ಮಂಗನ ಕಾಯಿಲೆ ಅಥವಾ Monkey Fever

ಇತ್ತೀಚೆಗೆ ರಾಜ್ಯದ ಮಲೆನಾಡಿನ ಭಾಗಗಳಲ್ಲಿ ಮಂಗನ ಕಾಯಿಲೆ (ಮಂಕಿ ಫೀವರ್) ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಂಡಿವೆ. ಇದೊಂದು ವೈರಾಣು ಸೋಂಕು. ಕೆಲವು ಜನರು ಇದಕ್ಕೆ ಈಗಾಗಲೇ ಬಲಿಯಾಗಿದ್ದಾರೆ. ಇದನ್ನು ಕ್ಯಾಸನೂರು ಅರಣ್ಯ ಕಾಯಿಲೆ (ಕ್ಯಾಸನೂರ್ ಫಾರೆಸ್ಟ್ ಡಿಸೀಸ್-KFD) ಎಂದೂ ಕರೆಯುತ್ತಾರೆ.

ಮಂಗನ ಕಾಯಿಲೆ

ಮಂಗನ ಕಾಯಿಲೆ

ಇತ್ತೀಚೆಗೆ ರಾಜ್ಯದ ಮಲೆನಾಡಿನ ಭಾಗಗಳಲ್ಲಿ ಮಂಗನ ಕಾಯಿಲೆ (ಮಂಕಿ ಫೀವರ್) ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಂಡಿವೆ. ಇದೊಂದು ವೈರಾಣು ಸೋಂಕು. ಕೆಲವು ಜನರು ಇದಕ್ಕೆ ಈಗಾಗಲೇ ಬಲಿಯಾಗಿದ್ದಾರೆ. ಇದನ್ನು ಕ್ಯಾಸನೂರು ಅರಣ್ಯ ಕಾಯಿಲೆ (ಕ್ಯಾಸನೂರ್ ಫಾರೆಸ್ಟ್ ಡಿಸೀಸ್-KFD) ಎಂದೂ ಕರೆಯುತ್ತಾರೆ. ಏಕೆಂದರೆ ಮೊದಲ ಬಾರಿಗೆ ಇದು 1957ರಲ್ಲಿ ಶಿವಮೊಗ್ಗ ಜಿಲ್ಲೆಯ ಕ್ಯಾಸನೂರಿನ ಕಾಡಿನಲ್ಲಿ ಒಂದು ಕೋತಿಯಲ್ಲಿ ಈ ವೈರಸ್ ಕಂಡುಬಂದಿತು. ಆದ್ದರಿಂದಲೇ ಇದನ್ನು ಕ್ಯಾಸನೂರು ಅರಣ್ಯ ಕಾಯಿಲೆ ಅಥವಾ ಮಂಗನ ಕಾಯಿಲೆ ಎಂದು ಕರೆಯಲಾಗುತ್ತದೆ.

ಮಂಗನ ಕಾಯಿಲೆ ಹೇಗೆ ಹರಡುತ್ತದೆ?

ಫ್ಲಾವಿವಿರಿಡೆ ಎಂಬ ಹೆಸರಿನ ವೈರಸ್ನಿಂದ ಈ ಕಾಯಿಲೆ ಹರಡುತ್ತದೆ. ಈ ವೈರಸ್ ಇತರ ಪ್ರಾಣಿಗಳಿಗೆ/ಸಣ್ಣ ಪುಟ್ಟ ಜೀವಿಗಳಿಗೆ ತಗುಲಿ ಅವು ಮನುಷ್ಯರಿಗೆ ಕಚ್ಚಿದಾಗ ಮಂಗನ ಕಾಯಿಲೆ ಹರಡುತ್ತದೆ. ನಮ್ಮ ರಾಜ್ಯದ ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಾಗಿ, ಮಹಾರಾಷ್ಟ್ರ, ಕೇರಳ ಮತ್ತು ಗೋವಾ ರಾಜ್ಯಗಳಲ್ಲಿ ಮಂಗನ ಕಾಯಿಲೆಯ ಪ್ರಕರಣಗಳು ವರದಿಯಾಗಿವೆ. ಹಿರಿಯರು ಮತ್ತು ಕಿರಿಯರೆನ್ನದೇ ಎಲ್ಲರನ್ನೂ ಇದು ಬಾಧಿಸಬಹುದು.

ಮಂಗನ ಕಾಯಿಲೆ ಲಕ್ಷಣಗಳು

ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಸಂಸ್ಥೆಯ ಪ್ರಕಾರ ಮನುಷ್ಯರಿಗೆ ಸಾಮಾನ್ಯವಾಗಿ ಕಾಡಿಗೆ ಹೋದಾಗ ಚಿಗಟ ಅಥವಾ ಉಣ್ಣಿಗಳಿಂದ ಈ ಕಾಯಿಲೆ ಹರಡುತ್ತದೆ. ಕೆಂಪು ಚಿಗಟ ಕಡಿದಾಗ ಬರುವ ಈ ಕಾಯಿಲೆಯ ಮೊದಲ ಲಕ್ಷಣವೇ ಸೋಂಕು ತಗುಲಿದ ಒಂದು ವಾರದ ನಂತರ ಕಾಣಿಸಿಕೊಳ್ಳುವ ಜ್ವರ. ಒಂದು ಬಾರಿ ಈ ವೈರಸ್ ದೇಹವನ್ನು ಸೇರಿದರೆ ಸತತ 10 ರಿಂದ 12 ದಿನಗಳವರೆಗೆ ಜ್ವರ ಕಾಡುತ್ತದೆ. ಚಳಿ, ಜ್ವರ, ತಲೆನೋವು, ತೀವ್ರ ಸ್ನಾಯು ನೋವು, ವಾಂತಿ, ಜೀರ್ಣಾಂಗವ್ಯೂಹದ ಸಮಸ್ಯೆಗಳು ಕಾಣಸಿಕೊಳ್ಳುತ್ತವೆ. ನಂತರ ಕಡಿಮೆ ರಕ್ತದೊತ್ತಡ, ರಕ್ತ ಕಣಗಳ (ಪ್ಲೇಟ್‌ಲೆಟ್‌ಗಳು, ಕೆಂಪು ರಕ್ತ ಕಣಗಳು, ಬಿಳಿ ರಕ್ತ ಕಣಗಳು) ಸಂಖ್ಯೆ ಕಡಿಮೆಯಾಗುವುದು, ತೀವ್ರ ತಲೆನೋವು, ಮಾನಸಿಕ ತೊಂದರೆಗಳು, ನಡುಕ ಮತ್ತು ದೃಷ್ಟಿ ಕೊರತೆಗಳು ಕಾಣಿಸಿಕೊಳ್ಳುತ್ತವೆ. ಮಂಗನ ಕಾಯಿಲೆ ಹೆಚ್ಚು ಕಾಡಿಗೆ ಹೋಗುವವರಲ್ಲಿ, ಕಾಡಿನ ಹತ್ತಿರ ಮನೆ ಇರುವವರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ತಕ್ಷಣವೇ ವೈದ್ಯರನ್ನು ಕಂಡು ಚಿಕಿತ್ಸೆ ಪಡೆಯದಿದ್ದರೆ ಕಾಯಿಲೆ ಉಲ್ಬಣವಾಗಿ ಮಾರಣಾಂತಿಕವಾಗಬಹುದು.

ಮಂಗನ ಕಾಯಿಲೆಗೆ ಚಿಕಿತ್ಸೆ

ಈ ಕಾಯಿಲೆಗೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಇಲ್ಲ ಮತ್ತು ರೋಗ ನಿರ್ವಹಣೆಯು ಪ್ರಾಥಮಿಕವಾಗಿ ರೋಗಲಕ್ಷಣಗಳನ್ನು ನಿವಾರಿಸಲು ಮತ್ತು ತೊಡಕುಗಳನ್ನು ತಡೆಗಟ್ಟಲು ಪೋಷಕ ಆರೈಕೆಯನ್ನು ಒಳಗೊಂಡಿದೆ. ಇಂಟ್ರಾವೀನಸ್ ದ್ರವಗಳು, ನೋವು ನಿವಾರಕಗಳು ಮತ್ತು ಜ್ವರ ಮತ್ತು ವಾಂತಿ ನಿಯಂತ್ರಿಸಲು ಔಷಧಿಗಳನ್ನು ವೈದ್ಯರು ನೀಡುತ್ತಾರೆ. ತೀವ್ರತರವಾದ ಪ್ರಕರಣಗಳಲ್ಲಿ ರೋಗಿಗಳನ್ನು ಆಸ್ಪತ್ರೆಗೆ ಸೇರಿಸುವುದು ಮತ್ತು ತೀವ್ರ ನಿಗಾ ಇಡುವುದು ಅಗತ್ಯವಾಗಬಹುದು. ದೇಹದಲ್ಲಿ ನಿರ್ಜಲೀಕರಣವನ್ನು ತಡೆಗಟ್ಟಲು ದ್ರವಗಳು ಮತ್ತು ವಿದ್ಯುದ್ವಿಚ್ಛೇದ್ಯಗಳು (ಎಲೆಕ್ಟ್ರೋಲೈಟುಗಳು), ನೋವು ನಿವಾರಕಗಳು ಮತ್ತು ಕೆಲವು ಸಂದರ್ಭಗಳಲ್ಲಿ ಆಂಟಿವೈರಲ್ ಔಷಧಿಗಳು ಸಹಾಯಕವಾಗಬಹುದು. ರಕ್ತಸ್ರಾವದ ಸಮಸ್ಯೆಗಳು ಅಥವಾ ನರವೈಜ್ಞಾನಿಕ ತೊಡಕುಗಳು ಉಂಟಾದರೆ ಅವುಗಳಿಗೆ ಸೂಕ್ತ ಚಿಕಿತ್ಸಾ ಕ್ರಮಗಳನ್ನು ಕೈಗೊಳ್ಳಬಹುದು. ಹಲವು ರಾಜ್ಯ ಸರ್ಕಾರಗಳು ಈ ಕಾಯಿಲೆಯನ್ನು ತಟೆಗಟ್ಟಲು ಪ್ರತಿಬಂಧಕ ಚುಚ್ಚುಮದ್ದನ್ನು ನೀಡುತ್ತಿವೆ. ಇದನ್ನು ತಪ್ಪದೇ ತೆಗೆದುಕೊಳ್ಳಬೇಕು.ಇದಕ್ಕೆ ಬೂಸ್ಟರ್ ಡೋಸ್ ಪಡೆಯಬಹುದು.

ಮಂಗನ ಕಾಯಿಲೆ ಸಾಂಕ್ರಾಮಿಕವಲ್ಲ

ಮಂಗನ ಕಾಯಿಲೆ ಸಾಂಕ್ರಾಮಿಕವಲ್ಲ ಅಂದರೆ ಇದು ಒಬ್ಬರಿಂದ ಒಬ್ಬರಿಗೆ ಹರಡುವುದಿಲ್ಲ. ಇದರ ಯಾವುದೇ ರೋಗಲಕ್ಷಣಗಳನ್ನು ಕಂಡುಬಂದರೆ ಅದರಲ್ಲಿಯೂ ವಿಶೇಷವಾಗಿ ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿದ ನಂತರ/ಟ್ರೆಕ್ಕಿಂಗ್ ಗೆ ಹೋದ ನಂತರ ಜ್ವರ ಬಂದರೆ ತಕ್ಷಣ ವೈದ್ಯಕೀಯ ಆರೈಕೆ ಪಡೆಯುವುದು ಬಹಳ ಮುಖ್ಯ. ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ಪಡೆದರೆ ಸೋಂಕಿಗೆ ತುತ್ತಾದ ಒಂದೆರಡು ವಾರದಲ್ಲಿ ಚೇತರಿಕೆ ಕಾಣಬಹುದು. ಈ ಕಾಯಿಲೆ ಬಂದಾಗ ಹೆಚ್ಚು ಪ್ರೋಟೀನ್ಯುಕ್ತ ಆಹಾರ ಸೇವನೆ ಮಾಡಬೇಕು. ತಾಜಾ ಹಣ್ಣುಗಳು ಮತ್ತು ತರಕಾರಿಗಳ ಸೇವನೆಯ ಜೊತೆಗೆ ಬಿಸಿಬಿಸಿಯಾಗಿರುವಾಗ ಊಟ ಮತ್ತು ತಿಂಡಿ ಮಾಡಬೇಕು.

ಮಂಗನ ಕಾಯಿಲೆ

ಈ ಕಾಯಿಲೆಯಿಂದ ತಪ್ಪಿಸಿಕೊಳ್ಳಲು ಅರಣ್ಯ ಪ್ರದೇಶಗಳಿಗೆ ಪ್ರವೇಶಿಸುವಾಗ ಉದ್ದನೆಯ ತೋಳಿರುವ ಷರ್ಟ್ ಮತ್ತು ಪ್ಯಾಂಟ್ ಧರಿಸಬೇಕು. ಬೆಚ್ಚನೆಯ ಮತ್ತು ಇಡೀ ದೇಹವನ್ನು ಮುಚ್ಚುವಂತಹ ಬಟ್ಟೆಗಳನ್ನು ಧರಿಸುವುದು ಒಳ್ಳೆಯದು. ಸೋಂಕಿತ/ಸತ್ತ ಕೋತಿಗಳ/ಇತರ ಪ್ರಾಣಿಗಳ ಸಂಪರ್ಕವನ್ನು ತಪ್ಪಿಸಬೇಕು. ಪ್ರಾಣಿಗಳನ್ನು ಮುಟ್ಟಿದ ನಂತರ ಸರಿಯಾಗಿ ಕೈಕಾಲುಗಳನ್ನು ಸ್ವಚ್ಛಗೊಳಿಸಿಕೊಳ್ಳಬೇಕು. ರಾತ್ರಿ ಹೊತ್ತು ಮಲಗುವಾಗ ಸೊಳ್ಳೆ ಪರದೆಯನ್ನು ಕಟ್ಟಿಕೊಳ್ಳಬೇಕು. ವಾಸಿಸುವ ಸ್ಥಳ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ನೈರ್ಮಲ್ಯವನ್ನು ಸದಾ ಕಾಪಾಡಿಕೊಳ್ಳಬೇಕು. ಕೀಟನಾಶಕಗಳನ್ನು ನಿಯಮಿತವಾಗಿ ಸಿಂಪಡಿಸಬೇಕು. ಕಾಡಿನಲ್ಲಿ ಆಥವಾ ಸುತ್ತಮುತ್ತಲ ಪ್ರದೇಶದಲ್ಲಿ ವಾಸಿಸುವರು ಈ ಬಗ್ಗೆ ಹೆಚ್ಚು ಎಚ್ಚರದಿಂದಿರಬೇಕು. ಇದರ ರೋಗಲಕ್ಷಣಗಳು ಮಲೇರಿಯಾ ರೋಗದ ಲಕ್ಷಣಗಳನ್ನೇ ಹೋಲುತ್ತವೆ. ಜೊತೆಗೆ ಯಾವುದೇ ಪ್ರಾಣಿಗಳಿಂದ ವೈರಸ್ ಹರಡುವ ಸಾಧ್ಯತೆ ಹೆಚ್ಚಾಗಿರುವುದರಿಂದ ಆದಷ್ಟು ಜಾಗೃತರಾಗಿದ್ದರೆ ಒಳ್ಳೆಯದು.


Dr Vasundhara Bhupathi

ಡಾ. ವಸುಂಧರಾ ಭೂಪತಿ
ಮೊ: 9986840477
ಇ-ಮೇಲ್ : bh****************@***il.co
(kp.com)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *