ಉರಿ ಕೆಂಡವಾದ ಮಲೆನಾಡ ರಾಜಕೀಯ…


೨೦೨೪ ರ ಮೊದಲು ಬಿ.ಜೆ.ಪಿ.ಯ ಪ್ರಯೋಗಶಾಲೆಯಂತಾಗಿದ್ದ ಕರಾವಳಿ ಮಲೆನಾಡಿನಲ್ಲಿ ಈ ವರ್ಷ ಉರಿಬಿಸಿಲಿನೊಂದಿಗೆ ರಾಜಕೀಯ ಕಾವು ಪ್ರಾರಂಭವಾಗಿದೆ. ಮಧ್ಯ ಕರ್ನಾಟಕ ದಾವಣಗೆರೆಯಲ್ಲಿ ಸಿದ್ದೇಶ್ವರ ಕುಟುಂಬದ ವಿರುದ್ಧ ಮಾಜಿ ಶಾಸಕ ರೇಣುಕಾಚಾರ್ಯ ಬಂಡಾಯದ ಬಾವುಟ ಹಾರಿಸಿದ್ದಾರೆ.
ಅಲ್ಲಿಂದ ಮಲೆನಾಡು ಪ್ರವೇಶಿಸುವ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಹಳೆ ದೋಸ್ತಿಗಳ ರಾಜಕೀಯ ಕಾದಾಟ ಸದಾ ಸುದ್ದಿಯ ಕೇಂದ್ರ ಬಿಂದುವಾಗಿದೆ.

ಕಳೆದ ವರ್ಷದ ವಿಧಾನ ಸಭೆಯ‌ ಚುನಾವಣೆಯ ಬಿ.ಜೆ.ಪಿ. ಟಿಕೇಟ್ ವಂಚಿತ ಈಶ್ವರಪ್ಪ ಆದ ಅವಮಾನ ನುಂಗಿಕೊಂಡು ನೋವಿನಲ್ಲೂ ನಗುತ್ತಾ ಸುಧಾರಿಸಿಕೊಂಡಿದ್ದರು. ಆದರೆ ಈ ಬಾರಿ ಈಶ್ವರಪ್ಪ ಸಿಟ್ಟಾಗಿ ಮಾಜಿ ಗೆಳೆಯ ಬಿ.ಎಸ್.‌ ಯಡಿಯೂರಪ್ಪನವರ ಕುಟುಂಬದ ವಿರುದ್ಧ ಕೆಂಡ ಕಾರಿ ಬಿ.ಜೆ.ಪಿ.ಯಲ್ಲಿ ಕುಟುಂಬ ರಾಜಕಾರಣ ಮಾಡುತ್ತಿರುವ ಯಡಿಯೂರಪ್ಪನವರನ್ನು ನಿಯಂತ್ರಿಸದ ಮೋದಿ ಉಧಾರತೆಗೆ ಬಂಡೆದ್ದು ಸ್ವತಂತ್ರ ಸ್ಫರ್ಧೆಯ ಸುಳಿವು ನೀಡಿದ್ದಾರೆ.


ಅಲ್ಲಿಂದ ಮಂಗಳೂರಿನತ್ತ ಕಣ್ಣು ಹಾಯಿಸಿದರೆ ಅಲ್ಲಿ ಕೂಡಾ ಸಂಘ ನಿಷ್ಟರು ಇತ್ತೀಚಿನ ಬಿ.ಜೆ.ಪಿ. ರಾಜಕಾರಣ, ಟಿಕೆಟ್‌ ಹಂಚಿಕೆಗಳ ಬಗ್ಗೆ ಸಮಾಧಾನ ಕಳೆದುಕೊಂಡು ಮಾತನಾಡಿದ್ದಾರೆ. ನಳಿನ್‌ ಕುಮಾರ್‌ ಕಟೀಲು ಬದಲು ಹೊಸಮುಖಕ್ಕೆ ಮಣೆಹಾಕಿರುವ ಬಿ.ಜೆ.ಪಿ. ನಿರ್ಧಾರಕ್ಕೆ ನಳಿನ್ ಕಟೀಲು ‌ಪಕ್ಷದ ವಿರುದ್ಧ ಸಮರ ಸಾರದಿದ್ದರೂ ಅಲ್ಲಿಯ ಹಳೆಮುಖಗಳು ತಕರಾರು ಎತ್ತಿದ್ದಾರೆ.
ದಕ್ಷಿಣ ಕನ್ನಡದೊಂದಿಗೆ ಈ ಬಾರಿ ಉತ್ತರ ಕನ್ನಡದಲ್ಲಿ ಕೂಡಾ ಹಿರಿಯ ಸಂಸದ ಅನಂತಕುಮಾರ ಹೆಗಡೆಯವರಿಗೆ ಟಿಕೆಟ್‌ ಇಲ್ಲ ಎನ್ನುತ್ತಿರುವುದು ಹೊಸ ಬೆಳವಣಿಗೆಗಳಿಗೆ ಕಾರಣವಾಗಿದೆ.

ಅನಂತಕುಮಾರ ಹೆಗಡೆ ಕಳೆದ ನಾಲ್ಕು ವರ್ಷಗಳಿಂದ ನೇಪಥ್ಯದಲ್ಲಿದ್ದು ಈಗ ನಾನೇ ಅಭ್ಯರ್ಥಿ ಎನ್ನುವಂತೆ ಕ್ಷೇತ್ರ ಸುತ್ತಿದ್ದರು. ಆದರೆ ಈ ಬಾರಿ ಅನಂತಕುಮಾರ ಹೆಗಡೆ ಯೋಜನೆ ತಲೆಕೆಳಕಾಗಿದೆ. ಅನಂತಕುಮಾರ ಬದಲು ಹಿರಿಯ ನಾಯಕ ಮಾಜಿ ಸ್ಫೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅಥವಾ ಚಕ್ರವರ್ತಿ ಸೂಲಿಬೆಲೆಗೆ ಟಿಕೇಟ್‌ ಎನ್ನುತ್ತಿರುವಂತೆ ಅನಂತಕುಮಾರ ಮೌನಕ್ಕೆ ಶರಣಾಗಿದ್ದಾರೆ. ಇದರ ಮಧ್ಯೆ ಕುಮಾರ ಬಂಗಾರಪ್ಪನವರನ್ನು ಉತ್ತರ ಕನ್ನಡ ಜಿಲ್ಲೆಯಿಂದ ಅಭ್ಯರ್ಥಿ ಮಾಡಲು ಬಿ.ಜೆ.ಪಿ. ಮತ್ತು ಕಾಂಗ್ರೆಸ್‌ ಪಕ್ಷಗಳು ಸಂಪರ್ಕಿಸಿವೆ ಎನ್ನಲಾಗುತ್ತಿದೆ!


ತಮ್ಮ ವಿರೋಧಿಗಳಾದ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಚಕ್ರವರ್ತಿ ಸೂಲಿಬೆಲೆ ಬದಲು ತಮ್ಮ ಸಂಬಂಧಿ ರಾಮಕೃಷ್ಣ ಹೆಗಡೆ ಕುಟುಂಬದ ಡಾ. ಶಶಿಭೂಷಣ ಹೆಗಡೆಯವರಿಗೆ ಟಿಕೇಟ್‌ ನೀಡಲು ಅನಂತಕುಮಾರ್‌ ಸೂಚಿಸಿದ್ದಾರಂತೆ. ಅನಂತಕುಮಾರ ಸೂಚನೆಯನ್ನು ಪಕ್ಷ ಒಪ್ಪಿಕೊಳ್ಳುವ ಸಾಧ್ಯತೆ ಕಡಿಮೆ ಆಗ ಮತ್ತದೇ ಕಾಗೇರಿ ವಿಶ್ವೇಶ್ವರ ಹೆಗಡೆ ಅಥವಾ ಚಕ್ರವರ್ತಿ ಸೂಲಿಬೆಲೆ, ಮಾಜಿ ಸಚಿವ ಕುಮಾರಬಂಗಾರಪ್ಪ ಅಭ್ಯರ್ಥಿಯಾಗುತ್ತಾರೆ. ಇವರೆಲ್ಲ ರೂ ಈ ಕ್ಷೇತ್ರಕ್ಕೆ ಹೊಸ ಮುಖಗಳು. ಕಾಗೇರಿ ಶಿರಸಿ ಕ್ಷೇತ್ರಕ್ಕೆ ಸೀಮಿತವಾಗಿದ್ದ ಹಿರಿಯ ನಾಯಕ, ಚಕ್ರವರ್ತಿ ಸೂಲಿಬೆಲೆ ಸ್ಥಳೀಯವಾಗಿ ಜನಪ್ರೀಯರಲ್ಲದ ಪ್ರಚಾರಕ. ಕುಮಾರ ಬಂಗಾರಪ್ಪ ಹೊರಗಿನವರು.


ಈ ಸ್ಥಿತಿಯಲ್ಲಿ ಕಾಂಗ್ರೆಸ್ ಎದುರಿಸಲು ಮೋದಿ ಅಲೆ ನೆರವಾಗುವುದು ಕಷ್ಟ. ಹೀಗೆ ಬಿ.ಜೆ.ಪಿ. ಯ ಭದ್ರ ಕೋಟೆಗಳಂತಿದ್ದ ಮಲೆನಾಡು ಕರಾವಳಿಯ ಇನ್ನೊಂದು ಕ್ಷೇತ್ರ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಸಜ್ಜನ, ಸರಳ ನಾಯಕ ಶ್ರೀನಿವಾಸ್‌ ಪೂಜಾರಿ ಬಿ.ಜೆ.ಪಿ. ಅಭ್ಯರ್ಥಿ ಅಲ್ಲಿಕೂಡಾ ಪರಿಸ್ಥಿತಿ ಬೂದಿಮುಚ್ಚಿದ ಕೆಂಡವೇ. ಶೋಭಾ ಕರಂದ್ಲಾಜೆ ವಿರುದ್ಧ ಶೀಥಲ ಸಮರ ಸಾರಿದ್ದ ಕೆಲವು ಪ್ರಮುಖ ನಾಯಕರು ಶ್ರೀನಿವಾಸ ಪೂಜಾರಿ ಪರ ಕೆಲಸಮಾಡುವುದು ಅನುಮಾನ. ನೆರೆ ಹೊರೆಯ ಕ್ಷೇತ್ರಗಳಂತೆ ಇಲ್ಲಿಯೂ ಅಸಮಧಾನದ ಹೊಗೆ ಬಂಡಾಯದ ಬೆಂಕಿಯಾದರೆ ಬಿ.ಜೆ.ಪಿ. ನಿರೀಕ್ಷೆ ಸುಳ್ಳಾಗುವ ಸಾಧ್ಯತೆಗಳೇ ಹೆಚ್ಚು. ಹೊಸ ಸುದ್ದಿ ಎಂದರೆ ಬಿ.ಜೆ.ಪಿ. ನಾಯಕ ಸದಾನಂದ ಗೌಡ ಈ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿ ಎನ್ನಲಾಗುತ್ತಿದೆ!


ಸದ್ಯಕ್ಕೆ ಬಿ.ಜೆ.ಪಿ. ಅಭ್ಯರ್ಥಿಗಳ  ಘೊಷಣೆಯ ನಂತರದ ಸ್ಥಿತಿ ಇದು. ಇದರ ನಂತರ ಕಾಂಗ್ರೆಸ್‌ ಅಭ್ಯರ್ಥಿಗಳ ಆಯ್ಕೆ ನಂತರ ಈ ರೀತಿ ಅಸಮಾಧಾನ ಭುಗಿಲೇಳುವ ಅವಕಾಶಗಳಿಲ್ಲ, ಯಾಕೇಂದರೆ ಕಾಂಗ್ರೆಸ್‌ ನಲ್ಲಿ ಈ ರೀತಿ ನಾಯಕತ್ವದ ಸ್ಫರ್ಧೆ, ಪೈಪೋಟಿ ಇಲ್ಲ.
ಚುನಾವಣೆ ಘೋಷಣೆಯ ಮೊದಲ ವಾರದಲ್ಲಿ ಈ ಸ್ಥಿತಿಯಾದರೆ ಇನ್ನೂ ಒಂದೂವರೆ ತಿಂಗಳ ಅವಧಿಯಲ್ಲಿ ಏನಾಗುವುದೋ ಎಂಬುದನ್ನು ಈಗಲೇ ಹೇಳುವುದು ಕಷ್ಟ. ಆದರೆ ಇದೇ ಮೊದಲ ಬಾರಿ ಬಿ.ಜೆ.ಪಿ. ಈ ಪ್ರಮಾಣದಲ್ಲಿ ಆಂತರಿಕ ವಿರೋಧ,ಸಂಘರ್ಷ ಕ್ಕೆ ತುತ್ತಾಗಿದೆ. ಈ ಉರಿಯಲ್ಲೂ ಮೈ ಕಾಯಿಸಿಕೊಳ್ಳದಿದ್ದರೆ ಕಾಂಗ್ರೆಸ್‌ ಕೊಟ್ಟ ಕುದುರೆ ಏರದ ಧೀರನಂತಾಗುವುದಂತೂ ಸತ್ಯ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *