ಕಾನಸೂರು ಕೃಷಿ ಸಹಕಾರ ಸಂಘಕ್ಕೆ ರವಿವಾರ ಸುವರ್ಣಸಂಬ್ರಮ

ಸಿದ್ಧಾಪುರ-ಶಿರಸಿ ನಡುವಿನ ಕಾನಸೂರು ಎರಡ್ಮೂರು ತಾಲೂಕುಗಳ ಜನರಿಗೆ ಕೇಂದ್ರಸ್ಥಳ. ಸೊರಬಾ, ಸಿದ್ಧಾಪುರ, ಶಿರಸಿ ಭಾಗದ ಜನರೂ ಕೂಡಾ ಕಾನಸೂರನ್ನು ಒಂದು ಪ್ರಮುಖ ಕೇಂದ್ರ ಎಂದು ಪರಿಗಣಿಸುತ್ತಾರೆ. ಈ ಕಾನಸೂರಿನಲ್ಲಿ ಅಂದಿನ ಹಿರಿಯರು ೧೯೭೦ ರಲ್ಲಿ ಪ್ರಾರಂಭಿಸಿದ ತಾರೆಹಳ್ಳಿ ಕಾನಸೂರು ವಿವಿದೋದ್ದೇಶ ಪ್ರಾಥಮಿಕಗ್ರಾಮೀಣ ಕೃಷಿ ಸಹಕಾರಿ ಸಂಘ ನಿ. ಕಾನಸೂರು ಪ್ರಾರಂಭವಾಗಿ ೫ ದಶಕಗಳಲ್ಲಿ ಈ ಭಾಗದ ಜನರ ಪ್ರಮುಖ ವ್ಯವಹಾರ, ವಹಿವಾಟಿನ ಕೇಂದ್ರವಾಗಿದೆ.

ಕಾನಸೂರಿನ ಸುತ್ತಮುತ್ತಲಿನ ಜನರ ಜೀವನಾಡಿಯಾಗಿ ಸೇವೆ ನೀಡುತ್ತಿರುವ ಈ ಸಂಘದ ಸುವರ್ಣ ಮಹೋತ್ಸವ ಸಮಾರಂಭ ಫೆ ೨೫ ರ ರವಿವಾರ ನಡೆಯಲಿದೆ. ಇಡೀ ದಿನದ ಈ ಸುವರ್ಣ ಸಂಬ್ರಮದ ಅಂಗವಾಗಿ ವಿಶೇಶ ಕಾರ್ಯಕ್ರಮಗಳು ನಡೆಯಲಿದ್ದು ಉದ್ಘಾಟನಾ ಸಮಾರಂಭವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಉದ್ಘಾಟಿಸಲಿದ್ದಾರೆ.

ಸಂಘದ ಅಧ್ಯಕ್ಷ ಮಂಜುನಾಥ ಜೋಶಿ ಈರಗೊಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಭಾ ಕಾರ್ಯಕ್ರಮದಲ್ಲಿ ಶಾಸಕ ಭೀಮಣ್ಣ ನಾಯ್ಕ ಸ್ಮರಣ ಸಂಚಿಕೆ ಸುವರ್ಣ ಸಹಕಾರ ಲೋಕಾರ್ಪಣೆ ಮಾಡಲಿದ್ದಾರೆ. ಅನೇಕ ಅತಿಥಿ ಗಣ್ಯರು, ಸಂಪನ್ಮೂಲ ವ್ಯಕ್ತಿಗಳು ಪಾಲ್ಗೊಳ್ಳಲಿರುವ ಈ ಕಾರ್ಯಕ್ರಮ ಈ ಭಾಗದ ಅದ್ಧೂರಿ ಕಾರ್ಯಕ್ರಮ ಎನಿಸಿದೆ.

ಸಂಗೀತ ಕಾರ್ಯಕ್ರಮ, ಯಕ್ಷಗಾನಗಳಿಂದ ಮುಕ್ತಾಯವಾಗಲಿರುವ ಈ ಸುವರ್ಣಮಹೋತ್ಸವ ಕಾರ್ಯಕ್ರಮ ಈ ಭಾಗದ ಸಹಕಾರಿಗಳ ಸೇವೆ ಸ್ಮರಣೆಗೆ ವೇದಿಕೆಯೂ ಆಗಲಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *