ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ಆಯುಷ್ಮಾನ್‌ ಭಾರತ್‌ ವಿಸ್ತರಣೆ!

ಕೇಂದ್ರ ಬಜೆಟ್

ಕೇಂದ್ರ ಬಜೆಟ್ 2024-25: ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ಆಯುಷ್ಮಾನ್‌ ಭಾರತ್‌ ವಿಸ್ತರಣೆ!

ಆಯುಷ್ಮಾನ್ ಭಾರತ್ ಅಡಿಯಲ್ಲಿ ಆರೋಗ್ಯ ರಕ್ಷಣೆಯನ್ನು ಎಲ್ಲಾ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ವಿಸ್ತರಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಹೇಳಿದ್ದಾರೆ.

File photo

ನವದೆಹಲಿ: ಆಯುಷ್ಮಾನ್ ಭಾರತ್ ಅಡಿಯಲ್ಲಿ ಆರೋಗ್ಯ ರಕ್ಷಣೆಯನ್ನು ಎಲ್ಲಾ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ವಿಸ್ತರಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಹೇಳಿದ್ದಾರೆ.

ಪ್ರಸಕ್ತ ಸಾಲಿನ ಮಧ್ಯಂತರ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಈ ಅಂಶವನ್ನು ಪ್ರಸ್ತಾಪಿಸಿದರು.

ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ-ಜನ ಆರೋಗ್ಯ ಯೋಜನೆ ವಿಶ್ವದಲ್ಲೇ ಅತಿ ದೊಡ್ಡ ಸಾರ್ವಜನಿಕ ನಿಧಿಯ ಆರೋಗ್ಯ ವಿಮಾ ಯೋಜನೆಯಾಗಿದ್ದು, ದ್ವಿತೀಯ ಮತ್ತು ತೃತೀಯ ಆರೈಕೆಗಾಗಿ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 5 ಲಕ್ಷ ರೂ.ಗಳನ್ನು ಒದಗಿಸುತ್ತದೆ. ಕಳೆದ ವರ್ಷ ಡಿಸೆಂಬರ್ 27ರವರೆಗೆ 12 ಕೋಟಿ ಕುಟುಂಬಗಳಿಗೆ ಸೇರಿದ 55 ಕೋಟಿ ಜನ ಈ ಯೋಜನೆಗೆ ಒಳಪಟ್ಟಿದ್ದರು.

ಎಂಎಸ್‌ಎಂಇಗಳಿಗೆ ಸಮರ್ಪಕವಾಗಿ ಮತ್ತು ಸಮಯೋಚಿತ ಹಣಕಾಸು ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ. ಭಾರತೀಯ ಆರ್ಥಿಕತೆ ಕಳೆದ ಒಂದು ದಶಕದಲ್ಲಿ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ. 2014ರಿಂದ ಭಾರತ ದೈತ್ಯ ಸವಾಲುಗಳನ್ನು ಎದುರಿಸಿತ್ತು. ಆದರೆ ,ಸರ್ಕಾರ ಈ ಅಡೆತಡೆಗಳನ್ನು ನಿವಾರಿಸಿದೆ. ರಚನಾತ್ಮಕ ಸುಧಾರಣೆಗಳನ್ನು ಪ್ರಾರಂಭಿಸಿದೆ. ಜನಪರ ಸುಧಾರಣೆಗಳಿಗೆ ಒತ್ತು ನೀಡಲಾಗಿದೆ. ಉದ್ಯೋಗ ಸೃಷ್ಟಿ ಮತ್ತು ಉದ್ಯಮಶೀಲತೆಗಳನ್ನು ಉತ್ತೇಜಿಸಲಾಗಿದೆ. ಅಭಿವೃದ್ಧಿ ಉಪಕ್ರಮಗಳು ಬೃಹತ್ ಪ್ರಮಾಣದಲ್ಲಿ ಜನರನ್ನು ತಲುಪಿವೆ ಎಂದು ಹೇಳಿದರು.

ಅಂತರ್ಗತ ಅಭಿವೃದ್ಧಿ ಉಪಕ್ರಮಗಳು ವಸತಿ, ನೀರು, ವಿದ್ಯುತ್, ಅಡುಗೆ ಅನಿಲ ಮತ್ತು ಆರ್ಥಿಕ ಸೇರ್ಪಡೆಯಂತಹ ಅಗತ್ಯ ಸೇವೆಗಳೊಂದಿಗೆ ಮನೆಗಳು ಮತ್ತು ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡಿವೆ. 80 ಕೋಟಿ ಜನರಿಗೆ ಉಚಿತ ಪಡಿತರವನ್ನು ಒದಗಿಸುವ ಮೂಲಕ ಆಹಾರ ಭದ್ರತೆಗೆ ಸಂಬಂಧಿಸಿದ ಕಳವಳವನ್ನು ನಿವಾರಿಸಲಾಗಿದೆ ಎಂದು ತಿಳಿಸಿದರು.

ನಮ್ಮ ರಾಷ್ಟ್ರದ ಬೆನ್ನೆಲುಬಾಗಿರುವ ರೈತರಿಗೆ ಬೆಂಬಲವನ್ನು ಖಾತ್ರಿಪಡಿಸುವ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು (MSP) ಕಾಲಕಾಲಕ್ಕೆ ಹೆಚ್ಚಿಸಲಾಗಿದೆ. ಮೂಲಭೂತ ಅವಶ್ಯಕತೆಗಳ ಪೂರೈಕೆಯು ಗ್ರಾಮೀಣ ಪ್ರದೇಶಗಳಲ್ಲಿ ನೈಜ ಆದಾಯದಲ್ಲಿ ಗಮನಾರ್ಹ ಹೆಚ್ಚಳಕ್ಕೆ ಕಾರಣವಾಗಿದೆ. ಸಮಾಜದ ಎಲ್ಲಾ ಜಾತಿಗಳು ಮತ್ತು ಸ್ತರಗಳನ್ನು ಒಳಗೊಳ್ಳುವ ಸಮಗ್ರ, ಅಂತರ್ಗತ ಮತ್ತು ವ್ಯಾಪಕ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದರು.

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಮಹತ್ವಾಕಾಂಕ್ಷೆಯ ಕಡೆಗೆ ಕೆಲಸ ಮಾಡುವುದು ನಮ್ಮ ಗುರಿ. ನಮ್ಮ ಪ್ರಯತ್ನಗಳು ಸಮಾಜದ ಪ್ರತಿಯೊಂದು ವಿಭಾಗವನ್ನೂ ಒಳಗೊಳ್ಳುವ ಸಮಗ್ರ ಪ್ರಗತಿಯತ್ತ ನಿರ್ದೇಶಿಸಲ್ಪಟ್ಟಿವೆ ಎಂದು ತಿಳಿಸಿದರು. (ಕಪ್ರಡಾ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *