kfd desease- ಮಂಗನ ಕಾಯಿಲೆ ಸಾವಿಗೆ ೧೫ ಲಕ್ಷ ಪರಿಹಾರಕ್ಕೆ ಪ್ರಯತ್ನ

ಮಲೆನಾಡಿನಲ್ಲಿ ಮಂಗನ ಕಾಯಿಲೆಗೆ ಈ ವರ್ಷ ಉತ್ತಮ ವಾತಾವರಣವಾಗಿ ಪರಿಣಮಿಸಿದೆ. ಕಳೆದ ವರ್ಷದ ಮಳೆ ಕೊರತೆ ನಂತರ ಈ ವರ್ಷ ಹಿಂದಿನ ವರ್ಷದ ಡಿಸೆಂಬರ್ನಿಂದಲೇ ಕಾಣಿಸಿಕೊಂಡ ಮಂಗನ ಕಾಯಿಲೆ ಈಗ ಮಾರಣಾಂತಿಕವಾಗಿ  ವಿಸ್ತರಿಸಿದೆ. ಇತ್ತೀಚಿನ ದಶಕಗಳಲ್ಲಿ ಮಾರ್ಚ್‌, ಡಿಸೆಂಬರ್ಗಳ  ಉರಿ ಬಿಸಿಲಿನ ಬೇಸಿಗೆಯಲ್ಲಿ ಪ್ರಾರಂಭವಾಗುತಿದ್ದ ಮಂಗನ ಕಾಯಿಲೆ ೨೦೨೩ ರ ಡಿಸೆಂಬರ್‌ ಗೂ ಮೊದಲೇ ಕಾಣಿಸಿಕೊಂಡಿದ್ದು ಅಸಹಜ. ಪ್ರತಿ ಬೇಸಿಗೆಯಂತೆ ಈ ಬೇಸಿಗೆಯಲ್ಲಿ ಈ ಮಂಗನಕಾಯಿಲೆಯ ವಿಪರೀತತೆ ಆತಂಕಕ್ಕೆ ಕಾರಣವಾಗಿದೆ.


೧೯೫೭ ರಿಂದಲೇ ಪತ್ತೆಯಾದ ಈ ಮಂಗನ ಕಾಯಿಲೆ ಈ ವರ್ಷ ಈಗಾಗಲೇ ೬ ಜನರ ಸಾವಿಗೆ ಕಾರಣವಾಗಿದೆ.
ಚಿಕ್ಕಮಂಗಳೂರಿನಲ್ಲಿ ಒಂದು ಉತ್ತರ ಕನ್ನಡ ಜಿಲ್ಲೆಯಲ್ಲಿ೫ ಸಾವುಗಳು ಸೇರಿ ಈವರೆಗೆ ರಾಜ್ಯದಲ್ಲಿ ಈ ಕಾಯಿಲೆಗೆ ಬಲಿಯಾದವರ ಸಂಖ್ಯೆ ಆರಕ್ಕೇರಿದರೆ ಉತ್ತರ ಕನ್ನಡ ಜಿಲ್ಲೆಯೊಂದರಲ್ಲೇ ೬೦ ಕ್ಕೂ ಹೆಚ್ಚು ಜನ ಈ ಕಾಯಿಲೆಗೆ ತುತ್ತಾಗಿದ್ದಾರೆ.


೧೯೫೭ನೇ ಇಸ್ವಿಯಲ್ಲಿ ಪ್ರಾರಂಭವಾದ ಈ ಕಾಯಿಲೆಗೆ ಈ ವರೆಗೆ ಪಕ್ಕಾ ಸೂಕ್ತ ಚಿಕಿತ್ಸೆ ಇಲ್ಲ. ರೋಗ ನಿರೋಧಕ ಶಕ್ತಿ ಹೆಚ್ಚಳ, ಸಾದಾ ರೋಗಗಳ ಚಿಕಿತ್ಸೆಯ ಔಷೋಧಾಪಚಾರದ ಮೂಲಕವೇ ಗುಣಪಡಿಸುತ್ತೇವೆ ಎನ್ನುವ ಆರೋಗ್ಯ ಇಲಾಖೆ ಈ ಆರು ದಶಕಗಳಲ್ಲಿ ಈ ರೋಗಕ್ಕೆ ಮದ್ದು ಕಂಡುಹಿಡಿಯಲು ವಿಫಲವಾದ ಬಗ್ಗೆ ಯಾವ ಮಾಹಿತಿಯನ್ನೂ ಮುಂದಿಡುತ್ತಿಲ್ಲ.


ಶಿವಮೊಗ್ಗ ಜಿಲ್ಲೆಯ ಸೊರಬಾ ತಾಲೂಕಿನ ಕ್ಯಾಸನೂರಿನಿಂದ ಪ್ರಾರಂಭವಾದ ಕ್ಯಾಸನೂರು ಅರಣ್ಯ ಖಾಯಿಲೆ ಮಂಗನ ಕಾಯಿಲೆ ಎಂದು ಕುಖ್ಯಾತವಾಗಿದೆಯಾದರೂ ಪ್ರತಿವರ್ಷ ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಾಣಿಸಿಕೊಳ್ಳುವ ಈ ರೋಗಕ್ಕೆ ಉಪಚಾರ ಮಾಡುವ ಆಸ್ಫತ್ರೆಗಳೇ  ಈ ಜಿಲ್ಲೆಗಳಲ್ಲಿ ಇಲ್ಲ.
ಉತ್ತರ ಕನ್ನಡದ ಶಿರಸಿ, ಸಿದ್ಧಾಪುರ ಶಿವಮೊಗ್ಗದ ಹೊಸನಗರ, ಸಾಗರ ಚಿಕ್ಕಮಂಗಳೂರಿನ ಕೆಲವೆಡೆ ಸೇರಿ  ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಗ್ರಾಮೀಣ ಜನರ ಜೀವಕ್ಕೆ ಅಪಾಯ ತರುತ್ತಿರುವ ಈ ಕಾಯಿಲೆ ಚಿಕಿತ್ಸೆಗೆ ಬಡವ ಬಲ್ಲಿದರೆನ್ನದೆ ಎಲ್ಲರೂ ಮಂಗಳೂರಿಗೆ ಓಡಬೇಕಾದ ಅನಿವಾರ್ಯತೆ ಇದೆ.


ಈ ಮಾರಣಾಂತಿಕ ಕಾಯಿಲೆ ಪೀಡಿತರಿಗೆ ಇದು ಮಂಗನ ಕಾಯಿಲೆ ಎಂದು ಪತ್ತೆ ಹಚ್ಚಲು ಒಂದು ವಾರ ಕಾಯಬೇಕಾದ ಅನಿವಾರ್ಯತೆ ಇದೆ. ದೂರದ ಮಂಗಳೂರು, ರಾಜಧಾನಿ ಬೆಂಗಳೂರಿಗೆ ರವಾನಿಸಿದ ರೋಗಿಗಳ ರಕ್ತದ ಮಾದರಿ ವರದಿ ಬರಲು ವಾರದ ವರೆಗೆ ಸಮಯ ಹಿಡಿಯುವುದರಿಂದ ಈ ಬಾಗದಲ್ಲಿ ಮಂಗನಕಾಯಿಲೆ ವೈರಸ್‌ ಪತ್ತೆ ಕೇಂದ್ರ ಸ್ಥಾಪನೆಗೆ ಜನರು ಬಹಳ ವರ್ಷಗಳಿಂದ ಒತ್ತಾಯಿಸುತ್ತಲೇ ಬಂದಿದ್ದಾರೆ.


ಈ ವರ್ಷ ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಮಂಗನಕಾಯಿಲೆ ಪತ್ತೆ ಲ್ಯಾಬ್‌ ಶಿರಸಿಯಲ್ಲಿ ಪ್ರಾರಂಭಿಸುವಂತೆ ರಾಜ್ಯ ಆರೋಗ್ಯ ಸಚಿವರಿಗೆ ಮನವಿ ಮಾಡಿದ್ದಾರೆ. ಶಾಸಕರ ಪ್ರಯತ್ನ, ಮಂಗನ ಕಾಯಿಲೆ ಮುಂಜಾಗ್ರತೆ ಪ್ರಯತ್ನಗಳ ನಡುವೆ ಕೆ.ಎಫ್.ಡಿ. ಬಾಧಿತರ ಚಿಕಿತ್ಸೆ, ಸಾವಿನ ಪ್ರಕರಣಗಳಲ್ಲಿ ಪರಿಹಾರ ನೀಡಿಕೆಯಲ್ಲಿ ಕೂಡಾ ಸರ್ಕಾರ ತಾರತಮ್ಯ ಮಾಡುತ್ತಿರುವುದು ಶೋಚನೀಯ ಸಂಗತಿಯಾಗಿದೆ.
ಹಾವು ಕಡಿತ, ಆಕಸ್ಮಿಕ ಸಾವುಗಳಿಗೆ ೫ ಲಕ್ಷ ಪರಿಹಾರ ನೀಡುವ ಸರ್ಕಾರ ಮಂಗನ ಕಾಯಿಲೆ ಪೀಡಿತರ ಸಾವಿನ ಪ್ರಕರಣಗಳಲ್ಲಿ ಎರಡು ಲಕ್ಷ ಪರಿಹಾರ ನೀಡಿ ತಾರತಮ್ಯ ಮಾಡಿರುವುದು ಈಗ ಸಾರ್ವಜನಿಕರ ವಿರೋಧಕ್ಕೆ ಕಾರಣವಾಗಿದೆ. ಈ ಬಗ್ಗೆ ಪ್ರಸ್ಥಾಪಿಸಿದ ವಿ.ಕ. ವೆಬ್‌ ನ್ಯೂಸ್‌ ಪ್ರತಿನಿಧಿಗಳಿಗೆ ಪ್ರತಿಕ್ರೀಯಿಸಿದ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಮಂಗನ ಕಾಯಿಲೆ ಸಾವುಗಳಿಗೆ ೨ ಲಕ್ಷ ರೂಪಾಯಿ ಬದಲು ಕಾಡು ಪ್ರಾಣಿಗಳಿಂದ ಮೃತರಾದವರಿಗೆ ನೀಡುವ ೧೫ ಲಕ್ಷ ಪರಿಹಾರಕ್ಕೆ ಒತ್ತಾಯಿಸಿರುವುದಾಗಿ ತಿಳಿಸಿದ್ದಾರೆ.


ಮಂಗನಕಾಯಿಲೆ ನಿಯಂತ್ರಣಕ್ಕೆ ಶೀಘ್ರ ಸೂಕ್ತ ಚಿಕಿತ್ಸೆ, ಮಂಗಗಳ ಮಂಕಿಪಾರ್ಕ್‌ ಮೂಲಕ ಕೆ.ಎಫ್.ಡಿ. ತಡೆಗಟ್ಟುವುದು, ಸೂಕ್ತ ಚಿಕಿತ್ಸೆ, ಪರಿಹಾರ ಸೌಲಭ್ಯ ಗಳ ಮೂಲಕ ರೋಗ ಪೀಡಿತರಿಗೆ ಸಹಕರಿಸುವುದು, ಮೃತರಿಗೆ ಹೆಚ್ಚಿನ ಪರಿಹಾರ ಒದಗಿಸಿ ಅವಲಂಬಿತರಿಗೆ ನೆರವಾಗುವ ಮೂಲಕ ಸರ್ಕಾರ ಮಲೆನಾಡಿನ ಮಾರಣಾಂತಿಕ ಮಂಗನ ಕಾಯಿಲೆ ಬಗ್ಗೆ  ಸೂಕ್ತ ಸ್ಪಂದನ ಮಾಡಬಹುದು ಎಂಬುದು ಸಾರ್ವಜನಿಕರ ಅಪೇಕ್ಷೆಯಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *