ಉತ್ತರ ಕನ್ನಡ ಮರಳು ಮಾಫಿಯಾ ಹೊರಗೆಳೆದ ಕಡಕ್‌ ಅಧಿಕಾರಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಭಾವಿ ಅಧಿಕಾರಿ ವರ್ಗ, ರಾಜಕೀಯ ಮುಖಂಡರ ಬೆಸುಗೆಯಿಂದ ನಡೆಯುತಿದ್ದ ಮರಳುಮಾಫಿಯಾವನ್ನು ಹೊರಗೆಳೆಯುವಲ್ಲಿ ಜಿಲ್ಲೆಯ ಹೊಸ ಅಧಿಕಾರಿಣಿಯೊಬ್ಬರು ಯಶಸ್ವಿಯಾಗಿರುವ ಪ್ರಕರಣ ಚರ್ಚೆಗೆ ಕಾರಣವಾಗಿದೆ.

ಕೆಲವು ರಾಜಕೀಯ ನಾಯಕರ ಪೃಪಾಕಟಾಕ್ಷದಿಂದ ಕೆಲವು ಅಕ್ರಮ ಚಟುವಟಿಕೆಗಳು ನಡೆಯುವುದು ಮಾಮೂಲು ಆದರೆ ಈ ಪ್ರಕರಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳನ್ನೇ ಬಳಸಿ ಕೆಲವು ಚತುರರು ಹಗಲು ದರೋಡೆ ಮಾಡುತ್ತಿರುವುದು ಬೆಳಕಿಗೆ ಬಂದಂತಾಗಿದೆ.

ಶಿರಸಿಯ ಯುವ ರಾಜಕಾರಣಿಯೊಬ್ಬ ಹೊನ್ನಾವರ ಮೂಲದ ಪೋಲೀಸ್‌ ಪೇದೆ ಸೇರಿದ ನಾಲ್ಕೈದು ಜನರ ಕೂಟ ಸರ್ಕಾರಕ್ಕೆ ರಾಯಲ್ಟಿ ಕೊಡದೆ ರಾಜಾರೋಶವಾಗಿ ನಾಲ್ಕೈದು ವರ್ಷಗಳಿಂದ ಹೊನ್ನಾವರ ತಾಲೂಕಿನಿಂದ ಹೊರ ಜಿಲ್ಲೆಗಳಿಗೆ ಮರಳು ಸಾಗಾಟ ಮಾಡುತಿದ್ದರು.

ಈ ಅಕ್ರಮ ದಂಧೆಯ ನೆರವಿನಿಂದ ಪ್ರಭಾವಿ ರಾಜಕಾರಣಿಗಳ ಸ್ನೇಹ ಸಂಪಾದಿಸಿ ಪಕ್ಷ, ವೇದಿಕೆಯಲ್ಲಿ ಸ್ಥಾನ ಗಿಟ್ಟಿಸುತಿದ್ದ ಯುವ ರಾಜಕಾರಣಿ ರಾಜ್ಯದ ಉಪಮುಖ್ಯಮಂತ್ರಿಗಳ ಹೆಸರು ಹೇಳಿಕೊಂಡು ಅಧಿಕಾರಿಗಳು, ಕೆಲವು ಮುಖಂಡರಿಗೂ ಹೆದರಿಸುತ್ತಿರುವ ಬಗ್ಗೆ ಈಗಲೂ ಗುಸು ಗುಸು ಕೇಳಿ ಬರುತ್ತಿದೆ.

ಶಿರಸಿಯ ಇದೇ ಯುವ ಮುಖಂಡ ಸ್ಥಳೀಯ ಅಧಿಕಾರಿಗಳನ್ನು ದುರ್ಬಳಕೆ ಮಾಡಿದರೆ ತನ್ನ ಖಾಸಗಿ ಅಕ್ರಮಗಳಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ನೆರವು ಪಡೆದು ಸ್ಥಳೀಯ ಜನಪ್ರತಿನಿಧಿಗಳು ಸರ್ಕಾರಕ್ಕೆ ಕೆಟ್ಟ ಹೆಸರು ತರುತಿದ್ದಾನೆ ಎನ್ನುವ ಗುರುತರ ಆರೋಪಗಳಿವೆ.

ಈಗಲೂ ಸರ್ಕಾರ, ಉಪಮುಖ್ಯಮಂತ್ರಿಗಳ ಹೆಸರು ಹೇಳಿಕೊಂಡು ತನ್ನ ವ್ಯವಹಾರಕ್ಕೆ ಅನುಕೂಲಮಾಡಿಕೊಡಲು ಶ್ರಮಿಸಿದ ಈ ಯುವ ಅಧ್ಯಕ್ಷನಿಗೆ ಚುನಾವಣಾ ನೀತಿ ಸಂಹಿತೆ ಬಗನಿ ಗೂಟ ಜಡಿದಿದೆ. ಜಿಲ್ಲೆಯ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಬಂದ ಹೊಸ ಅಧಿಕಾರಿ ಇಂದು ಮುಂಜಾನೆ ಈ ಯುವ ಮುಖಂಡನ ನವರಂಧ್ರಗಳಲ್ಲಿ ನೀರು ಜಿನುಗುವಂತೆ ಮಾಡಿದ್ದಾರೆ.

ತನ್ನ ಎರಡು ವಾಹನ ಜೊತೆಗೆ ಪೊಲೀಸ್‌ ಇಲಾಖೆಯ ಸಿಬ್ಬಂದಿಗಳ ಎರಡು ಬೇನಾಮಿ ವಾಹನ ಇವುಗಳೊಂದಿಗೆ ಇವರ ಸ್ನೇಹಿತರ ಎರಡು ಲಾರಿಗಳಿಗೆ ಸ್ಕೆಚ್‌ ಹಾಕಿದ್ದ ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳಿಗೆ ತನ್ನ ರಾಜಕೀಯ ಶಕ್ತಿ ತೋರಿಸಲು ಹೋದ ಈ ಮುಖಂಡನಿಗೆ ಅಧಿಕಾರಿಗಳು ನೀನ್ಯಾರಾದರೇನು? ಸರ್ಕಾರ, ನಿಯಮಗಳ ಮುಂದೆ ನಿನ್ನ ಪುಡಿ ರಾಜಕಾರಣ ನಡೆಯಲ್ಲ ಎಂದು ಗದುಮಿದ್ದಾರೆ. ಲಾಗಾಯ್ತಿನ ಚೋರ ಬುದ್ಧಿಯಂತೆ ರಾಜಕಾರಣ ಮಾಡಲು ನೀತಿ ಸಂಹಿತೆ ಅಡ್ಡ ಬಂದಿದೆ. ಸಾವಿರ ಲೆಕ್ಕದಲ್ಲೂ ಮತಗಳಿರದ ಈ ಪುಡಿ ನಾಯಕರ ಅಕ್ರಮ ಚಟುವಟಿಕೆ ಪಕ್ಷ, ಸರ್ಕಾರಕ್ಕೆ ಕೆಟ್ಟ ಹೆಸರು ತರುತ್ತಿರುವ ಬಗ್ಗೆ ಆತಂಕಗೊಂಡಿರುವ ಸ್ವಪಕ್ಷೀಯರು, ವಿರೋಧ ಪಕ್ಷದ ಕೆಲವು ಮುಖಂಡರ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ನಡೆದಿದೆ. ಇವರ ಕುಲಬಾಂಧವರೇ ಇಂಥ ಅಕ್ರಮ ವ್ಯವಹಾರಗಳಿಂದ ಶಿರಸಿ ಶಾಸಕರು, ಸರ್ಕಾರ ಮತ್ತು ಜಿಲ್ಲಾ ಕಾಂಗ್ರೆಸ್‌ ಗಳಿಗೆ ಕಂಟಕಪ್ರಾಯರಾಗಿರುವ ಬಗ್ಗೆ ತೀವ್ರ ವಿರೋಧ ಕೂಡಾ ವ್ಯಕ್ತವಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *