ತಿಮ್ಮಪ್ಪ ಅಧ್ಯಕ್ಷರಾದದ್ದಕ್ಕೆ ಅಸಮಾಧಾನ, ಮುಖಂಡರ ರಾಜೀನಾಮೆ ಬಿ.ಜೆ.ಪಿ.ಯಲ್ಲಿ ಭುಗಿಲೆದ್ದ ಆಕ್ರೋಶ

ಉತ್ತರ ಕನ್ನಡ ಜಿಲ್ಲಾ ಬಿ.ಜೆ.ಪಿ. ರವಿವಾರ ಘೋಶಿಸಿದ ಪದಾಧಿಕಾರಿಗಳ ಪಟ್ಟಿಗೆ ತೀವ್ರ ವಿರೋಧ ವ್ಯಕ್ತವಾಗಿದ್ದು ಹೊಸದಾಗಿ ನೇಮಕವಾದ ಕೆಲವು ಪ್ರಮುಖರು ತಮ್ಮ ಹುದ್ದೆಗಳಿಗೆ ರಾಜೀನಾಮೆ ಕೊಡುವ ಮೂಲಕ ಜಿಲ್ಲಾ ಬಿ.ಜೆ.ಪಿ.ಯ ಒಡಕು ಬಹಿರಂಗವಾಗಿದೆ.

ಉತ್ತರ ಕನ್ನಡ ಜಿಲ್ಲಾ ಬಿ.ಜೆ.ಪಿ.ಯಲ್ಲಿ ಮೂರಕ್ಕೂ ಹೆಚ್ಚು ಗುಂಪುಗಳಿದ್ದು ಅವುಗಳಲ್ಲಿ ಒಂದಕ್ಕೆ ಅನಂತಕುಮಾರ ಹೆಗಡೆ ಮುಖಂಡರಾದರೆ, ಇನ್ನೊಂದಕ್ಕೆ ವಿಶ್ವೇಶ್ವರ ಹೆಗಡೆ ಮತ್ತೊಂದಕ್ಕೆ ರೂಪಾಲಿ ನಾಯ್ಕ. ಈ ಮೂರು ಬಣಗಳಲ್ಲಿ ತೀವ್ರ ಮೇಲಾಟ ಪ್ರಾರಂಭವಾಗಿದ್ದು ಅನಂತಕುಮಾರ ಹೆಗಡೆಯವರಿಗೆ ಟಿಕೇಟ್‌ ತಪ್ಪಿಸುವ ಪ್ರಯತ್ನದ ಮುಖ್ಯಸ್ಥರಾದ ಕಾಗೇರಿ ವಿಶ್ವೇಶ್ವರ ಹೆಗಡೆ ಬಣ ಸಂಸದ ಅನಂತಕುಮಾರ ಮತ್ತು ರೂಪಾಲಿ ನಾಯ್ಕ ಬಣಕ್ಕೆ ಸವಾಲು ಹಾಕುತಿದ್ದಾರೆ. ಇದೇ ತಿಂಗಳು ಜಿಲ್ಲಾಧ್ಯಕ್ಷರಾಗಿ ನೇಮಕವಾದ ಎನ್. ಎಸ್.‌ ಹೆಗಡೆ ಆಯ್ಕೆ ಬಗ್ಗೆ ಅನಂತಕುಮಾರ ಬಣ ವಿರೋಧ ವ್ಯಕ್ತಪಡಿಸಿದ್ದು ಈಗ ಬಹಿರಂಗ ಗುಟ್ಟು.

ಇದರ ಮುಂದುವರಿಕೆ ಎಂಬಂತೆ ಕೆಲವು ಬ್ಲಾಕ್‌ ಗಳಿಗೆ ತಮ್ಮ ಬೆಂಬಲಿಗರನ್ನು ತಂದು ಕೂರಿಸಿದ ಬಗ್ಗೆ ಕಾಗೇರಿ ಬಣಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ರೂಪಾಲಿ ನಾಯ್ಕ ಮತ್ತು ಅನಂತಕುಮಾರ ಹೆಗಡೆ ಬಣಗಳು ಕಾಗೇರಿ ಬಣಕ್ಕೆ ಸೆಡ್ಡು ಹೊಡೆದು ಪಕ್ಷದ ಸಂಘಟನೆಯ ಏಕಸ್ವಾಮ್ಯತ್ವದ ಬಗ್ಗೆ ತಕರಾರು ಎತ್ತಿದ್ದಾರೆ. ಇದರ ಭಾಗವಾಗಿ ಸಿದ್ಧಾಪುರ ತಾಲೂಕಾ ಮಂಡಳದ ಪ್ರಧಾನ ಕಾರ್ಯದರ್ಶಿ ಸುರೇಶ್‌ ಮೇಸ್ತ, ಜಿಲ್ಲಾ ಆಹ್ವಾನಿತರಾದ ನಾಗರಾಜ್‌ ನಾಯ್ಕ ಬೇಡ್ಕಣಿ ಮತ್ತು ಕೃಷ್ಣಮೂರ್ತಿ ಮಡಿವಾಳ ಕಡಕೇರಿ ತಮ್ಮ ರಾಜೀನಾಮೆ ಪ್ರಕಟಿಸಿದ್ದಾರೆ.

ರವಿವಾರ ಪ್ರಕಟವಾದ ಜಿಲ್ಲಾ ಬಿ.ಜೆ.ಪಿ. ಪಟ್ಟಿಯಲ್ಲಿ ಈಗ ರಾಜೀನಾಮೆ ನೀಡಿರುವ ಮೂವರು ಸ್ಥಾನ ಪಡೆದಿದ್ದರು. ಆದರೆ ಸಿದ್ಧಾಪುರ ತಾಲೂಕಾ ಮಂಡಳಕ್ಕೆ ತಿಮ್ಮಪ್ಪ ಮಡಿವಾಳ ಆಯ್ಕೆ ಬಗ್ಗೆ ಅಸಮಾಧಾನಗೊಂಡಿರುವ ಈ ಪ್ರಮುಖರು ತಿಮ್ಮಪ್ಪ ಮಡಿವಾಳ ವಲಸಿಗರು ಇವರ ನೇತೃತ್ವದಲ್ಲಿ ಪಕ್ಷದ ಪ್ರಾಮಾಣಿಕ ಕಾರ್ಯಕರ್ತರು ಸ್ವಾಭಿಮಾನದಿಂದ ಕೆಲಸ ಮಾಡುವುದು ಕಷ್ಟ. ಪಕ್ಷ ಅರ್ಹರನ್ನು ಕಡೆಗಣಿಸಿ ಈ ಆಯ್ಕೆ ಮಾಡಿರುವುದನ್ನು ಪ್ರಶ್ನಿಸಿ ತಮ್ಮ ರಾಜೀನಾಮೆ ಘೋಶಿಸಿರುವುದಾಗಿ ಅವರ ಮಾಧ್ಯಮ ಹೇಳಿಕೆ ಸ್ಪಷ್ಟಪಡಿಸಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *