ರಾಜ್ಯಸಭಾ ಚುನಾವಣೆ: ಅಡ್ಡಮತ ಚಲಾಯಿಸಿ ಬಿಜೆಪಿಗೆ ಶಾಕ್ ನೀಡಿದ ಎಸ್’ಟಿ.ಸೋಮಶೇಖರ್

ಕುಮಾರಸ್ವಾಮಿ ಸಾಚಾನಾ?

ರಾಜ್ಯಸಭಾ ಚುನಾವಣೆ: ಅಡ್ಡಮತ ಚಲಾಯಿಸಿ ಬಿಜೆಪಿಗೆ ಶಾಕ್ ನೀಡಿದ ಎಸ್’ಟಿ.ಸೋಮಶೇಖರ್

ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವ ಹಾಗೂ ಆಗಾಗ ಕಾಂಗ್ರೆಸ್‌ ನಾಯಕರ ಜೊತೆ ಕಾಣಿಸಿಕೊಳ್ಳುತ್ತಿರುವ ಯಶವಂತಪುರ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಅವರು ಅಡ್ಡ ಮತದಾನ ಮೂಲಕ ಮೂಲಕ ಬಿಜೆಪಿ ಹಾಗೂ ಜೆಡಿಎಸ್‌ ಬಿಗ್‌ ಶಾಕ್‌ ನೀಡಿದ್ದಾರೆ.

ಎಸ್‌ಟಿ ಸೋಮಶೇಖರ್

ಎಸ್‌ಟಿ ಸೋಮಶೇಖರ್

ಬೆಂಗಳೂರು: ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವ ಹಾಗೂ ಆಗಾಗ ಕಾಂಗ್ರೆಸ್‌ ನಾಯಕರ ಜೊತೆ ಕಾಣಿಸಿಕೊಳ್ಳುತ್ತಿರುವ ಯಶವಂತಪುರ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಅವರು ಅಡ್ಡ ಮತದಾನ ಮೂಲಕ ಮೂಲಕ ಬಿಜೆಪಿ ಹಾಗೂ ಜೆಡಿಎಸ್‌ ಬಿಗ್‌ ಶಾಕ್‌ ನೀಡಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್‌ ಸಿ ಸೋಮಶೇಖರ್‌ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಮತ ಚಲಾಯಿಸಿದ್ದಾರೆಂದು ತಿಳಿದುಬಂದಿದೆ.

ಇನ್ನೂ ಎಸ್‌ ಟಿ ಸೋಮಶೇಖರ್‌ ಅವರು ಕಾಂಗ್ರೆಸ್‌ ಗೆ ಅಡ್ಡ ಮತದಾನ ಮಾಡಿದ್ದಾರೆ ಎಂದು ಬಿಜೆಪಿ ಚುನಾವಣಾ ಏಜೆಂಟ್‌ರೊಬ್ಬರು ಖಚಿತಪಡಿಸಿದ್ದಾರೆ.

ಮತದಾನಕ್ಕೂ ಮೊದಲು ಮಾಧ್ಯಮಗಳ ಜೊತೆ ಮಾತನಾಡಿದ್ದ ಸೋಮಶೇಖರ್ ಅವರು, “11 ವರ್ಷದಿಂದ ಎಲ್ಲರಿಗೂ ಮತ ಹಾಕಿದ್ದೇನೆ. ಆದರೆ, ರಾಜ್ಯಸಭೆಗೆ ಆಯ್ಕೆ ಆದವರು ಒಂದು ರೂಪಾಯಿ ಅನುದಾನವನ್ನೂ ಕೊಟ್ಟಿಲ್ಲ. ನೇರ ನೇರ ಹೇಳುತ್ತೇನೆ, ನಾನು ಈ ಬಾರಿ ಆತ್ಮಸಾಕ್ಷಿಯಂತೆ ಮತ ಹಾಕುತ್ತೇನೆ.‌ ಕಳೆದ ಬಾರಿ (ಹಾಲಿ ಹಣಕಾಸು ಸಚಿವೆ) ನಿರ್ಮಲಾ ಸೀತಾರಾಮನ್ ಅವರಿಗೆ ಮತ ಹಾಕಿದ್ದೆ. ಆಮೇಲೆ ನಿರ್ಮಲಾ ಸೀತಾರಾಮನ್ ನನಗೆ ಭೇಟಿಗೆ ಅಪಾಯಿಟ್ಮೆಂಟ್ ಕೂಡ ಕೊಡಲೇ ಇಲ್ಲ,” ಎಂದು ಬೇಸರ ಹೊರಹಾಕಿದ್ದರು.

ಎಸ್‌ಟಿ ಸೋಮಶೇಖರ್

ನನಗೆ ಯಾರು ಭರವಸೆ ಕೊಡುತ್ತಾರೋ ಅವರಿಗೆ ನಾನು ನನ್ನ ಮತ ಹಾಕುತ್ತೇನೆ. ನೆಪ ಹೇಳುತ್ತಿಲ್ಲ. ಹೇಳಿದ ಹಾಗೆ ಮತ ಚಲಾಯಿಸಿದ್ದೇನೆ. ಓಟು ಹಾಕಿಸಿಕೊಳ್ಳುವ ಮೊದಲು ಭರವಸೆ ನೀಡುತ್ತಾರೆ. 5 ಕೋಟಿ ರೂ. ಅನುದಾನ ಬರುತ್ತದೆ. ಆದರೆ, ಅದನ್ನು ನಮಗೆ ಕೊಡುತ್ತಾರಾ? ಆತ್ಮಸಾಕ್ಷಿಯಾಗಿ ಅಲ್ಲಿ (ವಿಧಾನಸೌಧಕ್ಕೆ) ಹೋಗಿ ಮತ ಚಲಾಯಿಸುತ್ತೇನೆ ಎಂದು ಹೇಳಿದರು.

ನನ್ನ ಕ್ಷೇತ್ರ ಅಭಿವೃದ್ಧಿ ಆಗಿಲ್ಲ ಅಂತ ಹೇಳಿಲ್ಲ. ಪಕ್ಷ ಏನು ಹೇಳುತ್ತದೋ ಅದನ್ನು ಮಾಡಿದ್ದೆ ಎಂದ ಅವರು,‌ ಜೆಡಿಎಸ್‌ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಏನು ಸಾಚಾನಾ? ಅವರು ಅವಕಾಶವಾದಿ ಅಲ್ವಾ? ಇವರನ್ನು ಮುಖ್ಯಮಂತ್ರಿ ಮಾಡಿರಲಿಲ್ವಾ? ಸಿಎಂ ಆದ್ಮೇಲೆ ಒಂದು, ಆಮೇಲೆ ಒಂದಾ? ಎಂದು ಆಕ್ರೋಶಭರಿತರಾಗಿ ಪ್ರಶ್ನಿಸಿದ್ದರು.

ಇದರ ನಡುವೆ ಮತದಾನ ಮಾಡಿದ ಬಳಿಕ ಮಾತನಾಡಿರುವ ಎಸ್‌ಟಿ ಸೋಮಶೇಖರ್, “ಆತ್ಮಸಾಕ್ಷಿಗೆ ಅನುಗುಣವಾಗಿ ಮತದಾನ ಮಾಡಿದ್ದೇನೆ. ನಾನು ಮತದಾನ ಮಾಡಿದ್ದನ್ನು ಏಜೆಂಟ್‌ಗೆ ತೋರಿಸಿದ್ದೇನೆ,” ಎಂದಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *