ದೆಹಲಿಯಲ್ಲಿ ಪ್ರತಿಪಕ್ಷಗಳ ಸಮಾವೇಶ: ಚುನಾವಣಾ ಆಯೋಗಕ್ಕೆ INDIA ಮೈತ್ರಿಕೂಟದ ನ 5 ಬೇಡಿಕೆಗಳು ಇಂತಿವೆ…

ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಪ್ರತಿಪಕ್ಷಗಳ ಸಮಾವೇಶ ಇಂದು ನಡೆದಿದ್ದು, ಶಿವಸೇನೆ (ಉದ್ಧವ್ ಠಾಕ್ರೆ ಬಣ) ಆಮ್ ಆದ್ಮಿ ಪಕ್ಷ ಸೇರಿದಂತೆ ಪ್ರತಿಪಕ್ಷಗಳ ನಾಯಕರು ಒಗ್ಗಟ್ಟು ಪ್ರದರ್ಶಿಸಿದರು.

ವಿಪಕ್ಷಗಳ ನಾಯಕರ ಸಭೆ

ವಿಪಕ್ಷಗಳ ನಾಯಕರ ಸಭೆ

ನವದೆಹಲಿ: ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಪ್ರತಿಪಕ್ಷಗಳ ಸಮಾವೇಶ ಇಂದು ನಡೆದಿದ್ದು, ಶಿವಸೇನೆ (ಉದ್ಧವ್ ಠಾಕ್ರೆ ಬಣ) ಆಮ್ ಆದ್ಮಿ ಪಕ್ಷ ಸೇರಿದಂತೆ ಪ್ರತಿಪಕ್ಷಗಳ ನಾಯಕರು ಒಗ್ಗಟ್ಟು ಪ್ರದರ್ಶಿಸಿದರು.

ವಿಪಕ್ಷಗಳ ನಾಯಕರ ಸಭೆ

ಮದ್ಯ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಸಿಎಂ ಕೇಜ್ರಿವಾಲ್ ಹಾಗೂ ಭೂಹಗರಣದ ಸಂಬಂಧ ಬಂಧನಕ್ಕೆ ಒಳಗಾಗಿರುವ ಜಾರ್ಖಂಡ್ ನ ಮಾಜಿ ಸಿಎಂ ಹೇಮಂತ್ ಸೊರೇನ್ ಅವರನ್ನು ಬಂಧಮುಕ್ತಗೊಳಿಸಬೇಕೆಂದು ಪ್ರತಿಪಕ್ಷಗಳು ಈ ಸಭೆಯಲ್ಲಿ ಒತ್ತಾಯಿಸಿವೆ.

ದೇಶದ ಪ್ರಜಾಪ್ರಭುತ್ವದ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ನಾಯಕರು, ಕೇಂದ್ರ ತನಿಖಾ ಸಂಸ್ಥೆಗಳ ಮೂಲಕ ಬಿಜೆಪಿ ಪ್ರತಿಪಕ್ಷಗಳನ್ನು ನಾಶಮಾಡುತ್ತಿದೆ ಎಂದು ಆರೋಪಿಸಿದರು. ಈ ಸಮಾವೇಶದ ಬಗ್ಗೆ ಲೇವಡಿ ಮಾಡಿರುವ ಪ್ರತಿಪಕ್ಷ ಬಿಜೆಪಿ, ರ್ಯಾಲಿಯು ಪ್ರಜಾತಂತ್ರವನ್ನು ಉಳಿಸುವ ಉದ್ದೇಶದಿಂದ ನಡೆದಿಲ್ಲ ಬದಲಾಗಿ “ಕುಟುಂಬವನ್ನು ಉಳಿಸಿ” ಮತ್ತು “ಭ್ರಷ್ಟಾಚಾರವನ್ನು ಮರೆಮಾಡಿ” ಎಂಬ ಉದ್ದೇಶದಿಂದ ನಡೆದಿದೆ ಎಂದು ಹೇಳಿದೆ.

ವಿಪಕ್ಷಗಳ ನಾಯಕರ ಸಭೆ

ಇದೇ ವೇಳೆ ಕಾಂಗ್ರೆಸ್ ನ ನಾಯಕಿ ಪ್ರಿಯಾಂಕ ವಾಧ್ರ ಪ್ರತಿಪಕ್ಷಗಳ 5 ಬೇಡಿಕೆಗಳನ್ನು ಚುನಾವಣಾ ಆಯೋಗದ ಮುಂದೆ ಇಟ್ಟಿದೆ.

ಬೇಡಿಕೆಗಳೇನು ಎಂದರೆ…

1. ಎಲ್ಲರಿಗೂ ಸಮಾನ ಅವಕಾಶಗಳಿರುವುದನ್ನು ಚುನಾವಣಾ ಆಯೋಗ ಖಾತ್ರಿಪಡಿಸಿಕೊಳ್ಳಬೇಕು.

2. ಜಾರಿ ನಿರ್ದೇಶನಾಲಯ, ಸಿಬಿಐ, ಐಟಿ ಗಳು ವಿಪಕ್ಷ ನಾಯಕರನ್ನು ಗುರಿಯಾಗಿಸಿಕೊಳ್ಳುತ್ತಿರುವುದನ್ನು ತಡೆಯಬೇಕು

3. ಹೇಮಂತ್ ಸೊರೇನ್ ಹಾಗೂ ಅರವಿಂದ್ ಕೇಜ್ರಿವಾಲ್ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು

4. ವಿಪಕ್ಷಗಳನ್ನು ಆರ್ಥಿಕವಾಗಿ ದುರ್ಬಲಗೊಳಿಸುವ ಯತ್ನಗಳನ್ನು ನಿಲ್ಲಿಸಬೇಕು

5. ಚುನಾವಣಾ ಬಾಂಡ್ ಗಳ ಮೂಲಕ ಬಿಜೆಪಿ ಹಣ ಗಳಿಸಿರುವುದರ ಬಗ್ಗೆ ಎಸ್ ಐಟಿ ರಚಿಸಿ ತನಿಖೆ ನಡೆಸಬೇಕು (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಭಿತ್ತಿಯ ಚಿತ್ರ ಬಿ. ಡಿ. ಹಿರೇಮಠ

ಬಿ. ಡಿ. ಹಿರೇಮಠ… ಯಾರಿಗೆ ಗೊತ್ತಿಲ್ಲ ಹೇಳಿ….೨೦ ವರ್ಷಗಳ ಹಿಂದೆ ಹೈ ಕೋರ್ಟ್ ಧಾರವಾಡ ವಿಭಾಗೀಯ ಪೀಠಕ್ಕಾಗಿ ಹೋರಾಡಿ ಮನೆ ಮಾತಾಗಿದ್ದ ಬಿಡಿ ಹಿರೇಮಠ...

ಶಾಲೆಗೆ ಹೋಗದ ರಾಜ!

ಅಕ್ಷರ ಕಲಿಯದೇ ಆಕಾಶದೆತ್ತರಕ್ಕೆ ಬೆಳೆದ ಅಪರೂಪದ ನಟ ಅನರ್ಘ್ಯ ರತ್ನ. ಮತ್ತೇ ಶಾಲೆಗೆ ಮುಖ ತೋರಿಸಲೇ ಇಲ್ಲ.

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

Latest Posts

ಭಿತ್ತಿಯ ಚಿತ್ರ ಬಿ. ಡಿ. ಹಿರೇಮಠ

ಬಿ. ಡಿ. ಹಿರೇಮಠ… ಯಾರಿಗೆ ಗೊತ್ತಿಲ್ಲ ಹೇಳಿ….೨೦ ವರ್ಷಗಳ ಹಿಂದೆ ಹೈ ಕೋರ್ಟ್ ಧಾರವಾಡ ವಿಭಾಗೀಯ ಪೀಠಕ್ಕಾಗಿ ಹೋರಾಡಿ ಮನೆ ಮಾತಾಗಿದ್ದ ಬಿಡಿ ಹಿರೇಮಠ ಅಂದರೆ ಎಲ್ಲರ ಭಿತ್ತಿಯ ಚಿತ್ರ… ಅವಳಿ ನಗರ ಹುಬ್ಬಳ್ಳಿ – ಧಾರವಾಡದಲ್ಲಿ ಉತ್ತರ ಕರ್ನಾಟಕ ಅಂದರೆ…. ಅದು ಪಾಪು, ಚಂಪಾ… ಪಾವಟೆ, ನಂತರದ ದೊಡ್ಡ ಹೆಸರು. ಅಧಿಕಾರ ಇಲ್ಲದೆ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *