ನೂತನ, ವಿನೂತನ ಬೀಳ್ಕೊಡುಗೆ…..

… ಇಂದು ಸರ್ಕಾರಿ ಶಾಲೆ ಬಗ್ಗೆ ತಾತ್ಸಾರ ಮನೋಭಾವನೆ ತೋರುತ್ತಾ ಖಾಸಗಿ ಶಾಲೆ ಕಡೆ ಮುಖ ಮಾಡುವುದು ಸರ್ವೇ ಸಾಮಾನ್ಯ. ಆದರೆ ಖಾಸಗಿ ಶಾಲೆಗೂ ಮಿಗಿಲಾಗಿ ಇಂದು ಸರ್ಕಾರಿ ಶಾಲೆ ಹೆಚ್ಚು ಹೆಚ್ಚು ಆಕರ್ಷಣೆಯ ಕೇಂದ್ರ ಆಗುತ್ತಿದೆ.ಇದಕ್ಕೆ ಉದಾಹರಣೆ ಎಂಬಂತೆ ಸಿದ್ಧಾಪುರ ತಾಲೂಕಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮಳಲವಳ್ಳಿ ಹೊಸ ಪ್ರಯೋಗಕ್ಕೆ ಮುನ್ನುಡಿ ಬರೆದಿದೆ.ಈ ಶಾಲೆ ಮೊದಲು ಅಷ್ಟು ಗಮನ ಸೆಳೆದಿರಲಿಲ್ಲ.ಕ್ರಮೇಣ ಪಾಲಕರು, ಶಿಕ್ಷಕರ ಆಸಕ್ತಿ ಹೊಸತನಕ್ಕೆ ದಾರಿ ಆಗುತ್ತ ಸಾಗಿತು.ಮುಖ್ಯ ಶಿಕ್ಷಕರಾಗಿ ಕಾರ್ಯಭಾರ ವಹಿಸಿಕೊಂಡ ಎಂ.ಡಿ.ನಾಯ್ಕ ರ ಕ್ರಿಯಾಶೀಲತೆ ಇಡೀ ಶಾಲಾ ವಾತಾವರಣ ಬದಲಿಸಿತು.

ಸುಮಾರು ದಾನಿಗಳನ್ನು ಹುಡುಕಿ ಚಿತ್ರಣ ಬದಲಾಯಿಸಿದ್ದು ಹೆಮ್ಮೆಯ ಸಂಗತಿ.ಇವರಿಗೆ ಶಿಕ್ಷಕಿ ಶ್ಯಾಮಲಾ.ಪಟಗಾರ, ಎಸ್.ಡಿ.ಎಂ.ಸಿ.,ಎಲ್ಲಾ ಪದಾಧಿಕಾರಿಗಳ ಸಂಪೂರ್ಣ ಸಹಕಾರ ಹಾಗೂ ಊರಿನ ಗಣ್ಯರ ಗ್ರಾಮಪಂಚಾಯತ ಸದಸ್ಯರ ತೊಡಗಿಸಿಕೊಳ್ಳುವಿಕೆ ಮಾದರಿ ಆಯಿತು.ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ನೂತನ ರೀತಿಯಲ್ಲಿ ಐದನೇ ತರಗತಿಯ ಮಕ್ಕಳಿಗೆ ಬೀಳ್ಕೊಟ್ಟಿದ್ದು ವಿನೂತನ ಪ್ರಯೋಗ. ಬಹುಶಃ ಜಿಲ್ಲೆಯ ಸರ್ಕಾರಿ ಶಾಲೆಯಲ್ಲೇ ಎರಡನೆಯದು.ಈ ಮೊದಲು ಶಿರಸಿ ತಾಲೂಕಿನ ದಾನಂದಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೊದಲ ಪ್ರಯೋಗ ಗೀತಾಂಜಲಿ ಉದಯ ಭಟ್ ಇವರಿಂದ‌ ನಡೆದು ಮಾದರಿ ಆಗಿತ್ತು.ಮಕ್ಕಳಿಗೆ ವಿಶೇಷವಾಗಿ ತಮ್ಮ ಸ್ವಂತ ಖರ್ಚಿನಲ್ಲಿ ಮುಖ್ಯ ಶಿಕ್ಷಕ ಎಂ.ಡಿ.ನಾಯ್ಕ ಹೊಸ ರೀತಿಯಲ್ಲಿ ಉಡುಪು, ಟೋಪಿ ಹಾಗೂ ಪ್ರಶಸ್ತಿ ಸಿದ್ದಪಡಿಸಿ, ಪಾಲಕರ ಸಮ್ಮುಖದಲ್ಲಿ ಪ್ರಶಸ್ತಿ ಪ್ರಧಾನ ಮಾಡಿ.ಉಜ್ವಲ ಭವಿಷ್ಯವನ್ನು ರೂಪಿಸುವ ಜ್ಯೋತಿ ಸಾಂಕೇತಿಕವಾಗಿ ನೀಡಿ ಹರಸಿದರು.

ಇಂತಹ ಕಾರ್ಯಕ್ರಮ ಸರ್ಕಾರಿ ಶಾಲೆಯ ಬಗ್ಗೆ ಗೌರವ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿ ಉಳಿದವರಿಗೂ ಮಾದರಿ ಆಗಲಿ ಎಂದು ಆಶಿಸೋಣ. ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರು, ಪಧಾದಿಕಾರಿಗಳು ಹಾಜರಿದ್ದರು. ಉತ್ತಮ ಗುಣಮಟ್ಟದ ಭೋಜನ ನೀಡುವ ಮೂಲಕ ಮಕ್ಕಳಿಗೆ ಸಂತಸದ ಬೀಳ್ಕೊಡುಗೆ ದೊರೆಯಿತು.ಭೋಜನದ ವ್ಯವಸ್ಥೆ ಶಿಕ್ಷಕಿ ಶ್ಯಾಮಲಾ.ಪಟಗಾರ ವಹಿಸಿಕೊಂಡಿದ್ದರು.ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುವ ಕಾರಣ ಇಲಾಖೆಯ ಅಧಿಕಾರಿಗಳು,ಇತರೆ ಗಣ್ಯರನ್ನ ಆಹ್ವಾ ನಿಸಲು ಸಾಧ್ಯ ಆಗಿಲ್ಲ ಎನ್ನುತ್ತಾರೆ ಮುಖ್ಯ ಶಿಕ್ಷಕ ಮಕ್ಕಳು ತಮ್ಮ ತಂದೆ ತಾಯಿಗಳ ಪಾದ ಪೂಜೆ ಮಾಡುವ ಮೂಲಕ ಹೆಚ್ಚಿನ ಮೆರಗು ನೀಡುವ ಮೂಲಕ ಮಾದರಿ ಆಯಿತು. ಇಂತಹ ಶಿಕ್ಷಕರು ಉಳಿದವರಿಗೂ ಮಾದರಿ ಎನ್ನುತ್ತಾರೆ ಪಾಲಕ ವರ್ಗ.ಮಕ್ಕಳು ತಮ್ಮ ಅನಿಸಿಕೆ ವ್ಯಕ್ತ ಪಡಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *