ಬಿಜೆಪಿಯ ಹಿರಿಯ ಮುಖಂಡ ಮಾಲೀಕಯ್ಯ ಗುತ್ತೇದಾರ್, ಮಾಜಿ ಶಾಸಕಿ ಶಾರದಾ ಶೆಟ್ಟಿ ಕಾಂಗ್ರೆಸ್‌’ಗೆ ಸೇರ್ಪಡೆ

ಮಾಜಿ ಸಚಿವ ಹಾಗೂ ಕಲಬುರಗಿಯ ಪ್ರಭಾವಿ ನಾಯಕ ಮಾಲೀಕಯ್ಯ ಗುತ್ತೇದಾರ್ ಹಾಗೂ ಮಾಜಿ ಶಾಸಕಿ ಶಾರದಾ ಶೆಟ್ಟಿಯವರು ಶುಕ್ರವಾರ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದ ಮಾಲೀಕಯ್ಯ ಗುತ್ತೇದಾರ್, ಶಾರದಾ ಶೆಟ್ಟಿ.

ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದ ಮಾಲೀಕಯ್ಯ ಗುತ್ತೇದಾರ್, ಶಾರದಾ ಶೆಟ್ಟಿ.

ಬೆಂಗಳೂರು: ಮಾಜಿ ಸಚಿವ ಹಾಗೂ ಕಲಬುರಗಿಯ ಪ್ರಭಾವಿ ನಾಯಕ ಮಾಲೀಕಯ್ಯ ಗುತ್ತೇದಾರ್ ಹಾಗೂ ಮಾಜಿ ಶಾಸಕಿ ಶಾರದಾ ಶೆಟ್ಟಿಯವರು ಶುಕ್ರವಾರ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇಬ್ಬರೂ ಅಧಿಕೃತವಾಗಿ ಸೇರ್ಪಡೆಯಾದರು.

ಮಾಲೀಕಯ್ಯ ಗುತ್ತೇದಾರ್ ಅಫ್ಜಲ್ ಪುರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾಗಿದ್ದರು. ಮಾಜಿ ಸಚಿವರಾಗಿರುವ ಗುತ್ತೇದಾರ್ ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲೇ ಇದ್ದರು. ಬಳಿಕ ಜಿಲ್ಲೆಯಲ್ಲಿ ರಾಜಕೀಯ ಅಸಮಾಧಾನದಿಂದ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡರು. 2018 ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಎಂವೈ ಪಾಟೀಲ್ ವಿರುದ್ಧ ಸ್ಪರ್ಧಿಸಿ ಸೋತಿದ್ದರು.

ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದ ಮಾಲೀಕಯ್ಯ ಗುತ್ತೇದಾರ್, ಶಾರದಾ ಶೆಟ್ಟಿ.

ಬಿಜೆಪಿಯಲ್ಲಿದ್ದ ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆಯಾಗಲು ಅವರ ಸಹೋದರ ನಿತಿನ್ ಗುತ್ತೇದಾರ್‌ ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡಿರುವುದು ಕಾರಣವಾಗಿದೆ.

ಪಕ್ಷದ ನಾಯಕರ ನಡೆಯಿಂದ ಅಸಮಾಧಾನಗೊಂಡಿದ್ದ ಮಾಲೀಕಯ್ಯ ಗುತ್ತೇದಾರ್‌ ಬಿಜೆಪಿ ನಾಯಕರ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಬಿಜೆಪಿಯ ಭ್ರಷ್ಟಾಚಾರವೇ ಕಾರಣ ಎಂದು ಆರೋಪಿಸಿದ್ದರು. ಅಲ್ಲದೆ, ಈಶ್ವರಪ್ಪ, ಪ್ರತಾಪ ಸಿಂಹ, ಸಂಗಣ್ಣ ಕರಡಿ ಅವರಿಗೆ ಟಿಕೆಟ್ ಕೈತಪ್ಪಲು ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿವೈ ವಿಜಯೇಂದ್ರ ಕಾರಣ ಎಂದು ಆರೋಪ ಮಾಡಿದ್ದರು.

ಮಾಲೀಕಯ್ಯ ಗುತ್ತೇದಾರ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಉಪಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಡಿ ಕೆ ಶಿವಕುಮಾರ್, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯನ್ನು ವಿರೋಧಿಸಿ ಎರಡು ಪಕ್ಷದಲ್ಲಿ ವಿರೋಧದ ವಾತಾವರಣ ಇದೆ. ರಾಜ್ಯದ ಉದ್ದಗಳದಲ್ಲಿ ಕಾಂಗ್ರೆಸ್ ಪರವಾದ ಒಲವು ಇದೆ. ನಾವು ನುಡಿದಂತೆ ನಡೆದಿದ್ದೇವೆ ಎಂಬ ಭಾವನೆ ಜನರಲ್ಲಿದೆ. ಜನರ ಬದುಕನ್ನು ನೋಡಬೇಕು ಎಂದು ಗಮನದಲ್ಲಿ ಇಟ್ಟುಕೊಂಡು ಕಾಂಗ್ರೆಸ್ ಕಡೆಗೆ ಬೇರೆ ಪಕ್ಷದವರು ಬರುತ್ತಿದ್ದಾರೆ ಎಂದು ಹೇಳಿದರು.

ಕಲಬುರಗಿ ಕಾಂಗ್ರೆಸ್ ಅಧ್ಯಕ್ಷ ಎಂ ಮಲ್ಲಿಕಾರ್ಜುನ ಖರ್ಗೆ ಅವರ ತವರು ಜಿಲ್ಲೆ, ಖರ್ಗೆಯವರು 2009 ಮತ್ತು 2014 ರ ಲೋಕಸಭೆ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಿಂದ ಗೆದ್ದಿದ್ದರು. ಆದರೆ, 2019 ರ ಚುನಾವಣೆಯಲ್ಲಿ ಸೋಲು ಕಾಣುವಂತಾಗಿತ್ತು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಕಲಬುರಗಿ (ಗುಲ್ಬರ್ಗ) ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *