ರಾಜ್ಯಸಭಾ ಚುನಾವಣೆ: ಅಡ್ಡಮತ ಚಲಾಯಿಸಿ ಬಿಜೆಪಿಗೆ ಶಾಕ್ ನೀಡಿದ ಎಸ್’ಟಿ.ಸೋಮಶೇಖರ್

ಕುಮಾರಸ್ವಾಮಿ ಸಾಚಾನಾ?

ರಾಜ್ಯಸಭಾ ಚುನಾವಣೆ: ಅಡ್ಡಮತ ಚಲಾಯಿಸಿ ಬಿಜೆಪಿಗೆ ಶಾಕ್ ನೀಡಿದ ಎಸ್’ಟಿ.ಸೋಮಶೇಖರ್

ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವ ಹಾಗೂ ಆಗಾಗ ಕಾಂಗ್ರೆಸ್‌ ನಾಯಕರ ಜೊತೆ ಕಾಣಿಸಿಕೊಳ್ಳುತ್ತಿರುವ ಯಶವಂತಪುರ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಅವರು ಅಡ್ಡ ಮತದಾನ ಮೂಲಕ ಮೂಲಕ ಬಿಜೆಪಿ ಹಾಗೂ ಜೆಡಿಎಸ್‌ ಬಿಗ್‌ ಶಾಕ್‌ ನೀಡಿದ್ದಾರೆ.

ಎಸ್‌ಟಿ ಸೋಮಶೇಖರ್

ಎಸ್‌ಟಿ ಸೋಮಶೇಖರ್

ಬೆಂಗಳೂರು: ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವ ಹಾಗೂ ಆಗಾಗ ಕಾಂಗ್ರೆಸ್‌ ನಾಯಕರ ಜೊತೆ ಕಾಣಿಸಿಕೊಳ್ಳುತ್ತಿರುವ ಯಶವಂತಪುರ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಅವರು ಅಡ್ಡ ಮತದಾನ ಮೂಲಕ ಮೂಲಕ ಬಿಜೆಪಿ ಹಾಗೂ ಜೆಡಿಎಸ್‌ ಬಿಗ್‌ ಶಾಕ್‌ ನೀಡಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್‌ ಸಿ ಸೋಮಶೇಖರ್‌ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಮತ ಚಲಾಯಿಸಿದ್ದಾರೆಂದು ತಿಳಿದುಬಂದಿದೆ.

ಇನ್ನೂ ಎಸ್‌ ಟಿ ಸೋಮಶೇಖರ್‌ ಅವರು ಕಾಂಗ್ರೆಸ್‌ ಗೆ ಅಡ್ಡ ಮತದಾನ ಮಾಡಿದ್ದಾರೆ ಎಂದು ಬಿಜೆಪಿ ಚುನಾವಣಾ ಏಜೆಂಟ್‌ರೊಬ್ಬರು ಖಚಿತಪಡಿಸಿದ್ದಾರೆ.

ಮತದಾನಕ್ಕೂ ಮೊದಲು ಮಾಧ್ಯಮಗಳ ಜೊತೆ ಮಾತನಾಡಿದ್ದ ಸೋಮಶೇಖರ್ ಅವರು, “11 ವರ್ಷದಿಂದ ಎಲ್ಲರಿಗೂ ಮತ ಹಾಕಿದ್ದೇನೆ. ಆದರೆ, ರಾಜ್ಯಸಭೆಗೆ ಆಯ್ಕೆ ಆದವರು ಒಂದು ರೂಪಾಯಿ ಅನುದಾನವನ್ನೂ ಕೊಟ್ಟಿಲ್ಲ. ನೇರ ನೇರ ಹೇಳುತ್ತೇನೆ, ನಾನು ಈ ಬಾರಿ ಆತ್ಮಸಾಕ್ಷಿಯಂತೆ ಮತ ಹಾಕುತ್ತೇನೆ.‌ ಕಳೆದ ಬಾರಿ (ಹಾಲಿ ಹಣಕಾಸು ಸಚಿವೆ) ನಿರ್ಮಲಾ ಸೀತಾರಾಮನ್ ಅವರಿಗೆ ಮತ ಹಾಕಿದ್ದೆ. ಆಮೇಲೆ ನಿರ್ಮಲಾ ಸೀತಾರಾಮನ್ ನನಗೆ ಭೇಟಿಗೆ ಅಪಾಯಿಟ್ಮೆಂಟ್ ಕೂಡ ಕೊಡಲೇ ಇಲ್ಲ,” ಎಂದು ಬೇಸರ ಹೊರಹಾಕಿದ್ದರು.

ಎಸ್‌ಟಿ ಸೋಮಶೇಖರ್

ನನಗೆ ಯಾರು ಭರವಸೆ ಕೊಡುತ್ತಾರೋ ಅವರಿಗೆ ನಾನು ನನ್ನ ಮತ ಹಾಕುತ್ತೇನೆ. ನೆಪ ಹೇಳುತ್ತಿಲ್ಲ. ಹೇಳಿದ ಹಾಗೆ ಮತ ಚಲಾಯಿಸಿದ್ದೇನೆ. ಓಟು ಹಾಕಿಸಿಕೊಳ್ಳುವ ಮೊದಲು ಭರವಸೆ ನೀಡುತ್ತಾರೆ. 5 ಕೋಟಿ ರೂ. ಅನುದಾನ ಬರುತ್ತದೆ. ಆದರೆ, ಅದನ್ನು ನಮಗೆ ಕೊಡುತ್ತಾರಾ? ಆತ್ಮಸಾಕ್ಷಿಯಾಗಿ ಅಲ್ಲಿ (ವಿಧಾನಸೌಧಕ್ಕೆ) ಹೋಗಿ ಮತ ಚಲಾಯಿಸುತ್ತೇನೆ ಎಂದು ಹೇಳಿದರು.

ನನ್ನ ಕ್ಷೇತ್ರ ಅಭಿವೃದ್ಧಿ ಆಗಿಲ್ಲ ಅಂತ ಹೇಳಿಲ್ಲ. ಪಕ್ಷ ಏನು ಹೇಳುತ್ತದೋ ಅದನ್ನು ಮಾಡಿದ್ದೆ ಎಂದ ಅವರು,‌ ಜೆಡಿಎಸ್‌ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಏನು ಸಾಚಾನಾ? ಅವರು ಅವಕಾಶವಾದಿ ಅಲ್ವಾ? ಇವರನ್ನು ಮುಖ್ಯಮಂತ್ರಿ ಮಾಡಿರಲಿಲ್ವಾ? ಸಿಎಂ ಆದ್ಮೇಲೆ ಒಂದು, ಆಮೇಲೆ ಒಂದಾ? ಎಂದು ಆಕ್ರೋಶಭರಿತರಾಗಿ ಪ್ರಶ್ನಿಸಿದ್ದರು.

ಇದರ ನಡುವೆ ಮತದಾನ ಮಾಡಿದ ಬಳಿಕ ಮಾತನಾಡಿರುವ ಎಸ್‌ಟಿ ಸೋಮಶೇಖರ್, “ಆತ್ಮಸಾಕ್ಷಿಗೆ ಅನುಗುಣವಾಗಿ ಮತದಾನ ಮಾಡಿದ್ದೇನೆ. ನಾನು ಮತದಾನ ಮಾಡಿದ್ದನ್ನು ಏಜೆಂಟ್‌ಗೆ ತೋರಿಸಿದ್ದೇನೆ,” ಎಂದಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *