ಇವನೊಂಥರಾ ಅಕ್ಕದಾಸನಿದ್ದಂಗೆ…..! (time pass)

ಕೆಲವು ಶಬ್ಧಗಳ ಉತ್ಫತ್ತಿ ವಿಶೇಶವಾಗಿರುತ್ತದೆ. ಕನ್ನಡದ ಹರಸಾಹಸ ಶಬ್ಧ ಹರಕ್ಯುಲಿಯನ್‌ ಟಾಸ್ಕ್‌ ಹರಕ್ಯುಲಸ್‌ ನಿಂದ ಬಂದ ಬಗ್ಗೆ ಹಿಂದೆ ಬರೆದಿದ್ದೆ.

ಈಗ ಅಕ್ಕದಾಸನ ಬಗ್ಗೆ ತಿಳಿಯೋಣ.

ಶಿರಸಿಯಲ್ಲಿ ಸಂಪ್ರದಾಯಸ್ಥ ಹವ್ಯಕ ಮನೆತನದಲ್ಲಿ ಗಣಪತಿ ಭಟ್ಟ ಎಂಬುವವನೊಬ್ಬನಿದ್ದ ಅವರ ಮನೆತನದ ಹೆಸರು ಅಕ್ಕದಾಸ ಅಂದರೆ ಅಕ್ಕದಾಸರ ಮನೆತನ.

ಈ ಅಕ್ಕದಾಸ ಗಣಪತಿ ಭಟ್ಟ ಕರ್ಮಠ ಹವ್ಯಕ ಆಚರಣೆಗಳ ವಿರುದ್ಧ ಸಿಡಿದೆದ್ದು ಸರಿಸುಮಾರು ಒಂದು ಶತಮಾನದ ಹಿಂದೆ ಸುಧಾರಣಾ ಚಳವಳಿ ಪ್ರಾರಂಭಿಸಿದ್ದಾತ. ವಿದವಾ ವಿವಾಹದ ಮೂಲಕ ಕ್ರಾಂತಿ ಮಾಡಿದ್ದ ಅಕ್ಕದಾಸ ಭಟ್ಟ ಲೌಕಿಕರ ಲೆಕ್ಕದಲ್ಲಿ ಲೇವಡಿಗೆ ಬಳಸುವ ಹೆಸರಾಗಿದ್ದ!

ಇವರ ನೊಬೆಲ್‌ ಕೆಲಸದ ಬಗ್ಗೆ ಕೆಲವರಿಗೆ ಒಪ್ಪಿಗೆ, ಮೆಚ್ಚುಗೆ ಇದ್ದರೆ ಬಹುಸಂಖ್ಯಾತ ಸಂಪ್ರದಾಯಸ್ಥರು ಇವರ ಕೆಲಸದ ವಿರುದ್ಧವಿದ್ದರು. ಇವರ ಸುಧಾರಣಾ ಕ್ರಮದಿಂದ ಸಮಾಜದಲ್ಲಿ ಪರಿವರ್ತನರಯಾದದ್ದಂತೂ ಸತ್ಯ

ಇಂಥ ಸುಧಾರಣಾ ವಾದಿ ಹೋರಾಟಗಾರನನ್ನು ಬಹುಸಂಖ್ಯಾತರು ಗೇಲಿ ಮಾಡುತಿದ್ದುದು ಇವನೊಬ್ಬ ಅಕ್ಕದಾಸನ ಥರದವನು ಅಥವಾ ಇವಳೊಂಥರಾ ಅಕ್ಕದಾಸನ ಥರದವಳು ಎಂದು.

ಈ ಅಕ್ಕದಾಸ ಮತ್ತು ಅಕ್ಕದಾಸನ ಥರದೋನು ಎನ್ನುವುದು ಈಗ ಅಷ್ಟು ಬಳಕೆಯಲ್ಲಿಲ್ಲ.

ಇತ್ತೀಚೆಗೆ ಸಾಗರದ ಕಲಗಾರಿನ ಲಕ್ಷ್ಮೀ ನಾರಾಯಣ ಶರ್ಮ ಈ ಬಗ್ಗೆ ಪುಸ್ತಕವೊಂದನ್ನು ಬರೆದಿದ್ದಾರೆ. ಈ ಪುಸ್ತಕವನ್ನು ಪ್ರಕಟಿಸಿದವರು ಬೆಂಗಳೂರಿನ ಬಹುರೂಪಿ ಪ್ರಕಾಶನ. ಈ ಪುಸ್ತಕದ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಶಿರಸಿ ಮುಂಡಗೆಸರದಲ್ಲಿ ನಡೆಯಿತು. ಯಥಾಪ್ರಕಾರ ಈ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಸೇರಿದವರು ಬಹುತೇಕ ಅದೇ ಕರ್ಮಠ ವ್ಯವಹಾರಿಗಳು ಎನ್ನುವುದು ಈ ಕಾರ್ಯಕ್ರಮದ ಬಗ್ಗೆ ಇದ್ದ ಟೀಕೆ. ಅದೇನೆ ಇರಲಿ, ಹಿರಿಯ ಸಾಹಿತಿ, ಸಂಶೋಧಕ ಮಧುರಾವ್‌ ಮಡೇನೂರು ಈ ಪುಸ್ತಕಕ್ಕೆ ಮುನ್ನುಡಿ ಬರೆದು ಆ ಬಗ್ಗೆ ಆಸಕ್ತಿಕಾರಕ ಕೆಲವು ವಿಚಾರಗಳನ್ನು ತಿಳಿಸಿದರು. ಇಂಥ ಚರ್ಚೆಗಳ ಮೂಲಕ ಕೆಲವು ಒಳನೋಟಗಳನ್ನು ಕೊಡುವ ಮಧುರಾವ್‌ ಹಳೆಪೈಕ ದೀವರ ಬಗ್ಗೆ ಮಾಹಿತಿಪೂರ್ಣ ಪುಸ್ತಕವೊಂದನ್ನು ಬರೆದಿದ್ದಾರೆ. ಅಕ್ಕದಾಸನನ್ನು ನೆನಪಿಸಿದ, ಬರೆದ, ಪ್ರಕಟಿಸಿದ ಮಧು ರಾವ್‌, ಶರ್ಮ, ಜಿ.ಎನ್.ಮೋಹನ್‌ ಈ ಕಾಲಕ್ಕೆ ಒಂದು ಶತಮಾನದ ಹಿಂದಿನ ಸುಧಾರಣಾವಾದಿ ಚಳವಳಿಯೊಂದನ್ನು ನೆನಪಿಸುವ ಮೂಲಕ ಸಾರಸ್ವತ ಲೋಕಕ್ಕೆ, ಕನ್ನಡ ಸಾಹಿತ್ಯಕ್ಕೆ ಅಪೂರ್ವ ಎನ್ನುಬಹುದಾದ ಕೊಡುಗೆ ನೀಡಿದ್ದಾರೆ ಎನ್ನುವುದು ನನ್ನ ಭಾವನೆ. …ಇಂತಿ ನಿಮ್ಮ ಕನ್ನೇಶ್….‌ ಕೋಲಶಿರ್ಸಿ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *