ಕೆರೆಬೇಟೆ ಹುಡುಗನಿಗೆ ಹೆಚ್ಚಿದ ಬೇಡಿಕೆ

ಕೆರೆಬೇಟೆ ಚಿತ್ರದ ಯುವ ನಿರ್ಧೇಶಕ ಗುರುರಾಜ್‌ ಬಿ. ಯಾನೆ ರಾಜ್‌ ಗುರು ಚಿತ್ರ ಬಿಡುಗಡೆಗೆ ಮುನ್ನ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ಅವಿರತ ೧೬ ವರ್ಷಗಳ ಶ್ರಮದ ನಂತರ ಕೆರೆಬೇಟೆ ಚಿತ್ರ ತೆರೆಗೆ ಬರುವ ಮೊದಲು ಕನ್ನಡ ಚಿತ್ರರಂಗ ಮತ್ತು ಮಾದ್ಯಮಲೋಕ ರಾಜ್‌ ಗುರು ಪ್ರತಿಭೆ ಗುರುತಿಸಿದೆ. ವಿನಯ ರಾಜ್‌ ಕುಮಾರ ಜೊತೆ ಎರಡನೇ ಸಿನೆಮಾಕ್ಕೆ ತಯಾರಿ ನಡೆಸುತ್ತಿರುವ ರಾಜ್‌ ಗುರು ಚಿಂಗುಮಣೆ ಮೂಲಕ ಮತ್ತೆ ಮಲೆನಾಡಿನಸೊಬಗು ಪರಿಚಯಿಸಲಿದ್ದಾರೆ. ಕೆರೆಬೇಟೆಯ ಪ್ರಸವ ವೇದನೆಯ ಖುಷಿಯಲ್ಲಿ ಉತ್ಸಾಹ ಹೆಚ್ಚಿಸಿಕೊಂಡಿರುವ ಗುರು ಆತ್ಮವಿಶ್ವಾಸದಿಂದಿರುವುದು ಅವರ ಮುಂದಿನ ಹಾದಿಗೆ ಪೂರಕವಾಗಲಿದೆ.

samajamukhi.net ಸಂಪಾದಕ ಕನ್ನೇಶ್‌ ಕೋಲಶಿರ್ಸಿ ಜೊತೆ ನಿಧೇಶಕ ರಾಜ್‌ಗುರು ( ಹಳೆಯ ಚಿತ್ರ)

https://samajamukhi.net/2022/08/20/arasu-a-social-desiner/

‘ಕೆರೆಬೇಟೆ’ ಬಿಡುಗಡೆಗೆ ಸಿದ್ಧ; ಚಿತ್ರದಲ್ಲಿ ನನ್ನ ಹುಟ್ಟೂರು ಮಲೆನಾಡಿನ ಸೊಬಗು ಆಳವಾಗಿ ಬೇರೂರಿದೆ: ನಿರ್ದೇಶಕ ರಾಜಗುರು

ಗೂಗ್ಲಿ ಮತ್ತು ನಟಸಾರ್ವಭೌಮದಂತಹ ಚಿತ್ರಗಳಲ್ಲಿ ನಿರ್ದೇಶಕ ಪವನ್ ಒಡೆಯರ್ ಅವರಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ರಾಜಗುರು ಬಿ ತಮ್ಮ ಚೊಚ್ಚಲ ಚಿತ್ರ ಕೆರೆಬೇಟೆಯೊಂದಿಗೆ ಪೂರ್ಣ ಪ್ರಮಾಣದ ನಿರ್ದೇಶಕರಾಗಿ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ್ದಾರೆ. ಚಿತ್ರವು ಮಾರ್ಚ್ 15ರಂದು ಬಿಡುಗಡೆ ಸಿದ್ಧವಾಗಿದ್ದು, ನಿರ್ದೇಶಕರು ತಮ್ಮ ಉತ್ಸಾಹವನ್ನು ಹಂಚಿಕೊಂಡಿದ್ದಾರೆ.

ನಿರ್ದೇಶಕ ರಾಜ್‌ಗುರು - ಕೆರೆಬೇಟೆ ಚಿತ್ರದ ಸ್ಟಿಲ್

ನಿರ್ದೇಶಕ ರಾಜ್‌ಗುರು – ಕೆರೆಬೇಟೆ ಚಿತ್ರದ ಸ್ಟಿಲ್

ಗೂಗ್ಲಿ ಮತ್ತು ನಟಸಾರ್ವಭೌಮದಂತಹ ಚಿತ್ರಗಳಲ್ಲಿ ನಿರ್ದೇಶಕ ಪವನ್ ಒಡೆಯರ್ ಅವರಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ರಾಜಗುರು ಬಿ ತಮ್ಮ ಚೊಚ್ಚಲ ಚಿತ್ರ ಕೆರೆಬೇಟೆಯೊಂದಿಗೆ ಪೂರ್ಣ ಪ್ರಮಾಣದ ನಿರ್ದೇಶಕರಾಗಿ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ್ದಾರೆ. ಚಿತ್ರವು ಮಾರ್ಚ್ 15ರಂದು ಬಿಡುಗಡೆ ಸಿದ್ಧವಾಗಿದ್ದು, ನಿರ್ದೇಶಕರು ತಮ್ಮ ಉತ್ಸಾಹವನ್ನು ಹಂಚಿಕೊಂಡಿದ್ದಾರೆ.

‘ಕೆರೆಬೇಟೆ ಚಿತ್ರದ ಮೂಲಕ ನಿರ್ದೇಶಕನಾಗಿ ಪದಾರ್ಪಣೆ ಮಾಡುತ್ತಿರುವುದು ಸುದೀರ್ಘ ಹೋರಾಟದ ಪರಾಕಾಷ್ಠೆಯಾಗಿದೆ. ನಾನು 2008ರಲ್ಲಿ ಚಿತ್ರರಂಗಕ್ಕೆ ಪ್ರವೇಶಿಸಿದ್ದರೂ, ಸಿನಿಮಾ ನಿರ್ದೇಶಿಸುವ ನನ್ನ ಕನಸು ನನಸಾಗಲು ಇಷ್ಟು ವರ್ಷಗಳು ಬೇಕಾಯಿತು. ಈ ದಾರಿಯುದ್ದಕ್ಕೂ ವಿಷಾದದ ಕ್ಷಣಗಳು ಇದ್ದವು. ಆದರೆ, ಈಗ ಅದು ಕಾರ್ಯರೂಪಕ್ಕೆ ಬರುವುದನ್ನು ನೋಡಿ ನನಗೆ ತೃಪ್ತಿ ಇದೆ’ ಎನ್ನುತ್ತಾರೆ ರಾಜ್‌ಗುರು.

ಕಂಟೆಂಟ್ ಆಧರಿತ ಸಿನಿಮಾ ಮಾಡುವ ಅವರ ನಿರ್ಧಾರದ ಬಗ್ಗೆ ಮಾತನಾಡುವ ಅವರು, ‘ನಾನು ಕಮರ್ಷಿಯಲ್ ಚಿತ್ರವನ್ನು ಆಯ್ಕೆ ಮಾಡಿದ್ದರೆ ಮನ್ನಣೆ ಗಳಿಸಬಹುದು. ಆದರೆ, ನನಗೆ ಅದರಲ್ಲಿ ತೃಪ್ತಿ ಇರಲಿಲ್ಲ. ಮಲೆನಾಡು ಪ್ರದೇಶದಿಂದ ಬಂದವನಾಗಿ, ಕೆರೆಬೇಟೆ ನನ್ನ ಸ್ಥಳೀಯ ಸೊಬಗು ಆಳವಾಗಿ ಬೇರೂರಿರುವ ಮತ್ತು ನನ್ನ ಬೆಳವಣಿಗೆಯನ್ನು ಪ್ರತಿಬಿಂಬಿಸುವ ಚಿತ್ರ ಎಂದು ಖಚಿತಪಡಿಸಿಕೊಳ್ಳಲು ನಾನು ಬಯಸುತ್ತೇನೆ. ಸಾಂಕ್ರಾಮಿಕ ರೋಗದ ನಂತರ ಪ್ರೇಕ್ಷಕರ ಬದಲಾಗುತ್ತಿರುವ ದೃಷ್ಟಿಕೋನಗಳು ಮತ್ತು ಹೊಸ ಕಂಟೆಂಟ್‌ಗೆ ಉದ್ಯಮದ ಮುಕ್ತತೆ ನನ್ನ ಚೊಚ್ಚಲ ಪ್ರವೇಶಕ್ಕೆ ಪರಿಪೂರ್ಣ ಅವಕಾಶವನ್ನು ಒದಗಿಸಿದೆ’ ಎಂದು ಅವರು ಹೇಳುತ್ತಾರೆ.

ನಿರ್ದೇಶಕ ರಾಜ್‌ಗುರು - ಕೆರೆಬೇಟೆ ಚಿತ್ರದ ಸ್ಟಿಲ್

‘ಇಂದಿನ ಪ್ರೇಕ್ಷಕರು ವಾಸ್ತವಕ್ಕೆ ಹತ್ತಿರವಾದ ಕಥೆಗಳ ಹುಡುಕಾಟದಲ್ಲಿ ಕಂಟೆಂಟ್ ಆಧರಿತ ಸಿನಿಮಾದತ್ತ ಆಕರ್ಷಿತರಾಗಿದ್ದಾರೆ. ಬಲಿಷ್ಠ ಕಥೆ ಹೇಳುವ ಸಂಪ್ರದಾಯಕ್ಕೆ ಹೆಸರಾದ ನಮ್ಮ ಕನ್ನಡ ಸಿನಿಮಾಗಳು ಹೊರಗಿನ ಪ್ರಭಾವಗಳಿಂದ ತಮ್ಮ ಬೇರುಗಳಿಂದ ದೂರ ಸರಿದಿದ್ದವು. ಆದಾಗ್ಯೂ, ನಮ್ಮ ಪರಂಪರೆಯನ್ನು ಸಂಭ್ರಮಿಸುವ ಕಥೆಗಳ ಪುನರುತ್ಥಾನವನ್ನು ನಾವು ಈಗ ನೋಡುತ್ತಿದ್ದೇವೆ’ ಎಂದು ಅವರು ಹೇಳುತ್ತಾರೆ.

ಕೆರೆಬೇಟೆ ಸಿನಿಮಾ ಮಲೆನಾಡು ಪ್ರದೇಶಗಳಲ್ಲಿನ ಹಳೆಯ ಮೀನುಗಾರಿಕೆ ಸಂಪ್ರದಾಯಗಳ ಸುತ್ತ ಸುತ್ತುತ್ತದೆ. ಅದರ ಶೀರ್ಷಿಕೆಯನ್ನು ಸಮರ್ಥಿಸುವ ನಿರೂಪಣೆಯೊಂದಿಗೆ ಕಮರ್ಷಿಯಲ್ ಮನರಂಜನೆಯ ಅಂಶಗಳನ್ನು ಸೇರಿಸಲಾಗಿದೆ.

ಮಲೆನಾಡಿನವರೇ ಆದ ನಟ ಗೌರಿ ಶಂಕರ್ ಅವರೊಂದಿಗೆ ಕೆಲಸ ಮಾಡಿದ್ದಕ್ಕಾಗಿ ನಿರ್ದೇಶಕ ರಾಜ್‌ಗುರು ಅವರು ಕೃತಜ್ಞತೆಯನ್ನು ಸಲ್ಲಿಸುತ್ತಾರೆ. ಗೌರಿ ಶಂಕರ್ ಅವರು ಕಥೆಯನ್ನು ಮೆಚ್ಚಿಕೊಂಡರು ಮತ್ತು ನಟ ಮತ್ತು ನಿರ್ಮಾಪಕರಾಗಿಯೂ ನೆರವಾದರು ಎನ್ನುತ್ತಾರೆ.

ನಿರ್ದೇಶಕ ರಾಜ್‌ಗುರು - ಕೆರೆಬೇಟೆ ಚಿತ್ರದ ಸ್ಟಿಲ್

ಜನಮನ ಸಿನಿಮಾಸ್ ಬ್ಯಾನರ್‌ನಡಿಯಲ್ಲಿ ದಿನಕರ್ ತೂಗುದೀಪ ಪ್ರಸ್ತುತಪಡಿಸಿ ಜೈಶಂಕರ್ ಪಟೇಲ್ ನಿರ್ಮಿಸಿರುವ ಈ ಚಿತ್ರದಲ್ಲಿ ಬಿಂದು ಶಿವರಾಮ್ ನಾಯಕಿಯಾಗಿ ಪದಾರ್ಪಣೆ ಮಾಡುತ್ತಿದ್ದಾರೆ. ಇದರೊಂದಿಗೆ ಗೋಪಾಲಕೃಷ್ಣ ದೇಶಪಾಂಡೆ, ಹರಿಣಿ ಮತ್ತು ಸಂಪತ್ ಕುಮಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಕೆರೆಬೇಟೆ ಚಿತ್ರಕ್ಕೆ ಗಗನ್ ಬಡೇರಿಯಾ ಅವರ ಸಂಗೀತ ಸಂಯೋಜನೆಯಿದ್ದು, ಡಿಒಪಿ ಆಗಿ ಕೀರ್ತನ್ ಪೂಜಾರಿ ಮತ್ತು ಸಂಕಲನಕಾರರಾಗಿ ಜ್ಞಾನೇಶ್ ಬಿ ಮಾತಾಡ್ ಇದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *