ಕರ್ನಾಟಕ ನಂತರ ಕೇರಳ, ತಮಿಳುನಾಡಿನಿಂದ ದೆಹಲಿಯಲ್ಲಿ ಕೇಂದ್ರದ ವಿರುದ್ಧ ಪ್ರತಿಭಟನೆ

ತೆರಿಗೆ ಹಂಚಿಕೆ ತಾರತಮ್ಯ: ಕರ್ನಾಟಕ ನಂತರ ಕೇರಳ, ತಮಿಳುನಾಡಿನಿಂದ ದೆಹಲಿಯಲ್ಲಿ ಕೇಂದ್ರದ ವಿರುದ್ಧ ಪ್ರತಿಭಟನೆ

ತಮ್ಮ ರಾಜ್ಯಗಳಿಗೆ ತೆರಿಗೆ ಹಣ ಹಂಚಿಕೆಯಲ್ಲಿ ನಿರ್ಲಕ್ಷ್ಯ ಮತ್ತು ತಾರತಮ್ಯದ ವಿರುದ್ಧ ಕರ್ನಾಟಕದ ನಂತರ ಕೇರಳ ಹಾಗೂ ತಮಿಳುನಾಡು ಸರ್ಕಾರಗಳು ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ಗುರುವಾರ ದೆಹಲಿಯಲ್ಲಿ ಪ್ರತ್ಯೇಕ…

Sabarimala won't be allowed to turn into Ayodhya: Pinarayi Vijayan

ತಿರುವನಂತಪುರಂ/ಚೆನ್ನೈ: ತಮ್ಮ ರಾಜ್ಯಗಳಿಗೆ ತೆರಿಗೆ ಹಣ ಹಂಚಿಕೆಯಲ್ಲಿ ನಿರ್ಲಕ್ಷ್ಯ ಮತ್ತು ತಾರತಮ್ಯದ ವಿರುದ್ಧ ಕರ್ನಾಟಕದ ನಂತರ ಕೇರಳ ಹಾಗೂ ತಮಿಳುನಾಡು ಸರ್ಕಾರಗಳು ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ಗುರುವಾರ ದೆಹಲಿಯಲ್ಲಿ ಪ್ರತ್ಯೇಕ ಪ್ರತಿಭಟನೆ ನಡೆಸಲಿವೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ಎಲ್‌ಡಿಎಫ್‌ನ ಪ್ರತಿಭಟನೆಗೆ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಬೆಂಬಲ ನೀಡಿದ್ದಾರೆ.

ಗುರುವಾರ ಬೆಳಗ್ಗೆ 11 ಗಂಟೆಗೆ ಆರಂಭವಾಗಲಿರುವ ಈ ಪ್ರತಿಭಟನೆಯಲ್ಲಿ ಎಡರಂಗದ ಸಚಿವರು, ಶಾಸಕರು, ಸಂಸದರು ಭಾಗವಹಿಸಲಿದ್ದಾರೆ.

ಕೇಂದ್ರದ ತಾರತಮ್ಯದ ಪರಿಣಾಮ ರಾಜ್ಯ ಆರ್ಥಿಕವಾಗಿ ಮುಗ್ಗಟ್ಟು ಅನುಭವಿಸುತ್ತಿದ್ದು, ಅನಿವಾರ್ಯವಾಗಿ ಪ್ರತಿಭಟನೆ ಮಾಡಬೇಕಾಗಿದೆ. ಕೇಂದ್ರ ಸರ್ಕಾರದ ಕ್ರಮಗಳು ಸಹಕಾರಿ ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬುಧವಾರ ಆರೋಪಿಸಿದ್ದರು.

2024-25ರ ಮಧ್ಯಂತರ ಬಜೆಟ್‌ನಲ್ಲಿ ತಮಿಳುನಾಡಿಗೆ ಅಗತ್ಯ ಹಣ ಹಂಚಿಕೆ ಮಾಡದಿರುವ ಕೇಂದ್ರದ ವಿರುದ್ಧ ಡಿಎಂಕೆಯ ಹಿರಿಯ ನಾಯಕ ಟಿಆರ್ ಬಾಲು ನೇತೃತ್ವದಲ್ಲಿ ಸಂಸತ್ತಿನ ಸಂಕೀರ್ಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಕಪ್ಪು ಬಟ್ಟೆ ಧರಿಸಿ ಪ್ರತಿಭಟಿಸುತ್ತಿದ್ದಾರೆ.

ಇತ್ತೀಚಿನ ಚಂಡಮಾರುತ, ಮಳೆ ಮತ್ತು ಪ್ರವಾಹದಿಂದ ಉಂಟಾದ ಹಾನಿಯನ್ನು ನಿಭಾಯಿಸಲು ತಮಿಳುನಾಡಿಗೆ ಸೂಕ್ತ ಹಣ ನೀಡದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ‘ಪಕ್ಷಪಾತ’ ಎಂದು ಡಿಎಂಕೆ ಆರೋಪಿಸಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *