ಮಾಜಿ ಪತ್ರಕರ್ತನ ಮತಾಂಧತೆ! ಸುಳ್ಳೇ ಇವರ ದೇವರು?

ಸುಳ್ಳು ಹರಡಲು ಕಾರಣಕರ್ತನಾದ ಮಾಜಿ ಪತ್ರಕರ್ತ ಹೊಟ್ಟೆಗೆ ತಿನ್ನುವುದು ಏನನ್ನ ಎಂಬುದನ್ನು ತಿಳಿಸಲಿ: ಕಾಂಗ್ರೆಸ್

ಈತ ಮುಖ್ಯಸ್ಥನಾಗಿದ್ದ ಮಾಧ್ಯಮ ಸಂಸ್ಥೆಯೂ ಆತ ಹೇಳಿದ ಸುಳ್ಳನ್ನೇ ಪ್ರಸಾರ ಮಾಡಿದೆ ಎಂದರೆ ಆತ ನಿಜಕ್ಕೂ ಪತ್ರಕರ್ತನಾಗಿ ಮಾಜಿಯಾಗಿದ್ದಾನಾ ಎಂಬ ಅನುಮಾನ ಮೂಡುತ್ತಿದೆ! ಎಂದು ಕಾಂಗ್ರೆಸ್ ತಪರಾಕಿ ಹಾಕಿದೆ.

Representational image

ಬೆಂಗಳೂರು: ಎಸ್​ಎಸ್​ಎಲ್​​ಸಿ ಪೂರ್ವಸಿದ್ಧತಾ ಪರೀಕ್ಷೆ ಸಹ ರಾಜಕೀಯ ವಿವಾದದ ವಸ್ತುವಾಗಿ ಪರಿಣಮಿಸಿದೆ.  ಎಸ್​​ಎಸ್​​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮುಸ್ಲಿಂ ತುಷ್ಟೀಕರಣ  ಮಾಡಲಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಬಿಜೆಪಿ ವಿರುದ್ಧ ಹರಿಹಾಯ್ದಿದೆ.

ಈ ಸಂಬಂಧ ತನ್ನ ಎಕ್ಸ್  ಖಾತೆಯಲ್ಲಿ ಬರೆದುಕೊಂಡಿರುವ ಕಾಂಗ್ರೆಸ್ , ಮಾರ್ಚ್ ಒಂದನೇ ತಾರೀಖಿನಂದು ಪಿಯುಸಿ ಪರೀಕ್ಷೆ ಆರಂಭವಾಗುತ್ತಿರುವ ಕಾರಣ ಅ ದಿನದ SSLC ಪರೀಕ್ಷೆಯನ್ನು ಮಧ್ಯಾಹ್ನ ನಡೆಸಲಾಗುತ್ತಿದೆ. ಮಾರನೇ ದಿನ ಶನಿವಾರ ಪಿಯುಸಿ ಪರೀಕ್ಷೆ ಇಲ್ಲದ ಕಾರಣ SSLC ಪರೀಕ್ಷೆ ಬೆಳ್ಳಿಗೆಯೇ ಆರಂಭವಾಗುತ್ತದೆ, ಪರೀಕ್ಷಾ ಕೇಂದ್ರಗಳ ಕೊರತೆ ಹಾಗೂ ಗೊಂದಲ ಉಂಟಾಗುವುದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ.

ಇದರಲ್ಲಿ ಸುಳ್ಳು ಅಪಪ್ರಚಾರದ ಮೂಲಕ ಪ್ರಚೋದನೆಗೆ ಬಳಸಿಕೊಳ್ಳಲು ಮುಂದಾಗಿರುವ  ರಾಜ್ಯ ಬಿಜೆಪಿಗೆ ಗೆ ಕನಿಷ್ಠ ಮರ್ಯಾದೆ ಇಲ್ಲ. ನಮಾಜ್ ಮಾಡುವುದಕ್ಕಾಗಿ ಶುಕ್ರವಾರ SSLC ಪರೀಕ್ಷೆಯನ್ನು ಮಧ್ಯಾಹ್ನಕ್ಕೆ ಏರ್ಪಡಿಸಲಾಗಿದೆ ಎನ್ನುವ ಬಿಜೆಪಿ ಗಾಂಪರು ಅದೇ ದಿನ ಬೆಳಿಗ್ಗೆ PUC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ನಮಾಜ್ ಮಾಡುವ ಅಗತ್ಯವಿಲ್ಲವೇ ಎಂಬುದನ್ನು ಉತ್ತರಿಸಲಿ!

ಈ ಸುಳ್ಳು ಹರಡಲು ಕಾರಣಕರ್ತನಾದ ಮಾಜಿ ಪತ್ರಕರ್ತ!?, ಹಾಲಿ ಬಿಜೆಪಿ ವಕ್ತಾರ  ಹರಿಪ್ರಕಾಶ್ ಕೋಣೆಮನೆ ಹೊಟ್ಟೆಗೆ ತಿನ್ನುವುದು ಏನನ್ನ ಎಂಬುದನ್ನು ತಿಳಿಸಲಿ. ಈತ ಮುಖ್ಯಸ್ಥನಾಗಿದ್ದ ಮಾಧ್ಯಮ ಸಂಸ್ಥೆಯೂ ಆತ ಹೇಳಿದ ಸುಳ್ಳನ್ನೇ ಪ್ರಸಾರ ಮಾಡಿದೆ ಎಂದರೆ ಆತ ನಿಜಕ್ಕೂ ಪತ್ರಕರ್ತನಾಗಿ ಮಾಜಿಯಾಗಿದ್ದಾನಾ ಎಂಬ ಅನುಮಾನ ಮೂಡುತ್ತಿದೆ! ಎಂದು ಕಾಂಗ್ರೆಸ್ ತಪರಾಕಿ ಹಾಕಿದೆ.

ತುಷ್ಟೀಕರಣ ರಾಜಕಾರಣದ ಪಿತಾಮಹ ಸಿಎಂ ಸಿದ್ದರಾಮಯ್ಯ ಅವರು ಪರೀಕ್ಷಾ ವೇಳಾಪಟ್ಟಿ ಪ್ರಕಟಿಸುವ ಸಂದರ್ಭದಲ್ಲಿಯೂ ಸಹ ಓಲೈಕೆ ರಾಜಕಾರಣಕ್ಕೆ ಆದ್ಯತೆ ನೀಡಿದ್ದಾರೆ. ಶುಕ್ರವಾರ ನಡೆಯುವ ಪರೀಕ್ಷೆ ಮಧ್ಯಾಹ್ನ 2 ಗಂಟೆ ನಂತರವಂತೆ, ಉಳಿದ ದಿನ ನಡೆಯುವ ಪರೀಕ್ಷೆಗಳು ಬೆಳಿಗ್ಗೆ 10 ಗಂಟೆಗೆ ಆರಂಭವಂತೆ.

ರಾಜ್ಯ ಕಾಂಗ್ರೆಸ್ ಸರ್ಕಾರ  ಕರ್ನಾಟಕ ಆಡಳಿತವನ್ನು ತಾಲಿಬಾನ್ & ಐಸಿಸ್ ಮಾದರಿಯಲ್ಲಿ ಮುನ್ನಡೆಸುತ್ತಿರುವುದು ಅವರ ನಿಲುವುಗಳಿಂದಲೇ ಸಾಬೀತಾಗುತ್ತಿದೆ. ಪರೀಕ್ಷೆ ವಿಚಾರದಲ್ಲೂ ಒಂದು ಸಮುದಾಯಕ್ಕೆ ಇಷ್ಟೊಂದು ಓಲೈಕೆ ಮಾಡುವ ಕಾಂಗ್ರೆಸ್, ಹಿಂದೂ ವಿದ್ಯಾರ್ಥಿಗಳನ್ನು ಈಗ ಎರಡನೇ ದರ್ಜೆಗೆ ಇಳಿಸಿದೆ. ಶಿಕ್ಷಣ ಕ್ಷೇತ್ರದಲ್ಲಿಯೂ ತೂರಿ ಬರುತ್ತಿರುವ ನಿಮ್ಮ ಹೊಲಸು ತುಷ್ಟೀಕರಣಕ್ಕೆ ಕರ್ನಾಟಕದ ಜನತೆ ಅಂತಿಮ ಮೊಳೆ ಹೊಡೆಯುವುದು ನಿಶ್ಚಿತ ಎಂದು ಬಿಜೆಪಿ ಟ್ವೀಟ್ ಮಾಡಿತ್ತು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *