ನಮಗೆ ಗ್ಯಾರಂಟಿ ಸಹಾಯಕ…

ಸರ್ಕಾರದ ಗ್ಯಾರಂಟಿ ಯೋಜನೆಗಳು ನನ್ನ ಗೆಲುವಿಗೆ ಸಹಕಾರಿಯಾಗಲಿದೆ: ಗೀತಾ ಶಿವರಾಜ್’ಕುಮಾರ್ (ಸಂದರ್ಶನ)

ಬೆಂಗಳೂರು: 2014ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದ ಗೀತಾ ಶಿವರಾಜಕುಮಾರ್ ಅವರು, ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವಮೊಗ್ಗ ಕ್ಷೇತ್ರದಿಂದ ಮತ್ತೊಮ್ಮೆ ಸ್ಪರ್ಧೆಗಿಳಿದಿದ್ದು, ಬಿಜೆಪಿಯ ಬಿವೈ ರಾಘವೇಂದ್ರ ವಿರುದ್ಧ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

ಈ ನಡುವೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನಡೆಸಿದ ಸಂದರ್ಶನದಲ್ಲಿ ಮಾತನಾಡಿರುವ ಗೀತಾ ಅವರು, ಸರ್ಕಾರದ ಗ್ಯಾರಂಟಿ ಯೋಜನೆಗಳು ನನ್ನ ಗೆಲುವಿಗೆ ಸಹಕಾರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಂದರ್ಶನದ ಆಯ್ದ ಭಾಗಗಳು ಇಂತಿವೆ…

Q

ಪ್ರಚಾರ ಹೇಗೆ ನಡೆಯುತ್ತಿದೆ?

A

ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದ್ದು, ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನರು ಸಾಕಷ್ಟು ಪ್ರೀತಿಯನ್ನು ತೋರಿಸುತ್ತಿದ್ದಾರೆ. ಯಾವುದೇ ನಕಾರಾತ್ಮಕ ಪ್ರತಿಕ್ರಿಯೆಗಳು ಬಂದಿಲ್ಲ. ಮಹಿಳೆಯರು ಮತ್ತು ಯುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ನನ್ನ ಸಭೆಗಳಿಗೆ ಬರುತ್ತಿದ್ದಾರೆ. ದಿವಂಗತ ನನ್ನ ತಂದೆ ಬಂಗಾರಪ್ಪ ಅವರ ಅನುಪಸ್ಥಿತಿಯನ್ನು ಎಲ್ಲರೂ ನೆನೆಯುತ್ತಿದ್ದಾರೆ.

Q

ತಮ್ಮ ನೆಚ್ಚಿನ ನಟರನ್ನು ನೋಡಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಿರುವ ಸಾಧ್ಯತೆಗಳಿವೆ. ಇದು ಮತವಾಗಿ ಬದಲಾಗುತ್ತದೆ ಎಂದು ನೀವು ನಂಬುತ್ತೀರಾ?

A

2014ರ ಲೋಕಸಭಾ ಚುನಾವಣೆಯಲ್ಲಾದ ನನ್ನ ಹಿಂದಿನ ಅನುಭವದಂತೆ ಇದು ಮತಗಳಾಗಿ ಪರಿವರ್ತನೆಯಾಗುವ ಸಾಧ್ಯತೆಯಿದೆ. ನಟರ ಪ್ರಚಾರ ನನಗೆ ಸಹಾಯ ಮಾಡುವ ಸಾಧ್ಯತೆಯಿದೆ.

Q

2014ರಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪರಿಂದ ನೀವು ಸೋಲು ಕಂಡಿದ್ದಿರಿ. 2018ರ ಉಪಚುನಾವಣೆ ಹಾಗೂ 2019ರ ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಸಹೋದರ ಮಧು ಬಂಗಾರಪ್ಪ ಅವರನ್ನು ಬಿಜೆಪಿಯ ರಾಘವೇಂದ್ರ ಅವರು ಸೋಲಿಸಿದ್ದರು…?

A

ರಾಘವೇಂದ್ರ ಅವರ ಗೆಲುವಿನ ಓಟ ಈ ಬಾರಿ ಕೊನೆಗೊಳ್ಳಲಿದೆ ಎಂಬುದು ನನ್ನ ನಂಬಿಕೆ.

Q

ಸಂಸದರಾಗಿ ಆಯ್ಕೆಯಾದ ನಂತರ ನೀವು ಯಾವ ವಿಷಯಗಳಿಗೆ ಆದ್ಯತೆ ನೀಡುತ್ತೀರಿ?

A

ನನ್ನ ಸಹೋದರ ಮತ್ತು ಸ್ಥಳೀಯ ಶಾಸಕರು ಹಲವಾರು ಸಮಸ್ಯೆಗಳನ್ನು ಪರಿಹರಿಸುತ್ತಿದ್ದಾರೆ. ಸಂಂಸದೆಯಾದ ಬಳಿಕ ನನ್ನ ಮೊದಲ ಆದ್ಯತೆ ನೀರಿನ ಕೊರತೆ ನೀಗಿಸುವುದಾಗಿದೆ. ಸ್ಥಳೀಯವಾಗಿ ನಿಯಮಿತ ಬಸ್ ಸಂಪರ್ಕದ ಕೊರತೆಯಿಂದಾಗಿ ಚಿಕ್ಕ ಮಕ್ಕಳನ್ನು ಸಂಬಂಧಿಕರ ಮನೆ ಅಥವಾ ಹಾಸ್ಟೆಲ್‌ಗಳಿಗೆ ಓದಲು ಕಳುಹಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ರಸ್ತೆ ಸುಧಾರಣೆಯ ಉಪಕ್ರಮಗಳ ಜೊತೆಗೆ ಈ ಸಮಸ್ಯೆಯನ್ನು ಪರಿಹರಿಸಲಾಗುವುದು. ದೂರದ ಪ್ರದೇಶಗಳಲ್ಲಿ ಮೊಬೈಲ್ ಟವರ್‌ಗಳನ್ನು ಸ್ಥಾಪಿಸುವುದು. ಅರ್ಹ ವ್ಯಕ್ತಿಗಳಿಗೆ ಹಕ್ಕುಪತ್ರಗಳನ್ನು ನೀಡುವುದು. ನನ್ನ ಸಹೋದರ ಮತ್ತು ಇತರ ಶಾಸಕರ ಸಹಕಾರದೊಂದಿಗೆ ಹಲವಾರು ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶವಿದೆ.

Q

ಕಾಂಗ್ರೆಸ್ ಗ್ಯಾರಂಟಿ ಯೋಡನೆಗಳು ನಿಮಗೆ ಸಹಾಯ ಮಾಡುತ್ತವೆಯೇ?

A

ಗ್ಯಾರಂಟಿ ಯೋಜನೆಗಳು ನನ್ನ ಗೆಲುವಿಗೆ ಮಹತ್ತರ ಕೊಡುಗೆ ನೀಡುತ್ತವೆ ಎಂಬ ವಿಶ್ವಾಸ ನನಗಿದೆ. ಗ್ಯಾರಂಟಿ ಯೋಜನೆಗಳು ಶೇ.98 ಜನರನ್ನು ತಲುಪಿವೆ, ಉಳಿದ ಶೇ.2 ಅರ್ಹ ಜನರು ತಾಂತ್ರಿಕ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಫಲಾನುಭವಿಗಳು ನನ್ನ ಪರವಾಗಿ ಮತ ಚಲಾಯಿಸುವ ಸಾಧ್ಯತೆ ಇದೆ. ಮತದ ಮೂಲಕ ಜನರು ಪಕ್ಷಕ್ಕೆ ಧನ್ಯವಾದ ಹೇಳಲಿದ್ದಾರೆ.

Q

ಒಂದೊಮ್ಮೆ ಗೆದ್ದರೆ ಜನರ ಸಂಪರ್ಕಕ್ಕೆ ಸಿಗದೆ ಬೆಂಗಳೂರಿಗೆ ಮರಳುತ್ತೀರ ಎಂಬ ಆರೋಪವಿದೆ. ಈ ಆರೋಪಕ್ಕೆ ನೀವು ಹೇಗೆ ಪ್ರತಿಕ್ರಿಯಿಸುತ್ತೀರಿ?

A

ಕುಬಟೂರು ಮತ್ತು ಶಿವಮೊಗ್ಗ ನನ್ನ ಮನೆಗಳಿವೆ. ಇಲ್ಲ ಸಲ್ಲದ ಆರೋಪಗಳನ್ನು ಪ್ರಚಾರ ಮಾಡುವ ಬದಲು ಬಿಜೆಪಿ ನಾಯಕರು ಪ್ರಬುದ್ಧತೆ ಪ್ರದರ್ಶಿಸಬೇಕು. ರೈತರ ಸಮಸ್ಯೆಗಳು ಮತ್ತು ಹಿಂದುಳಿದವರ ಸಂಕಷ್ಟದ ಬಗ್ಗೆ ಬಿಜೆಪಿ ಮಾತನಾಡಬೇಕು. ಕ್ಷೇತ್ರ ಜನರೊಂದಿಗೆ ಇರುತ್ತೇನೆ. ಅವರ ಸಮಸ್ಯೆಗಳನ್ನು ಪರಿಹರಿಸುತ್ತೇನೆಂಬ ಭರವಸೆಯನ್ನು ನಾನು ನಿಮಗೆ ನೀಡುತ್ತಿದ್ದೇನೆ. ನಾನು ಎಂದಿಗೂ ನನ್ನ ಜವಾಬ್ದಾರಿಯಿಂದ ನುಣುಚಿಕೊಂಡಿಲ್ಲ, ಶಕ್ತಿಧಾಮ ಅನಾಥಾಶ್ರಮಕ್ಕೆ ವಾರಕ್ಕೆ ಎರಡು ಬಾರಿ ಭೇಟಿ ನೀಡುವುದು ಇದಕ್ಕೆ ಸಾಕ್ಷಿ ಎಂದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *