ರೈತ-ಕಾರ್ಮಿಕ ವಿರೋಧಿ ಬಜೆಟ್ ಖಂಡಿಸಿ ಫೆ.೧೬ ರಂದು ಪ್ರತಿಭಟನೆಗೆ ರೈತ ಸಂಘ ಕರೆ

ದುಡಿಮೆಗಾರರನ್ನು ಹಿಂಡಿ ,ಕಾರ್ಪೊರೇಟ್ ತಿಜೋರಿ ತುಂಬಿಸುವ ಸತತ 10 ನೇ ರೈತ-ಕಾರ್ಮಿಕ ವಿರೋಧಿ ಬಜೆಟ್ ಖಂಡಿಸಿ ಪ್ರತಿಭಟನೆಗೆ ರೈತ ಸಂಘ ಕರೆ

ಕೃಷಿ ರಂಗ ಸೇರಿದಂತೆ ದೇಶದ ಎಲ್ಲಾ ಕ್ಷೇತ್ರಗಳನ್ನು ಕಾರ್ಪೊರೇಟ್ ವಲಯಕ್ಕೆ ಹಸ್ತಾಂತರಿಸುವ ,ವಿವೇಚನಾ ರಹಿತ ಖಾಸಗೀಕರಣಕ್ಕೆ ಒಳಪಡಿಸುವ ,ನಿರುದ್ಯೋಗ, ಬಡತನ ತೀವ್ರಗೊಳಿಸುವ ,ರೈತರನ್ನು ದಿವಾಳಿ ಮಾಡುವ ಒಟ್ಟಾರೆಯಾಗಿ ದುಡಿಮೆಗಾರರನ್ನು ಹಿಂಡಿ ಕಾರ್ಪೊರೇಟ್ ತಿಜೋರಿ ತುಂಬಿಸುವ ನರೇಂದ್ರ ಮೋದಿ ನೇತೃತ್ವದ 10 ನೇ  ಕೇಂದ್ರ ಬಜೆಟ್ ಖಂಡಿಸಿ ಫೆಬ್ರವರಿ 16 ರಂದು ಪ್ರತಿಭಟಿಸಲು ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯದ ರೈತ, ಕಾರ್ಮಿಕ, ದಲಿತ,ಮಹಿಳಾ, ವಿದ್ಯಾರ್ಥಿ ಯುವಜನ ಸಮೂಹಗಳು ಜಂಟಿಯಾಗಿ ಹೋರಾಟ ನಡೆಸಲು ಕರೆ ನೀಡಿವೆ.

ಸತತ ಹತ್ತು ವರ್ಷಗಳ ಕಾರ್ಪೊರೇಟ್ ಪರವಾದ ನೀತಿಗಳಿಂದ ಹಾಗೂ ಕೋವಿಡ್ ಜಾಗತಿಕ ಪಿಡುಗು ,ಆರ್ಥಿಕ ಬಿಕ್ಕಟ್ಟುಗಳಿಂದ ನೊಂದು ಬಸವಳಿದಿರುವ ಜನರಿಗೆ ಯಾವುದೇ ಪರಿಹಾರ ಒದಗಿಸಲು ಈ ಬಜೆಟ್ ವಿಫಲವಾಗಿದೆ. ಈಗಾಗಲೇ ಹಿಂದೆಂದೂ ಕಾಣದ ನಿರುದ್ಯೋಗ, ಬೆಲೆ ಏರಿಕೆ -ಹಣದುಬ್ಬರ ದಿಂದ ಜೀವನದ ಕನಿಷ್ಠ ಅಗತ್ಯಗಳನ್ನು ಪೂರೈಸಲು ಹೆಣಗಾಡುತ್ತಿರುವ ಜನರಲ್ಲಿ ಆತ್ಮ ವಿಶ್ವಾಸ ತುಂಬುವ ಬದಲು ವಾಸ್ತವಿಕ ಜನರ ಬದುಕನ್ನು ಕ್ರೂರ ತಮಾಷೆಗೆ ಒಳಪಡಿಸಿದೆ. ಇಂತಹ ಜನ ವಿರೋಧಿ, ರೈತ ,ಕಾರ್ಮಿಕ ವಿರೋಧಿ ಬಜೆಟ್ ಅನ್ನು ವಿರೋಧಿಸಿ ಪೆಬ್ರವರಿ 16 ರಂದು ರಾಜ್ಯದಾದ್ಯಂತ ಬೃಹತ್ ಪ್ರತಿಭಟನೆಗೆ  ಕರೆನಿಡಲಾಗಿದ್ದು ಜಿಲ್ಲೆಯ ಲ್ಲು ಯಶಸ್ವಿಯಾಗಿ ಹೋರಾಟ ಸಂಘಟಿಸಲು ತೀರ್ಮಾನಿಸಲಾಗಿದೆ.

ನಕಲಿ ಕಥನ , ಸುಳ್ಳುಗಳ  ಹಾಗೂ ದಾರಿ ತಪ್ಪಿಸುವ ಅಂಕಿ ಅಂಶಗಳ ಬಜೆಟ್ ಭಾಷಣದಲ್ಲಿ ಸತತವಾಗಿ ಹದಗೆಡುತ್ತಿರುವ ಆರ್ಥಿಕ ಪರಿಸ್ಥಿತಿಯ ವಾಸ್ತವವನ್ನು ಮರೆ ಮಾಚಲಾಗಿದೆ.  ಕಳೆದ ಐದು ವರ್ಷಗಳಲ್ಲೇ 2023-24 ರ ವರ್ಷದಲ್ಲಿ ಕೃಷಿ ರಂಗಕ್ಕೆ ಅತಿ ಕಡಿಮೆ ವೆಚ್ಚ ಮಾಡಲಾಗಿದೆ.ಈ ಹಿಂದಿನ ವರ್ಷಕ್ಕೆ ಮಾಡಲಾದ ವೆಚ್ಚದಲ್ಲಿ ಶೇ 22.3 ರಷ್ಟು ಇಳಿಕೆ ಯಾಗಿದ್ದನ್ನು 2024-25 ಕ್ಕೂ ಮತ್ತಷ್ಟು ವೆಚ್ಚ ಇಳಿಕೆಯ ಕ್ರಮವನ್ನೇ ಮುಂದುವರೆಸಲಾಗಿದೆ. ಕೃಷಿ ಲಾಗುವಾಡುಗಳ ಬೆಲೆ ಏರಿಕೆಗೆ ಅವಕಾಶ ನೀಡುವಂತಹ ಪ್ರಸ್ತಾಪಗಳ ಮೂಲಕ ರೈತಾಪಿ ಕೃಷಿಯನ್ನು ಮತ್ತಷ್ಟು ದುಬಾರಿಗೊಳಿಸಿ ರೈತರನ್ನು ದಿವಾಳಿ ಮಾಡುವ ಕ್ರಮಗಳನ್ನೇ ಈ ಬಜೆಟ್ ನಲ್ಲೂ ಮುಂದುವರೆಸಲಾಗಿದೆ. ಚುನಾವಣಾ ವರ್ಷದಲ್ಲೂ ಕೂಡ ಕೃಷಿಗಾಗಲಿ ,ರೈತರಿಗಾಗಲಿ ಯಾವುದೇ ನೆರವು ನೀಡಿಲ್ಲ ,ಅದೇ ರೀತಿ ಬೆಲೆ ಏರಿಕೆಯಿಂದ ನೊಂದ ಜನಸಾಮಾನ್ಯರಿಗೂ ಯಾವುದೇ ಪರಿಹಾರ ಒದಗಿಸಿಲ್ಲ  ಬರ ಪರಿಹಾರಕ್ಕೂ ಒತ್ತು ನೀಡಿಲ್ಲ. ಎಂದು ಕರ್ನಾಟಕ ಪ್ರಾಂತ ರೈತ ಸಂಘ ಆಕ್ರೋಶ ವ್ಯಕ್ತಪಡಿಸುತ್ತದೆ.

ಕಳೆದ ಹತ್ತು ವರ್ಷಗಳಲ್ಲಿ ಸುಮಾರು 4 ಲಕ್ಷ ಕೋಟಿ ರೂ ಗೂ ಹೆಚ್ಚುಹಣಕ್ಕೆ ಸಾರ್ವಜನಿಕ ಉದ್ದಿಮೆಗಳನ್ನು ಮಾರಾಟ ಮಾಡಿ ದೇಶ ಹಾಗೂ ವಿದೇಶ ಕಾರ್ಪೊರೇಟ್ ಕಂಪನಿಗಳಿಗೆ ಭಾರತವನ್ನೇ ಇಡಿಯಾಗಿ ಮಾರಾಟ ಮಾಡುವ ಈ ಹಿಂದಿನ ವಿವೇಚನಾ ಹೀನ ಖಾಸಗೀಕರಣ ಪ್ರಕ್ರಿಯೆಯನ್ನು ಈ ಬಜೆಟ್ ನಲ್ಲೂ ಕೂಡ ಮುಂದುವರೆಸಿದ್ದು ಸುಮಾರು ಐವತ್ತು ಸಾವಿರ ಕೋಟಿ ರೂ ಗುರಿಯನ್ನು ಇಟ್ಟುಕೊಳ್ಳಲಾಗಿದೆ. ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ವಲಯದ ಖಾಸಗೀಕರಣಕ್ಕೆ ಉತ್ತೇಜನ ನೀಡಲು ,ಖಾಸಗಿ ಕಂಪನಿಗಳಿಗೆ ಸಾಲ ಒದಗಿಸುವ ಒಂದು ಲಕ್ಷ ಕೋಟಿ ಮೀಸಲು ನಿಧಿಯ ಪ್ರಸ್ತಾಪವು ಅತ್ಯಂತ ಆಯಕಟ್ಟಿನ ಮತ್ತು ನಮ್ಮ ದೇಶದ ಸ್ವಾವಲಂಬನೆ ಹಾಗೂ ರಕ್ಷಣಾ ವಿಷಯದಲ್ಲಿ ಮಾಡಿಕೊಂಡಿರುವ ಗಂಭೀರ ರಾಜಿಯಾಗಿದೆ. ಭಾರತೀಯರೆಲ್ಲರಿಗೂ ರಾಮ ಭಜನೆಯ ಹೆಸರಿನಲ್ಲಿ ಕಣ್ಣು ಮುಚ್ವಿಸಿ ,ದೇಶದ ಆರ್ಥಿಕತೆ ಹಾಗೂ ರಕ್ಷಣಾ ವ್ಯವಸ್ಥೆಯನ್ನು ಸಂಪೂರ್ಣ ವಿದೇಶಿ ಕಾರ್ಪೊರೇಟ್ ಗಳಿಗೆ ತೆರೆಯಲಾಗಿದೆ ಎಂದು  ಕರ್ನಾಟಕ ಪ್ರಾಂತ ರೈತ ಸಂಘ ತೀವ್ರವಾಗಿ ಖಂಡಿಸಿದೆ. 

ಕಾರ್ಪೊರೇಟ್ ಹಿಂದುತ್ವ ಆಳ್ವಿಕೆಯ ಈ ಜನ ವಿರೋಧಿ ಬಜೆಟ್ ಮುಂದೆ ಬರಲಿರುವ ಪೂರ್ಣ ಪ್ರಮಾಣದ ಬಜೆಟ್ ನ ಸ್ವರೂಪದ ಪರಿಚಯ ಮಾಡಿಕೊಟ್ಟಿದ್ದು ,ಸ್ವತಂತ್ರ ಭಾರತದ ಅತಿ ಹೆಚ್ಚು ಕಾರ್ಪೊರೇಟ್  ಪರ ಸರ್ಕಾರಕ್ಕೆ  ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶಾಂತಾರಾಮ ನಾಯಕ ಮತ್ತು ಕಾರ್ಯದರ್ಶಿ ಶ್ಯಾಮನಾಥ ನಾಯ್ಕ ಎಚ್ಚರಿಸಿದ್ದಾರೆ.

*ಶಾಂತಾರಾಮ ನಾಯಕ*

ಅಧ್ಯಕ್ಷರು, ಜಿಲ್ಲಾ ಸಮಿತಿ

*ಶ್ಯಾಮನಾಥ ನಾಯ್ಕ*

ಕಾರ್ಯದರ್ಶಿ *ಕರ್ನಾಟಕ ಪ್ರಾಂತ ರೈತ ಸಂಘ, ಉತ್ತರ ಕನ್ನಡ ಜಿಲ್ಲಾ ಸಮಿತಿ*

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

teachers elc results… ಶಿಕ್ಷಕರ ಸಂಘ: ಮತ್ತೆ ಗೆದ್ದ ಹಳೆ ತಂಡ

ಸಿದ್ದಾಪುರ, ಇಲ್ಲಿಯ ಶಿಕ್ಷಕರ (ಕ.ರಾ.ಪ್ರಾ.ಶಿ.ಸಂಘ ದ ಸಿದ್ಧಾಪುರ ತಾಲೂಕಾ ಶಾಖೆ) ಸಂಘಕ್ಕೆ ನಡೆದ ಚುನಾವಣೆಯಲ್ಲಿ ನಿಕಟಪೂರ್ವ ಸಂಘದ ನಿರ್ಧೇಶಕರಲ್ಲಿ ಹೆಚ್ಚಿನವರನ್ನು ಸೋಲಿಸಿ ಹಳೆ ತಂಡ...

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

Latest Posts

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ ಕುಡಿಯಾಗಿದ್ದ ರಮಾನಂದ ನಾಯಕ ಸಾಹಿತ್ಯ-ಸಾಂಸ್ಕೃತಿಕ ಮನಸ್ಸಿನ ತೂಕದ ವ್ಯಕ್ತಿಯಾಗಿದ್ದರು. ವಯೋಸಹಜ ಅನಾರೋಗ್ಯದಿಂದ ಇಂದು ಬೆಂಗಳೂರಿನಲ್ಲಿ ನಿಧನರಾದ ಅವರ ಶವ ಸಂಸ್ಕಾರ ಅವರ ಹುಟ್ಟೂರು ಹಿಚ್ಕಡದಲ್ಲಿ ಶುಕ್ರವಾರ ನಡೆಯಲಿದೆ. ಹಿರಿಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *