿಭಿನ್ನ ದೃಷ್ಟಿಕೋನ ಮತ್ತು ನಂಬಿಕೆಗಳನ್ನು ಒತ್ತಿ ಹೇಳಿದ್ದಾರೆ. 

Google News

Shankaracharyas_from_Puri_and_Jothis_math1

ನವದೆಹಲಿ: ಅಯೋಧ್ಯೆಯಲ್ಲಿನ ನೂತನ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದ ಬಗ್ಗೆ ಹಲವು ಹಿಂದೂ ಸ್ವಾಮೀಜಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಅವರ ವಿಭಿನ್ನ ದೃಷ್ಟಿಕೋನ ಮತ್ತು ನಂಬಿಕೆಗಳನ್ನು ಒತ್ತಿ ಹೇಳಿದ್ದಾರೆ. 

ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪಾಲ್ಗೊಳ್ಳದಿರಲು ಶಂಕರಾಚಾರ್ಯರ  ಕೆಲ ಮಠಗಳ ಸ್ವಾಮೀಜಿಗಳು ನಿರ್ಧರಿಸಿದ್ದಾರೆ ಎಂದು ವರದಿಗಳು ಹೇಳಿವೆ. ಸನಾತನ ಧರ್ಮದ  ಅನುಸಾರ  ಸಮಾರಂಭ ನಡೆಯುತ್ತಿಲ್ಲ ಎಂಬುದು ಅವರು ಹೇಳಿದ್ದಾರೆ. 

ಪುರಿಯ ಗೋವರ್ಧನ ಪೀಠದ  ಸ್ವಾಮೀಜಿ  ನಿಶ್ಚಲಾನಂದ ಸರಸ್ವತಿ ಅವರು ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂದು ನಮ್ಮ ಶಾಸ್ತ್ರಗಳ ಅನುಸಾರ ದೇವಸ್ಥಾನದಲ್ಲಿ ರಾಮಲಾಲ ವಿಗ್ರಹವನ್ನು ಪ್ರತಿಷ್ಠಾಪಿಸುವ ಅಗತ್ಯವನ್ನು ಅವರು ಒತ್ತಿ ಹೇಳಿದ್ದರು.

ಗುರುವಾರ ಅವರು ರಾಮನ ಗೌರವವನ್ನು ಕಾಪಾಡಿಕೊಳ್ಳುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಪೂಜೆಯು ಸಾಂಪ್ರದಾಯಿಕ ಆಚರಣೆಗಳೊಂದಿಗೆ ನಡೆಯಬೇಕು ಎಂದು ಒತ್ತಾಯಿಸಿದರು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದ ತಮ್ಮ ದೃಢನಿಲುವನ್ನು ಪುನರುಚ್ಚಿಸಿದ ನಿಶ್ಚಲಾನಂದ್ ಸ್ವಾಮೀಜಿ, ‘ಪ್ರಾಣ ಪ್ರತಿಷ್ಠಾಪನೆ’ ಸಮಾರಂಭಕ್ಕೆ ರಾಜಕೀಯ ಛಾಯೆ ನೀಡಲಾಗಿದೆ ಎಂದು ಪ್ರತಿಪಾದಿಸಿದರು.

ದೇಶದ ಪ್ರಧಾನಿಯವರು ಗರ್ಭಗುಡಿಯಲ್ಲಿದ್ದು, ವಿಗ್ರಹವನ್ನು ಸ್ಪರ್ಶಿಸುತ್ತಾರೆ ಮತ್ತು ‘ಪ್ರಾಣ ಪ್ರತಿಷ್ಠಾಪನೆ’ ಸಮಾರಂಭ ಉದ್ಘಾಟಿಸುತ್ತಾರೆ. ಇದಕ್ಕೆ ರಾಜಕೀಯ ರಂಗು ನೀಡಲಾಗಿದೆ. ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಆಗಬೇಕಾದರೆ, ಅದು ನಿಯಮ ಪ್ರಕಾರವಾಗಿರಬೇಕು. ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಅರ್ಧ-ಸತ್ಯ ಮತ್ತು ಅರ್ಧ-ಸುಳ್ಳನ್ನು ಬೆರೆಸಬಾರದು; ಎಲ್ಲವೂ ಧರ್ಮಗ್ರಂಥದ ಜ್ಞಾನದೊಂದಿಗೆ ಹೊಂದಿಕೊಳ್ಳಬೇಕು ಎಂದು ಅವರು ಹೇಳಿದರು.

ಮತ್ತೊಂದೆಡೆ, ಜನವರಿ 22 ರಂದು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡುವುದಿಲ್ಲ ಎಂದು ಪ್ರತಿಪಾದಿಸಿದ ಶಂಕರಾಚಾರ್ಯ ಜ್ಯೋತಿಶ್ ಪೀಠದ ಸ್ಲಾಮೀಜಿ ಅವಿಮುಕ್ತೇಶ್ವರಾನಂದ, ಮಂದಿರ ನಿರ್ಮಾಣ ಸನಾತನ ಧರ್ಮದ ವಿಜಯವನ್ನು ಸೂಚಿಸುವುದಿಲ್ಲ ಎಂದು ಹೇಳಿದರು. 

“ಅಯೋಧ್ಯೆಯು ಈಗಾಗಲೇ ರಾಮಮಂದಿರವನ್ನು ಹೊಂದಿತ್ತು, ಮತ್ತು ಅದರ ನಿರ್ಮಾಣವು ಧರ್ಮದ ಕೊಡುಗೆ ಅಥವಾ ವಿಜಯವಲ್ಲ. ರಾಜಕೀಯ ನಾಯಕರು ಜನವರಿ 22 ರಂದು ಅಯೋಧ್ಯೆಗೆ ಹೋಗದಿರುವುದು ಅವರ ರಾಜಕೀಯ ನಿರ್ಬಂಧಗಳಿಂದಾಗಿರಬಹುದು, ಆದರೆ ಅಂತಹ ಯಾವುದೇ ನಿರ್ಬಂಧಗಳು ನನ್ನನ್ನು ಬಂಧಿಸುವುದಿಲ್ಲ. ದೇಶದಲ್ಲಿ ಗೋಹತ್ಯೆ ಕೊನೆಯಾದಾಗ ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡುತ್ತೇನೆ, ಉತ್ಸಾಹದಿಂದ ಆಚರಿಸುತ್ತೇನೆ ಎಂದು ಅವರು ತಿಳಿಸಿದರು. 

ಶೃಂಗೇರಿ ಶಾರದಾ ಪೀಠ ಸ್ಪಷ್ಟನೆ: ಈ ಮಧ್ಯೆ ಕೆಲ ಧರ್ಮದ್ವೇಷಿಗಳು ಸಾಮಾಜಿಕ ಜಾಲತಾಣದಲ್ಲಿ ಶೃಂಗೇರಿ ಶಾರದಾಪೀಠದ ಭಾರತೀತೀರ್ಥಸ್ವಾಮಿಗಳ ಫೋಟೋದ ಜೊತೆಗೆ ಶ್ರೀಗಳು ಪ್ರಾಣಪ್ರತಿಷ್ಠಾ ಕಾರ್ಯಕ್ರಮವನ್ನು ವಿರೋಧಿಸುತ್ತಿದ್ದಾರೆ ಎಂಬ ಅರ್ಥ ಬರುವಂತೆ ಸಂದೇಶವನ್ನು ಹಾಕಿ ಪ್ರಚಾರ ಮಾಡುತ್ತಿದ್ದಾರೆ. ಆದರೆ ಶ್ರೀಗಳು ಆ ರೀತಿಯ ಯಾವುದೇ ಸಂದೇಶ ನೀಡಿಲ್ಲ ಎಂದು ಶೃಂಗೇರಿ ಶಾರದಾ ಪೀಠ ಸ್ಪಷ್ಟನೆ ನೀಡಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *