ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಮುಂಡಗೋಡ: ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ಮೋದಿ ಮೋದಿ ಎಂದು ಜೈಕಾರ ಹಾಕಿದ ಯುವಕರಿಗೆ ಅವರು ತಿರುಪತಿ ತಿಮ್ಮಪ್ಪನ ನಾಮ ಹಾಕಿದರು. ನರೇಂದ್ರ ಮೋದಿ ಸುಳ್ಳಿನ ಸರದಾರ, ಬಿಜೆಪಿ ಸುಳ್ಳು ಉತ್ಪಾದನಾ ಕೇಂದ್ರ; ಸುಳ್ಳೇ ಅವರ ಮನೆ ದೇವ್ರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ಇಲ್ಲಿ ಹಮ್ಮಿಕೊಂಡಿದ್ದ ಪ್ರಜಾಧ್ವನಿ- 2 ಸಮಾವೇಶದಲ್ಲಿ ಮಾತನಾಡಿದ ಅವರು, ನಿರುದ್ಯೋಗ ಸಮಸ್ಯೆ ಬಗೆಹರಿಸಲು ಹೊಸ ಕಾರ್ಖಾನೆ ಸ್ಥಾಪಿಸದೆ, ಬಂಡವಾಳ ಹೂಡಿಕೆಗೆ ಅವಕಾಶವನ್ನೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿಕೊಟ್ಟಿಲ್ಲ.‌ ಮೋದಿ ಬಹಳ ಸೊಗಸಾಗಿ ಮಾತನಾಡುತ್ತಾರೆ. ಇವತ್ತಿನವರೆಗೆ ಸುಳ್ಳುಗಳನ್ನೇ ಹೇಳಿ ಅವರು ಜನರನ್ನ ತಪ್ಪು ದಾರಿಗೆ ಎಳೆದು, ಜನರ ಭಾವನೆಗಳನ್ನ ಕೆರಳಿಸಿ, ಜಾತಿ- ಧರ್ಮದ ಹೆಸರಿನಲ್ಲಿ ದ್ವೇಷ ಹರಿಬಿಟ್ಟು ರಾಜಕಾರಣ ಮಾಡುತ್ತಿದ್ದಾರೆ. ಇದನ್ನ ಜನತೆ ಅರ್ಥ ಮಾಡಿಕೊಳ್ಳಬೇಕು. ಸುಳ್ಳು ಹೇಳುವ ಇಂಥವರನ್ನ ಮತ್ತೆ ನಂಬುತ್ತೀರಾ? ದಯಮಾಡಿ ನಂಬಬೇಡಿ. ಅವರು ದೇಶಕ್ಕೆ ಮಾಡಿದ ದೊಡ್ಡ ಮೋಸ ಸುಳ್ಳು ಎಂದರು.

ರೈತರ ಆದಾಯ ದುಪ್ಪಟ್ಟು ಮಾಡುತ್ತೇನೆಂದವರು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದರು‌. ಬಡವರು ಹಸಿವಿನಿಂದ ಮಲಗಬಾರದು, ಕರ್ನಾಟಕ ಹಸಿವು ಮುಕ್ತ ಮಾಡಬೇಕೆಂದು ಅನ್ನಭಾಗ್ಯದಲ್ಲಿ ಅಕ್ಕಿ ಕೊಟ್ಟೆ. ಬಿಜೆಪಿ ಸರ್ಕಾರ ಬಂದಾಗ ಯಡಿಯೂರಪ್ಪ ಅದರಲ್ಲಿ ೨ ಕೆಜಿ ಇಳಿಸಿದರು. ಅಧಿಕಾರಕ್ಕೆ ಬಂದ ತಕ್ಷಣವೇ ಕ್ಯಾಬಿನೆಟ್‌ನಲ್ಲಿ ಡಿಸೈಡ್ ಮಾಡಿ ಗ್ಯಾರಂಟಿ ಯೋಜನೆಗಳನ್ನ ಜಾರಿಗೆ ತಂದೆವು. ಆದರೆ ಆಗಲೂ ಅನ್ನಭಾಗ್ಯಕ್ಕೆ‌ ಅಕ್ಕಿ ಕೊಡದೆ ಜನರಿಗೆ ದ್ರೋಹ ಮಾಡಿದರು ಎಂದರು.

ಈ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗೆ ಆಶೀರ್ವಾದ ಮಾಡಬೇಕು. ನಿಮ್ಮೆಲ್ಲರ ಧ್ವನಿಯಾಗಿ ಕರ್ನಾಟಕದ ಪರವಾಗಿ ಲೋಕಸಭೆಯಲ್ಲಿ ಮಾತನಾಡಬೇಕೆಂದು ಮಾತನಾಡಲು ಅವಕಾಶ ಮಾಡಿಕೊಡಿ. ಈ ಜಿಲ್ಲೆಯ ಜನ ರಾಜಕೀಯವಾಗಿ ಬುದ್ಧಿವಂತರು. ಪ್ರಬುದ್ಧರು. ದೇಶದ ರಾಜಕೀಯ ವಿಶ್ಲೇಷಣೆ ಮಾಡಬಲ್ಲರು. ಕೊಟ್ಟ ಮಾತನ್ನ ಉಳಿಸಿಕೊಂಡಿರುವವರು ಯಾರು, ನೀಡಿರುವ ಭರವಸೆ ಈಡೇರಿಸದ ಪಕ್ಷ ಯಾವುದೆಂದು ಗುರುತಿಸುವ ಸಾಮರ್ಥ್ಯ ನಿಮಗಿದೆ ಎಂದು ಭಾವಿಸಿದ್ದೇನೆ ಎಂದರು.

೧೦ ವರ್ಷಗಳಿಂದ ಪ್ರಧಾನಿಯಾಗಿರುವ ನರೇಂದ್ರ ಮೋದಿ, ನುಡಿದಂತೆ ನಡೆದಿದ್ದಾರೆಂದು ಅನಿಸಿದರೆ ಬೆಂಬಲಿಸಿ‌. ನುಡಿದಂತೆ ನಡೆದಿಲ್ಲವೆಂದಾದರೆ ತಿರಸ್ಕರಿಸಿ.
ಸರ್ವರಿಗೂ ಸಮಪಾಲು ಸಮಬಾಳು ನಮ್ಮ ಧ್ಯೇಯ. ಸಂವಿಧಾನ ರಕ್ಷಣೆಗೆ, ಪ್ರಜಾಪ್ರಭುತ್ವ ಉಳಿಸಲು ಕಾಂಗ್ರೆಸ್ ಬೆಂಬಲಿಸಬೇಕು. ಕಾಂಗ್ರೆಸ್ ಉಳಿಯದಿದ್ದರೆ ನಾವ್ಯಾರೂ ಉಳಿಯಲು ಸಾಧ್ಯವಿಲ್ಲ ಎಂದರು.



ಡಾ.ಅಂಜಲಿ ನಿಂಬಾಳ್ಕರ್ ಇದೇ ಉತ್ತರಕನ್ನಡ ಕ್ಷೇತ್ರದವರು. ಮರಾಠ ಹೆಣ್ಣುಮಗಳಿಗೆ ಕೊಡಬೇಕೆಂದು ಈ ಬಾರಿ ಅವರಿಗೆ ಟಿಕೆಟ್ ನೀಡಿದ್ದೇವೆ. ಅವರ ಕೈಹಿಡಿಬೇಕು, ಆಕೆಗೆ ಶಕ್ತಿ ನೀಡಬೇಕಿ. ವೈದ್ಯರಾಗಿದ್ದ ಅವರು ನಿಮ್ಮ ಕಷ್ಟಗಳನ್ನ ಅರಿತಿದ್ದಾರೆ.

  • ಸಿದ್ದರಾಮಯ್ಯ, ‌ಮುಖ್ಯಮಂತ್ರಿ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *