ಉರಿ ಕೆಂಡವಾದ ಮಲೆನಾಡ ರಾಜಕೀಯ…


೨೦೨೪ ರ ಮೊದಲು ಬಿ.ಜೆ.ಪಿ.ಯ ಪ್ರಯೋಗಶಾಲೆಯಂತಾಗಿದ್ದ ಕರಾವಳಿ ಮಲೆನಾಡಿನಲ್ಲಿ ಈ ವರ್ಷ ಉರಿಬಿಸಿಲಿನೊಂದಿಗೆ ರಾಜಕೀಯ ಕಾವು ಪ್ರಾರಂಭವಾಗಿದೆ. ಮಧ್ಯ ಕರ್ನಾಟಕ ದಾವಣಗೆರೆಯಲ್ಲಿ ಸಿದ್ದೇಶ್ವರ ಕುಟುಂಬದ ವಿರುದ್ಧ ಮಾಜಿ ಶಾಸಕ ರೇಣುಕಾಚಾರ್ಯ ಬಂಡಾಯದ ಬಾವುಟ ಹಾರಿಸಿದ್ದಾರೆ.
ಅಲ್ಲಿಂದ ಮಲೆನಾಡು ಪ್ರವೇಶಿಸುವ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಹಳೆ ದೋಸ್ತಿಗಳ ರಾಜಕೀಯ ಕಾದಾಟ ಸದಾ ಸುದ್ದಿಯ ಕೇಂದ್ರ ಬಿಂದುವಾಗಿದೆ.

ಕಳೆದ ವರ್ಷದ ವಿಧಾನ ಸಭೆಯ‌ ಚುನಾವಣೆಯ ಬಿ.ಜೆ.ಪಿ. ಟಿಕೇಟ್ ವಂಚಿತ ಈಶ್ವರಪ್ಪ ಆದ ಅವಮಾನ ನುಂಗಿಕೊಂಡು ನೋವಿನಲ್ಲೂ ನಗುತ್ತಾ ಸುಧಾರಿಸಿಕೊಂಡಿದ್ದರು. ಆದರೆ ಈ ಬಾರಿ ಈಶ್ವರಪ್ಪ ಸಿಟ್ಟಾಗಿ ಮಾಜಿ ಗೆಳೆಯ ಬಿ.ಎಸ್.‌ ಯಡಿಯೂರಪ್ಪನವರ ಕುಟುಂಬದ ವಿರುದ್ಧ ಕೆಂಡ ಕಾರಿ ಬಿ.ಜೆ.ಪಿ.ಯಲ್ಲಿ ಕುಟುಂಬ ರಾಜಕಾರಣ ಮಾಡುತ್ತಿರುವ ಯಡಿಯೂರಪ್ಪನವರನ್ನು ನಿಯಂತ್ರಿಸದ ಮೋದಿ ಉಧಾರತೆಗೆ ಬಂಡೆದ್ದು ಸ್ವತಂತ್ರ ಸ್ಫರ್ಧೆಯ ಸುಳಿವು ನೀಡಿದ್ದಾರೆ.


ಅಲ್ಲಿಂದ ಮಂಗಳೂರಿನತ್ತ ಕಣ್ಣು ಹಾಯಿಸಿದರೆ ಅಲ್ಲಿ ಕೂಡಾ ಸಂಘ ನಿಷ್ಟರು ಇತ್ತೀಚಿನ ಬಿ.ಜೆ.ಪಿ. ರಾಜಕಾರಣ, ಟಿಕೆಟ್‌ ಹಂಚಿಕೆಗಳ ಬಗ್ಗೆ ಸಮಾಧಾನ ಕಳೆದುಕೊಂಡು ಮಾತನಾಡಿದ್ದಾರೆ. ನಳಿನ್‌ ಕುಮಾರ್‌ ಕಟೀಲು ಬದಲು ಹೊಸಮುಖಕ್ಕೆ ಮಣೆಹಾಕಿರುವ ಬಿ.ಜೆ.ಪಿ. ನಿರ್ಧಾರಕ್ಕೆ ನಳಿನ್ ಕಟೀಲು ‌ಪಕ್ಷದ ವಿರುದ್ಧ ಸಮರ ಸಾರದಿದ್ದರೂ ಅಲ್ಲಿಯ ಹಳೆಮುಖಗಳು ತಕರಾರು ಎತ್ತಿದ್ದಾರೆ.
ದಕ್ಷಿಣ ಕನ್ನಡದೊಂದಿಗೆ ಈ ಬಾರಿ ಉತ್ತರ ಕನ್ನಡದಲ್ಲಿ ಕೂಡಾ ಹಿರಿಯ ಸಂಸದ ಅನಂತಕುಮಾರ ಹೆಗಡೆಯವರಿಗೆ ಟಿಕೆಟ್‌ ಇಲ್ಲ ಎನ್ನುತ್ತಿರುವುದು ಹೊಸ ಬೆಳವಣಿಗೆಗಳಿಗೆ ಕಾರಣವಾಗಿದೆ.

ಅನಂತಕುಮಾರ ಹೆಗಡೆ ಕಳೆದ ನಾಲ್ಕು ವರ್ಷಗಳಿಂದ ನೇಪಥ್ಯದಲ್ಲಿದ್ದು ಈಗ ನಾನೇ ಅಭ್ಯರ್ಥಿ ಎನ್ನುವಂತೆ ಕ್ಷೇತ್ರ ಸುತ್ತಿದ್ದರು. ಆದರೆ ಈ ಬಾರಿ ಅನಂತಕುಮಾರ ಹೆಗಡೆ ಯೋಜನೆ ತಲೆಕೆಳಕಾಗಿದೆ. ಅನಂತಕುಮಾರ ಬದಲು ಹಿರಿಯ ನಾಯಕ ಮಾಜಿ ಸ್ಫೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅಥವಾ ಚಕ್ರವರ್ತಿ ಸೂಲಿಬೆಲೆಗೆ ಟಿಕೇಟ್‌ ಎನ್ನುತ್ತಿರುವಂತೆ ಅನಂತಕುಮಾರ ಮೌನಕ್ಕೆ ಶರಣಾಗಿದ್ದಾರೆ. ಇದರ ಮಧ್ಯೆ ಕುಮಾರ ಬಂಗಾರಪ್ಪನವರನ್ನು ಉತ್ತರ ಕನ್ನಡ ಜಿಲ್ಲೆಯಿಂದ ಅಭ್ಯರ್ಥಿ ಮಾಡಲು ಬಿ.ಜೆ.ಪಿ. ಮತ್ತು ಕಾಂಗ್ರೆಸ್‌ ಪಕ್ಷಗಳು ಸಂಪರ್ಕಿಸಿವೆ ಎನ್ನಲಾಗುತ್ತಿದೆ!


ತಮ್ಮ ವಿರೋಧಿಗಳಾದ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಚಕ್ರವರ್ತಿ ಸೂಲಿಬೆಲೆ ಬದಲು ತಮ್ಮ ಸಂಬಂಧಿ ರಾಮಕೃಷ್ಣ ಹೆಗಡೆ ಕುಟುಂಬದ ಡಾ. ಶಶಿಭೂಷಣ ಹೆಗಡೆಯವರಿಗೆ ಟಿಕೇಟ್‌ ನೀಡಲು ಅನಂತಕುಮಾರ್‌ ಸೂಚಿಸಿದ್ದಾರಂತೆ. ಅನಂತಕುಮಾರ ಸೂಚನೆಯನ್ನು ಪಕ್ಷ ಒಪ್ಪಿಕೊಳ್ಳುವ ಸಾಧ್ಯತೆ ಕಡಿಮೆ ಆಗ ಮತ್ತದೇ ಕಾಗೇರಿ ವಿಶ್ವೇಶ್ವರ ಹೆಗಡೆ ಅಥವಾ ಚಕ್ರವರ್ತಿ ಸೂಲಿಬೆಲೆ, ಮಾಜಿ ಸಚಿವ ಕುಮಾರಬಂಗಾರಪ್ಪ ಅಭ್ಯರ್ಥಿಯಾಗುತ್ತಾರೆ. ಇವರೆಲ್ಲ ರೂ ಈ ಕ್ಷೇತ್ರಕ್ಕೆ ಹೊಸ ಮುಖಗಳು. ಕಾಗೇರಿ ಶಿರಸಿ ಕ್ಷೇತ್ರಕ್ಕೆ ಸೀಮಿತವಾಗಿದ್ದ ಹಿರಿಯ ನಾಯಕ, ಚಕ್ರವರ್ತಿ ಸೂಲಿಬೆಲೆ ಸ್ಥಳೀಯವಾಗಿ ಜನಪ್ರೀಯರಲ್ಲದ ಪ್ರಚಾರಕ. ಕುಮಾರ ಬಂಗಾರಪ್ಪ ಹೊರಗಿನವರು.


ಈ ಸ್ಥಿತಿಯಲ್ಲಿ ಕಾಂಗ್ರೆಸ್ ಎದುರಿಸಲು ಮೋದಿ ಅಲೆ ನೆರವಾಗುವುದು ಕಷ್ಟ. ಹೀಗೆ ಬಿ.ಜೆ.ಪಿ. ಯ ಭದ್ರ ಕೋಟೆಗಳಂತಿದ್ದ ಮಲೆನಾಡು ಕರಾವಳಿಯ ಇನ್ನೊಂದು ಕ್ಷೇತ್ರ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಸಜ್ಜನ, ಸರಳ ನಾಯಕ ಶ್ರೀನಿವಾಸ್‌ ಪೂಜಾರಿ ಬಿ.ಜೆ.ಪಿ. ಅಭ್ಯರ್ಥಿ ಅಲ್ಲಿಕೂಡಾ ಪರಿಸ್ಥಿತಿ ಬೂದಿಮುಚ್ಚಿದ ಕೆಂಡವೇ. ಶೋಭಾ ಕರಂದ್ಲಾಜೆ ವಿರುದ್ಧ ಶೀಥಲ ಸಮರ ಸಾರಿದ್ದ ಕೆಲವು ಪ್ರಮುಖ ನಾಯಕರು ಶ್ರೀನಿವಾಸ ಪೂಜಾರಿ ಪರ ಕೆಲಸಮಾಡುವುದು ಅನುಮಾನ. ನೆರೆ ಹೊರೆಯ ಕ್ಷೇತ್ರಗಳಂತೆ ಇಲ್ಲಿಯೂ ಅಸಮಧಾನದ ಹೊಗೆ ಬಂಡಾಯದ ಬೆಂಕಿಯಾದರೆ ಬಿ.ಜೆ.ಪಿ. ನಿರೀಕ್ಷೆ ಸುಳ್ಳಾಗುವ ಸಾಧ್ಯತೆಗಳೇ ಹೆಚ್ಚು. ಹೊಸ ಸುದ್ದಿ ಎಂದರೆ ಬಿ.ಜೆ.ಪಿ. ನಾಯಕ ಸದಾನಂದ ಗೌಡ ಈ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿ ಎನ್ನಲಾಗುತ್ತಿದೆ!


ಸದ್ಯಕ್ಕೆ ಬಿ.ಜೆ.ಪಿ. ಅಭ್ಯರ್ಥಿಗಳ  ಘೊಷಣೆಯ ನಂತರದ ಸ್ಥಿತಿ ಇದು. ಇದರ ನಂತರ ಕಾಂಗ್ರೆಸ್‌ ಅಭ್ಯರ್ಥಿಗಳ ಆಯ್ಕೆ ನಂತರ ಈ ರೀತಿ ಅಸಮಾಧಾನ ಭುಗಿಲೇಳುವ ಅವಕಾಶಗಳಿಲ್ಲ, ಯಾಕೇಂದರೆ ಕಾಂಗ್ರೆಸ್‌ ನಲ್ಲಿ ಈ ರೀತಿ ನಾಯಕತ್ವದ ಸ್ಫರ್ಧೆ, ಪೈಪೋಟಿ ಇಲ್ಲ.
ಚುನಾವಣೆ ಘೋಷಣೆಯ ಮೊದಲ ವಾರದಲ್ಲಿ ಈ ಸ್ಥಿತಿಯಾದರೆ ಇನ್ನೂ ಒಂದೂವರೆ ತಿಂಗಳ ಅವಧಿಯಲ್ಲಿ ಏನಾಗುವುದೋ ಎಂಬುದನ್ನು ಈಗಲೇ ಹೇಳುವುದು ಕಷ್ಟ. ಆದರೆ ಇದೇ ಮೊದಲ ಬಾರಿ ಬಿ.ಜೆ.ಪಿ. ಈ ಪ್ರಮಾಣದಲ್ಲಿ ಆಂತರಿಕ ವಿರೋಧ,ಸಂಘರ್ಷ ಕ್ಕೆ ತುತ್ತಾಗಿದೆ. ಈ ಉರಿಯಲ್ಲೂ ಮೈ ಕಾಯಿಸಿಕೊಳ್ಳದಿದ್ದರೆ ಕಾಂಗ್ರೆಸ್‌ ಕೊಟ್ಟ ಕುದುರೆ ಏರದ ಧೀರನಂತಾಗುವುದಂತೂ ಸತ್ಯ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *